ನವದೆಹಲಿ: ಕೇಂದ್ರ ಕಾರ್ಮಿಕ ಸಚಿವಾಲಯವು ಏಕೀಕೃತ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಇನ್ಮುಂದೆ ಪಿಂಚಣಿದಾರರು ದೇಶದ ಯಾವುದೇ ರಾಜ್ಯದ, ಯಾವುದೇ ಬ್ಯಾಂಕಿನ ಶಾಖೆಯಲ್ಲಿ ತಮ್ಮ ಪಿಂಚಣಿ ಪಡೆದುಕೊಳ್ಳಬಹುದಾಗಿದೆ.
ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ) 1995ರ ಉದ್ಯೋಗಿಗಳ ಪಿಂಚಣಿ ಯೋಜನೆ ಅಡಿಯಲ್ಲಿ ಹೊಸ ಕೇಂದ್ರೀಕೃತ ಪಿಂಚಣಿ ಪಾವತಿ ವ್ಯವಸ್ಥೆಯನ್ನು (ಸಿಪಿಪಿಎಸ್) ಹೊರತಂದಿದೆ ಎಂದು ಕಾರ್ಮಿಕ ಸಚಿವಾಲಯವು ತಿಳಿಸಿದೆ. ಇಪಿಎಫ್ಒ ವ್ಯಾಪ್ತಿಗೆ ಬರುವ 68 ಲಕ್ಷ ಪಿಂಚಣಿದಾರರಿಗೆ ಇದರಿಂದ ಲಾಭ ಆಗಲಿದೆ.
ಪಿಂಚಣಿದಾರರು ಪರಿಶೀಲನೆಗಾಗಿ ಇನ್ಮುಂದೆ ಬ್ಯಾಂಕ್ ಶಾಖೆಗೆ ಹೋಗುವ ಅವಶ್ಯಕತೆ ಇಲ್ಲ. ಬಿಡುಗಡೆಯಾಗುವ ಪಿಂಚಣಿ ಮೊತ್ತ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ. ಪಿಂಚಣಿದಾರರು ಒಂದು ಕಡೆಯಿಂದ ಮತ್ತೊಂದು ಕಡೆಗೆ ಹೋಗಿ ನೆಲೆಸಿದರೂ ತಮ್ಮ ಬ್ಯಾಂಕ್ ಬ್ರಾಂಚ್ ಬದಲಿಸುವ ಅಗತ್ಯವಿಲ್ಲ. ಅದಕ್ಕೆ ಬದಲಾಲಾಗಿ ದೇಶದ ಯಾವುದೇ ರಾಜ್ಯ, ಬ್ಯಾಂಕ್, ಶಾಖೆಯಿಂದ ಬೇಕಾದರೂ ಹಣ ಪಡೆಯಬಹುದು.
ಇದಕ್ಕೂ ಮುನ್ನ 1995ರ ಪಿಂಚಣಿ ಯೋಜನೆ ಜಾರಿಯಲ್ಲಿತ್ತು. ಅದರ ಪ್ರಕಾರ, ವಿಕೇಂದ್ರೀಕೃತ ವ್ಯವಸ್ಥೆಯಲ್ಲಿ ಪ್ರತಿ ವಲಯ ಅಥವಾ ಪ್ರಾಂತ್ಯದ ಇಪಿಎಫ್ಒ ಕಚೇರಿಗಳು 3-4 ಬ್ಯಾಂಕ್ಗಳೊಂದಿಗೆ ಪ್ರತ್ಯೇಕ ಒಪ್ಪಂದ ಮಾಡಿಕೊಂಡಿದ್ದು, ಅವುಗಳ ಮೂಲಕವೇ ಹಣ ಪಡೆಯಬೇಕಿತ್ತು.
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…