Featured

ಪುಂಜಾಲಕಟ್ಟೆ : ಲಾರಿ ಪಲ್ಟಿ ; ಓರ್ವ ಸ್ಥಳದಲ್ಲಿಯೇ ಸಾವು, ಮತ್ತಿಬ್ಬರು ಗಂಭೀರ – vishwanews24

ಪುಂಜಾಲಕಟ್ಟೆ : ಮಗುಚಿ ಬಿದ್ದ ಲಾರಿ ; ಓರ್ವ ಸ್ಥಳದಲ್ಲಿಯೇ ಸಾವು, ಮತ್ತಿಬ್ಬರು ಗಂಭೀರ

ಪುಂಜಾಲಕಟ್ಟೆ,: ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಹಲವು ಕಡೆ ಅನಾಹುತ ಸಂಭವಿಸುತ್ತಿದೆ. ಹಲವೆಡೆ ಗುಡ್ಡ ಕುಸಿದು ರಸ್ತೆಗಳು ಬಂದ್ ಆಗಿವೆ. ಇನ್ನೊಂದೆಡೆ ಪುಂಜಾಲಕಟ್ಟೆ ಬಳಿ ಲಾರಿಯೊಂದು ಮಗುಚಿ ಬಿದ್ದ ಪರಿಣಾಮ ಓರ್ವ ಸ್ಥಳದಲ್ಲಿಯೇ ಮೃತಪಟ್ಟು, ಇನ್ನಿಬ್ಬರು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜು.19ರ ಶುಕ್ರವಾರ ಬೆಳಗ್ಗೆ ಈ ಘಟನೆ ನಡೆದಿದ್ದು ಮೃತರನ್ನು ಫರಂಗಿಪೇಟೆ ನಿವಾಸಿ ಕಾರ್ತಿಕ್ ಎಂದು ಗುರುತಿಸಲಾಗಿದ್ದು, ಗಾಯಗೊಂಡವರ ಹೆಸರು, ಮಾಹಿತಿ ಲಭ್ಯವಾಗಿಲ್ಲ. ಗಾಯಗೊಂಡವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾವಳಪಡೂರು ಗ್ರಾಮದ ಮಧ್ವ ಎಂಬಲ್ಲಿನ ಶಾಮಿಯಾನ ಅಂಗಡಿಗೆ ಸೇರಿದ ಲಾರಿ ಇದಾಗಿದ್ದು, ಐಶರ್ ಲಾರಿಯಲ್ಲಿ ಶಾಮಿಯಾನದ ಸಾಮಾಗ್ರಿಗಳನ್ನು ಬೆಳ್ತಂಗಡಿ ಕಡೆಗೆ ಕೊಂಡುಹೋಗುತ್ತಿದ್ದ ವೇಳೆ ಪುಂಜಾಲಕಟ್ಟೆ ಶ್ರೀ ರಾಮಾಂಜನೇಯ ಭಜನಾ ಮಂದಿರದ ಬಳಿಯ ತಿರುವಿನಲ್ಲಿ ಲಾರಿ ಪಲ್ಟಿಯಾಗಿದೆ.

ಲಾರಿಯೊಳಗೆ ಒಟ್ಟು ಹತ್ತು ಮಂದಿ ಇದ್ದರು ಎನ್ನಲಾಗಿದ್ದು ಲಾರಿ ‌ಪಲ್ಟಿಯಾಗಿ ಸುಮಾರು ಸಮಯ ಲಾರಿ ಅಡಿಯಲ್ಲಿ ಸಿಲುಕಿಕೊಂಡಿದ್ದ ಯುವಕರನ್ನು ಸ್ಥಳೀಯ ಯುವಕರು ಹರಸಾಹಸ ಪಟ್ಟು ಹೊರಗೆ ತೆಗೆದಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

11 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago