ರಾಯಚೂರು: ಜಿಲ್ಲೆಯ ಮಾನ್ವಿ ತಾಲೂಕಿನ ಕುರಡಿ ಗ್ರಾಮದಲ್ಲಿ ಪಿತ್ರಾರ್ಜಿತ ಆಸ್ತಿ ವಿವಾದ ಹಿನ್ನೆಲೆ ತಮ್ಮಂದಿರಿಂದಲೇ ಅಣ್ಣನ ಕೊಲೆ ನಡೆದಿದೆ.
ಸಂಜಯ್ ಕುರ್ಡಿಕರ್ (38) ಕೊಲೆಯಾದ ವ್ಯಕ್ತಿ. ಪಿತ್ರಾರ್ಜಿತ ಆಸ್ತಿ ಅಣ್ಣತಮ್ಮಂದಿರಿಗೆ ಹಂಚಿಕೆ ಆಗಿರಲಿಲ್ಲ. ನ್ಯಾಯಾಲಯ ಮೆಟ್ಟಿಲು ಏರಿ ತನ್ನ ಪಾಲಿನ ಆಸ್ತಿಯನ್ನ ಸಂಜಯ್ ಪಡೆದಿದ್ದ. ಇದರಿಂದ ಆಕ್ರೋಶಗೊಂಡಿದ್ದ ಉಳಿದ ಸಹೋದರರು ಅಣ್ಣ ಸಂಜಯ್ ಜೊತೆ ಜಗಳ ಮಾಡಿದ್ದಾರೆ.
ಗ್ರಾಮದ ದೇವಿ ವೃತ್ತದಲ್ಲಿ ಹಾಡುಹಗಲೇ ತಮ್ಮಂದಿರು ಅಣ್ಣನಿಗೆ ಕಬ್ಬಿಣದ ರಾಡ್, ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ್ದಾರೆ. ಆಸ್ತಿ ಜಗಳ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯವಾಗಿದೆ.
ಆರೋಪಿಗಳಾದ ಸಂಜೀವ್, ಸಂಘರ್ಷ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಳಿದ ಆರು ಜನ ಆರೋಪಿಗಳು ಪರಾರಿಯಾಗಿದ್ದಾರೆ. ಘಟನೆ ಹಿನ್ನೆಲೆ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ವಿಚಾರಣೆ ಮುಂದುವರೆಸಿದ್ದಾರೆ. ಉಳಿದ ಆರೋಪಿಗಳಿಗಾಗಿ ಪತ್ತೆ ಕಾರ್ಯ ನಡೆಸುತ್ತಿದ್ದಾರೆ
ಉಳ್ಳಾಲ :ಲೈನ್ ಆಫ್ ಮಾಡದೆ ಟ್ರಾನ್ಸ್ ಫಾರ್ಮರ್ ಏರಿದ ಲೈನ್ ಮೆನ್; ವಿದ್ಯುತ್ ಪ್ರವಹಿಸಿ ಸಾವು ಉಳ್ಳಾಲ : ಜಿಒಎಸ್…
ಸಚಿವ ಸಂಪುಟ ವಿಸ್ತರಣೆ: ಎಸ್.ಮಲ್ಲಿಕಾರ್ಜುನ್ ಸೇರ್ಪಡೆ ; ಮಂಕಾಳ ವೈದ್ಯ ಹೆಸರು ಕೈಬಿಟ್ಟ ಎಐಸಿಸಿ ಬೆಂಗಳೂರು: ಕರ್ನಾಟಕ ಸಚಿವ ಸಂಪುಟ…
ಮಂಗಳೂರು-ಬೆಂಗಳೂರು ರೈಲು ಪ್ರಯಾಣಿಕರೇ ಗಮನಿಸಿ: ಹಲವು ರೈಲುಗಳ ಸಂಚಾರ ಬಂದ್ ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ಎಡಕುಮೇರಿ ಮತ್ತು ಶಿರಿಬಾಗಿಲು…
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…