Featured

ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥರ ನಾಲ್ಕನೇ ಪರ್ಯಾಯ ಉತ್ಸವಕ್ಕೆ ಸಜ್ಜಾದ ಶ್ರೀಕೃಷ್ಣನೂರು – vishwanews24

ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥರ ನಾಲ್ಕನೇ ಪರ್ಯಾಯ ಉತ್ಸವಕ್ಕೆ ಸಜ್ಜಾದ ಶ್ರೀಕೃಷ್ಣನೂರು

ಉಡುಪಿ: ಶ್ರೀಕೃಷ್ಣನೂರು ಉಡುಪಿಯು ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥರ ನಾಲ್ಕನೇ ಪರ್ಯಾಯ ಉತ್ಸವಕ್ಕೆ ಸಜ್ಜಾಗಿದೆ.

ಶ್ರೀಕೃಷ್ಣ ಮಠದ ರಥಿಬೀದಿ ಸುತ್ತ ಮುತ್ತಲಿನ ಪರಿಸರವಲ್ಲದೆ ನಗರದ ಬಹುತೇಕ ಪ್ರಮುಖ ಸ್ಥಳಗಳು ಹಾಗೂ ಉಡುಪಿ ನಗರಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗಗಳೆಲ್ಲ ವಿದ್ಯುತ್‌ ದೀಪಗಳಿಂದ ಅಲಂಕೃತವಾಗಿವೆ. ಬುಧವಾರ ಮಧ್ಯರಾತ್ರಿಯ ಬಳಿಕ ಕಾಪುವಿನ ದಂಡತೀರ್ಥದಲ್ಲಿ ಮಿಂದು ಬರುವ ಶ್ರೀಗಳ ಸ್ವಾಗತಕ್ಕೆ ದಂಡತೀರ್ಥ ಮಠದಿಂದ ಉಡುಪಿ ವರೆಗೆ ರಾಷ್ಟ್ರೀಯ ಹೆದ್ದಾರಿಯುದ್ದಕ್ಕೂ ವಿದ್ಯುದ್ದೀಪಗಳ ಅಲಂಕಾರವನ್ನು ಅಳವಡಿಸಲಾಗಿದೆ. ಇದು ಈ ಬಾರಿಯ ವಿಶೇಷ.

ನಗರದ ವಿವಿಧೆಡೆ ಕೇಸರಿ ಬಾವುಟಗಳು ರಾರಾಜಿಸತೊಡಗಿವೆ. ಪರ್ಯಾಯ ಮೆರವಣಿಗೆ ನಡೆಯುವ ಜೋಡುಕಟ್ಟೆ ಯಿಂದ ರಥಬೀದಿವರೆಗೆ ವಿಶೇಷ ಅಲಂಕಾರಗಳು, ವಿವಿಧ ಸ್ವಾಗತ ಕಮಾನುಗಳನ್ನು ರಚಿಸಲಾಗಿದೆ. ಒಟ್ಟಿ ನಲ್ಲಿ ಇಡೀ ನಗರವೇ ಸಂಭ್ರಮವನ್ನು ಮೈದುಂಬಿಕೊಂಡಿದೆ.

252ನೆಯ ಪರ್ಯಾಯ ಅವಧಿ ಯ ಶ್ರೀಕೃಷ್ಣನ ಪೂಜೆಗೆ ಪುತ್ತಿಗೆ ಮಠದ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು ಅಣಿಯಾಗುತ್ತಿದ್ದಾರೆ. ಜ. 18 ರ ಬೆಳಗ್ಗೆ ಪರ್ಯಾಯ ಮೆರವಣಿಗೆ ಹಾಗೂ ದರ್ಬಾರ್‌ ನಡೆಯಲಿದ್ದು, ಜ. 17ರ ಬುಧವಾರ ಬೆಳಗ್ಗೆಯಿಂದಲೇ ಭಕ್ತರು ತಂಡೋ ಪತಂಡವಾಗಿ ನಗರಕ್ಕೆ ಆಗಮಿಸುವರು. ಹಾಗಾಗಿ ಜ. 17ರಿಂದ ತೊಡಗಿ 18ರ ಬೆಳಗಿನ ಜಾವದವರೆಗೂ ಉಡುಪಿ ಎಚ್ಚೆತ್ತಿರಲಿದೆ.

ತಮ್ಮ ಪರ್ಯಾಯ ಪೂರ್ವ ಸಂಚಾರವನ್ನು ಮುಗಿಸಿ ಪರ್ಯಾಯ ಪೀಠ ವನ್ನೇ ರುವ ಶ್ರೀ ಸುಗುಣೇಂದ್ರ ತೀರ್ಥರು ಜ. 8 ರಂದು ಪುರ ಪ್ರವೇಶ ಮಾಡಿದರು. ಪೌರ ಸಮ್ಮಾನದ ಮೂಲಕ ಅವರನ್ನು ನಾಗರಿಕರು, ಶ್ರೀಕೃಷ್ಣ ಭಕ್ತರು ಬರ ಮಾಡಿ ಕೊಂಡಿ ದ್ದಾರೆ. ಈಗಾಗಲೇ ರಥಬೀದಿ, ಶ್ರೀಕೃಷ್ಣ ಮಠ, ಪರ್ಯಾಯ ಮಠಗಳು ಸುಣ್ಣ ಬಣ್ಣಗಳಿಂದ ಕಂಗೊಳಿಸುತ್ತಿವೆ.

Vishwa News 24

Recent Posts

ರಾಮಮಂದಿರ ದೇಣಿಗೆ ಅವ್ಯವಹಾರ: SIT ತನಿಖೆ ನಡೆಸುತ್ತಿರುವುದು ಸ್ವಾಗತಾರ್ಹ : ಪೇಜಾವರ ಶ್ರೀ – vishwanews24

ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…

58 seconds ago

ಪರ್ಕಳ: ಹೆದ್ದಾರಿಯಲ್ಲಿ ಕಂಟೇನರ್ ಲಾರಿ ಪಲ್ಟಿ: ತಪ್ಪಿದ ದುರಂತ – vishwanews24

ಪರ್ಕಳ: ಹೆದ್ದಾರಿಯಲ್ಲಿ ಕಂಟೇನರ್ ಲಾರಿ ಪಲ್ಟಿ: ತಪ್ಪಿದ ದುರಂತ ಮಣಿಪಾಲ: ಪರ್ಕಳದ ಕೆಳಪರ್ಕಕಳ ಹೆದ್ದಾರಿಯಲ್ಲಿ ಕೆನರಾ ಬ್ಯಾಂಕಿನ ತಿರುವಿನಲ್ಲಿ ಕಂಟೇನರ್…

18 minutes ago

ಉಡುಪಿ: ಮೂವರು ರೌಡಿ ಶೀಟರ್‌ಗಳ ಗಡಿಪಾರು : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ – vishwanews24

ಉಡುಪಿ: ಮೂವರು ರೌಡಿ ಶೀಟರ್‌ಗಳ ಗಡಿಪಾರು : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಉಡುಪಿ: ಉಡುಪಿ ಜಿಲ್ಲೆಯ ವಿವಿಧ ಪೊಲೀಸ್…

31 minutes ago

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

19 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

20 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

20 hours ago