ಉಡುಪಿ: ಸರಕಾರವು, ಬೆಂಗಳೂರಿನಲ್ಲಿ ಗಲಭೆಗೆ ಕಾರಣವಾದ ಸಂಘಟನೆಯನ್ನು ಶೀಘ್ರವೇ ನಿಷೇದಿಸಬೇಕು. ಪಿಎಫ್ಐ, ಎಸ್ಡಿಪಿಐ ನ ಎಲ್ಲಾ ರಾಜ್ಯ ನಾಯಕರನ್ನು ಬಂಧಿಸಬೇಕು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ.
ಈ ಬಗ್ಗೆ ಉಡುಪಿಯ ಪ್ರೆಸ್ ಕ್ಲಬ್ನಲ್ಲಿ ಮಾತನಾಡಿದ ಬಜರಂಗ ದಳ ರಾಜ್ಯ ಸಂಚಾಲಕ ಸುನಿಲ್ ಕೆ.ಆರ್ ಅವರು, ಬೆಂಗಳೂರಿನ ಗಲಭೆಗೆ ಕಾರಣವಾದ ಸಂಘಟನೆಯನ್ನು ಸರಕಾರ ಶೀಘ್ರವೇ ನಿಷೇಧಿಸಬೇಕು. ಪಾಕಿಸ್ತಾನದ ಐಎಸ್ಐ ಹಾಗೂ ಭಯೋತ್ಪದಕ ಸಂಘಟನೆಯು ಕುಮ್ಮಕ್ಕು ನೀಡುತ್ತಿದೆ. ಈ ಸಂಘಟನೆಗಳನ್ನು ಸರಕಾರ ಕೂಡಲೇ ಬಂಧಿಸಬೇಕು. ಅಲ್ಲದೇ, ಈ ಸಂಘಟನೆಗಳ ನಾಯಕರನ್ನೂ ಕೂಡಾ ಬಂಧಿಸಬೇಕು ಎಂದು ತಿಳಿಸಿದ್ದಾರೆ.
ಶಾಸಕ ಅಖಂಡ ಶ್ರೀನಿವಾಸ್ ಅವರೊಂದಿಗೆ ನಾವಿದ್ದೇವೆ. ಅವರು ಭಯಪಡುವ ಅಗತ್ಯವಿಲ್ಲ. ಈ ಪ್ರಕರಣವನ್ನು ಎನ್ಐಎಗೆ ಹಸ್ತಾಂತರಿಸಲು ಆಯಾ ಜಿಲ್ಲಾ ಆಯೋಗಗಳಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಿದೆ ಎಂದು ಹೇಳಿದ್ದಾರೆ.
ಕರ್ನಾಟಕದ ಗೃಹ ಸಚಿವರ ಬದಲಾವಣೆಯ ಕುರಿತು ಮಾಧ್ಯಮ ಪ್ರಶ್ನೆಗೆ ಉತ್ತರಿಸಿದ ಸುನೀಲ್ ಕೆ.ಆರ್, ಗೃಹ ಸಚಿವರ ಬದಲಾವಣೆಯನ್ನು ಸರ್ಕಾರದ ತೀರ್ಮಾನಕ್ಕೆ ಬಿಡಲಾಗಿದೆ. ನಾವು ಬೆಂಗಳೂರಿನಲ್ಲಿ ನಡೆದ ಘಟನೆಯನ್ನು ಖಂಡಿಸುತ್ತೇವೆ ಹಾಗೂ ಅಪರಾಧಿಗಳ ವಿರುದ್ದ ಕಠಿಣ ಕ್ರಮಕೈಗೊಳ್ಳುವಂತೆ ಮನವಿ ಮಾಡುತ್ತಿದ್ದೇವೆ ಎಂದಿದ್ದಾರೆ.
ಈ ಸಂದರ್ಭ, ಉಡುಪಿ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ವಿಷ್ಣುಮೂರ್ತಿ ಆಚಾರ್ಯ, ಕಾರ್ಯದರ್ಶಿ ದಿನೇಶ್ ಮೆಂಡನ್, ಬಜರಂಗದಳದ ಜಿಲ್ಲಾ ಸಂಚಾಲಕ ಸುರೇಂದ್ರ ಕೋಟೇಶ್ವರ ಹಾಗೂ ಇತರರು ಉಪಸ್ಥಿತರಿದ್ದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…