ನವದೆಹಲಿ: ಕೇಂದ್ರ ಕಾರ್ಮಿಕ ಸಚಿವಾಲಯವು ಏಕೀಕೃತ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಇನ್ಮುಂದೆ ಪಿಂಚಣಿದಾರರು ದೇಶದ ಯಾವುದೇ ರಾಜ್ಯದ, ಯಾವುದೇ ಬ್ಯಾಂಕಿನ ಶಾಖೆಯಲ್ಲಿ ತಮ್ಮ ಪಿಂಚಣಿ ಪಡೆದುಕೊಳ್ಳಬಹುದಾಗಿದೆ.
ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ) 1995ರ ಉದ್ಯೋಗಿಗಳ ಪಿಂಚಣಿ ಯೋಜನೆ ಅಡಿಯಲ್ಲಿ ಹೊಸ ಕೇಂದ್ರೀಕೃತ ಪಿಂಚಣಿ ಪಾವತಿ ವ್ಯವಸ್ಥೆಯನ್ನು (ಸಿಪಿಪಿಎಸ್) ಹೊರತಂದಿದೆ ಎಂದು ಕಾರ್ಮಿಕ ಸಚಿವಾಲಯವು ತಿಳಿಸಿದೆ. ಇಪಿಎಫ್ಒ ವ್ಯಾಪ್ತಿಗೆ ಬರುವ 68 ಲಕ್ಷ ಪಿಂಚಣಿದಾರರಿಗೆ ಇದರಿಂದ ಲಾಭ ಆಗಲಿದೆ.
ಪಿಂಚಣಿದಾರರು ಪರಿಶೀಲನೆಗಾಗಿ ಇನ್ಮುಂದೆ ಬ್ಯಾಂಕ್ ಶಾಖೆಗೆ ಹೋಗುವ ಅವಶ್ಯಕತೆ ಇಲ್ಲ. ಬಿಡುಗಡೆಯಾಗುವ ಪಿಂಚಣಿ ಮೊತ್ತ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ. ಪಿಂಚಣಿದಾರರು ಒಂದು ಕಡೆಯಿಂದ ಮತ್ತೊಂದು ಕಡೆಗೆ ಹೋಗಿ ನೆಲೆಸಿದರೂ ತಮ್ಮ ಬ್ಯಾಂಕ್ ಬ್ರಾಂಚ್ ಬದಲಿಸುವ ಅಗತ್ಯವಿಲ್ಲ. ಅದಕ್ಕೆ ಬದಲಾಲಾಗಿ ದೇಶದ ಯಾವುದೇ ರಾಜ್ಯ, ಬ್ಯಾಂಕ್, ಶಾಖೆಯಿಂದ ಬೇಕಾದರೂ ಹಣ ಪಡೆಯಬಹುದು.
ಇದಕ್ಕೂ ಮುನ್ನ 1995ರ ಪಿಂಚಣಿ ಯೋಜನೆ ಜಾರಿಯಲ್ಲಿತ್ತು. ಅದರ ಪ್ರಕಾರ, ವಿಕೇಂದ್ರೀಕೃತ ವ್ಯವಸ್ಥೆಯಲ್ಲಿ ಪ್ರತಿ ವಲಯ ಅಥವಾ ಪ್ರಾಂತ್ಯದ ಇಪಿಎಫ್ಒ ಕಚೇರಿಗಳು 3-4 ಬ್ಯಾಂಕ್ಗಳೊಂದಿಗೆ ಪ್ರತ್ಯೇಕ ಒಪ್ಪಂದ ಮಾಡಿಕೊಂಡಿದ್ದು, ಅವುಗಳ ಮೂಲಕವೇ ಹಣ ಪಡೆಯಬೇಕಿತ್ತು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…