ಕಲಬುರಗಿ: ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ದೂರು ಬಂದ ತಕ್ಷಣವೇ ಕೂಲಂಕುಶ ತನಿಖೆಗೆ ನಾವೇ ಸಿಐಡಿ ತನಿಖೆಗೆ ನೀಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ನಗರದ ಡಿ.ಆರ್ .ಮೈದಾನದಲ್ಲಿ ಮಾತನಾಡಿದ ಅವರು ಉತ್ತರ ಪತ್ರಿಕೆಯಲ್ಲಿ ವ್ಯತ್ಯಾಸ ಬಂದಿದ್ದರಿಂದ ಪ್ರಕರಣವನ್ನು ಸಿಐಡಿಗೆ ನಾವೇ ನೀಡಿದ್ದೇವೆ.ಸಿಐಡಿ ಹಲವಾರು ತಂಡದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದರು.
ಸದ್ಯ ಶಿಕ್ಷಣ ಸಂಸ್ಥೆ ಮುಖ್ಯಸ್ಥರು ಪರಾರಿಯಾಗಿದ್ದು, ಎಂ.ವೈ ಪಾಟೀಲ್ ಹಾಗೂ ಗನ್ ಮ್ಯಾನ್ ಹಯ್ಯಾಳಿ ದೇಸಾಯಿ ಅವರಿಗೆ ಸಹಾಯ ಮಾಡಿದ ರುದ್ರೇಗೌರ ಪಾಟೀಲ್ ಬಂಧನವಾಗಿದೆ ಎಂದರು.ಎಮ್ ವೈ ಪಾಟೀಲ್ ಗನ್ ಮ್ಯಾನ್ ಹಯ್ಯಾಳಿ ದೇಸಾಯಿ ಮತ್ತು ಅವರಿಗೆ ಸಹಾಯ ಮಾಡಿದ ರುದ್ರಗೌಡ ಪಾಟೀಲ್ ರ ಬಂಧನವಾಗಿದೆ. ಇನ್ನಷ್ಟು ಆಳವಾಗಿ ತನಿಖೆ ಮಾಡಲು ಸೂಚಿಸಲಾಗಿದೆ.ಯುಪಿಎಸ್ಸಿ ಮಾದರಿಯಲ್ಲಿ ಪರೀಕ್ಷೆ ನಡೆಯಬೇಕು ಅನ್ನೋ ರೀತಿ ವ್ಯವಸ್ಥೆ ಮಾಡಲಾಗಿತ್ತುಇಂತಹ ಪಾರದರ್ಶಕತೆ ಇದ್ದಾಗಲು ಅಕ್ರಮವಾಗಿ ಪರೀಕ್ಷೆ ಬರೆದಿರುವುದು ಅಚ್ಚರಿಯಾಗಿದೆ ಎಂದರು.
ಇನ್ನು ಪ್ರಕರಣದಲ್ಲಿ ಕೇಳಿ ಬಂದ ಮಹಿಳೆ ದಿವ್ಯಾ ಹಾಗರಗಿ ನಮ್ಮ ಪಕ್ಷದಲ್ಲಿ ಯಾವುದೇ ಜವಬ್ದಾರಿ ಹೊಂದಿಲ್ಲ ಎಂದು ಸ್ಪಷ್ಟಪಡಿಸಿದರು.ಯಾರೇ ತಪ್ಪು ಮಾಡಿದ್ರು ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ.ಬೇರೆ ಪಕ್ಷದವರು ಯಾವ ರೀತಿ ಈ ಹಿಂದೆ ಪ್ರಕರಣ ಮುಚ್ಚಿ ಹಾಕಿದ್ದಾರೆ ಎಂಬುದು ಗೊತ್ತಿದೆ.ಮರು ಪರೀಕ್ಷೆ ನಡೆಸಬೇಕಾ ಅಥವಾ ಬೇಡವಾ ಅನ್ನೋದರ ಬಗ್ಗೆ ಮಧ್ಯಂತರ ವರದಿ ಮೇಲೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…