Featured

ಪುಂಜಾಲಕಟ್ಟೆ : ಪತಿಗೆ ತಿಳಿಯದಂತೆ ಪತ್ನಿ ಎರಡನೇ ವಿವಾಹ : ಕೋರ್ಟ್‌ ಮೊರೆ ಹೋದ ಪತಿ – Vishwanews24

ಪುಂಜಾಲಕಟ್ಟೆ : ಪತಿಗೆ ತಿಳಿಯದಂತೆ ಪತ್ನಿ ಎರಡನೇ ವಿವಾಹ : ಕೋರ್ಟ್‌ ಮೊರೆ ಹೋದ ಪತಿ

ಪುಂಜಾಲಕಟ್ಟೆ: ಪತಿಗೆ ತಿಳಿಯದಂತೆ ಪತ್ನಿ ಎರಡನೇ ವಿವಾಹವಾದ ಬಗ್ಗೆ ಪತಿ ನ್ಯಾಯಾಲಯಕ್ಕೆ ದೂರು ನೀಡಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ನ್ಯಾಯಾಲಯ ಪೊಲೀಸ್‌ ಠಾಣೆಗೆ ಆದೇಶಿಸಿದ ಘಟನೆ ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.

ಪಣಕಜೆ, ಮಂಡಾಡಿ ನಿವಾಸಿ ಉದಯ ನಾಯಕ್‌ ಅವರು ಈ ಬಗ್ಗೆ ನ್ಯಾಯಾಲಯಕ್ಕೆ ದೂರು ನೀಡಿದ್ದು, ಬೆಳ್ತಂಗಡಿ ಸಿಜೆ ಮತ್ತು ಜೆಎಮ್‌ಎಫ್ಸಿ ನ್ಯಾಯಾಲಯ ಪ್ರಕರಣ ದಾಖಲಿಸಿ ವರದಿ ಸಲ್ಲಿಸುವಂತೆ ಪುಂಜಾಲಕಟ್ಟೆ ಪೊಲೀಸ್‌ ಠಾಣೆಗೆ ಆದೇಶಿಸಿದೆ.

ಉದಯ ನಾಯಕ್‌ ಅವರು ಅನಿತಾ ನಾಯಕ್‌ ಅವರನ್ನು 2018ರಲ್ಲಿ ಮದುವೆಯಾಗಿದ್ದು, ಮದುವೆ ಬಳಿಕ ಜೂನ್‌ 2020ರ ತನಕ ಇಬ್ಬರೂ ಒಟ್ಟಿಗೆ ಇದ್ದರು. ಬಳಿಕ ಹಲವಾರು ಅಡೆತಡೆಗಳು ಬಂದಿದ್ದರಿಂದ ಉದಯ ನಾಯಕ್‌ ಡೈವೋರ್ಸ್‌ ಪಿಟಿಷನ್‌ ಸಲ್ಲಿಸಿದ್ದರು. ಈ ಪ್ರಕರಣವು ವಿಚಾರಣೆಯಲ್ಲಿರುವಾಗಲೇ ಅನಿತಾ ಅವರು ಹರಿಕೃಷ್ಣ ಗಣಪತ್‌ ರಾವ್‌ ಕೀಳು ಅವರ ಜತೆ ವಿವಾಹವಾಗಿರುವುದಾಗಿ ಉದಯ ನಾಯಕ್‌ ಆರೋಪಿಸಿದ್ದಾರೆ. ಈ ಮದುವೆಯು ಕಾನೂನು ಬಾಹಿರವಾಗಿದ್ದರಿಂದ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕಾಗಿ ಕೋರಿದ್ದಾರೆ. ಪುಂಜಾಲಕಟ್ಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

5 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

8 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

8 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

8 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

9 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

9 hours ago