ಉಡುಪಿ: ಶ್ರೀಕೃಷ್ಣನೂರು ಉಡುಪಿಯು ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥರ ನಾಲ್ಕನೇ ಪರ್ಯಾಯ ಉತ್ಸವಕ್ಕೆ ಸಜ್ಜಾಗಿದೆ.
ಶ್ರೀಕೃಷ್ಣ ಮಠದ ರಥಿಬೀದಿ ಸುತ್ತ ಮುತ್ತಲಿನ ಪರಿಸರವಲ್ಲದೆ ನಗರದ ಬಹುತೇಕ ಪ್ರಮುಖ ಸ್ಥಳಗಳು ಹಾಗೂ ಉಡುಪಿ ನಗರಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗಗಳೆಲ್ಲ ವಿದ್ಯುತ್ ದೀಪಗಳಿಂದ ಅಲಂಕೃತವಾಗಿವೆ. ಬುಧವಾರ ಮಧ್ಯರಾತ್ರಿಯ ಬಳಿಕ ಕಾಪುವಿನ ದಂಡತೀರ್ಥದಲ್ಲಿ ಮಿಂದು ಬರುವ ಶ್ರೀಗಳ ಸ್ವಾಗತಕ್ಕೆ ದಂಡತೀರ್ಥ ಮಠದಿಂದ ಉಡುಪಿ ವರೆಗೆ ರಾಷ್ಟ್ರೀಯ ಹೆದ್ದಾರಿಯುದ್ದಕ್ಕೂ ವಿದ್ಯುದ್ದೀಪಗಳ ಅಲಂಕಾರವನ್ನು ಅಳವಡಿಸಲಾಗಿದೆ. ಇದು ಈ ಬಾರಿಯ ವಿಶೇಷ.
ನಗರದ ವಿವಿಧೆಡೆ ಕೇಸರಿ ಬಾವುಟಗಳು ರಾರಾಜಿಸತೊಡಗಿವೆ. ಪರ್ಯಾಯ ಮೆರವಣಿಗೆ ನಡೆಯುವ ಜೋಡುಕಟ್ಟೆ ಯಿಂದ ರಥಬೀದಿವರೆಗೆ ವಿಶೇಷ ಅಲಂಕಾರಗಳು, ವಿವಿಧ ಸ್ವಾಗತ ಕಮಾನುಗಳನ್ನು ರಚಿಸಲಾಗಿದೆ. ಒಟ್ಟಿ ನಲ್ಲಿ ಇಡೀ ನಗರವೇ ಸಂಭ್ರಮವನ್ನು ಮೈದುಂಬಿಕೊಂಡಿದೆ.
252ನೆಯ ಪರ್ಯಾಯ ಅವಧಿ ಯ ಶ್ರೀಕೃಷ್ಣನ ಪೂಜೆಗೆ ಪುತ್ತಿಗೆ ಮಠದ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು ಅಣಿಯಾಗುತ್ತಿದ್ದಾರೆ. ಜ. 18 ರ ಬೆಳಗ್ಗೆ ಪರ್ಯಾಯ ಮೆರವಣಿಗೆ ಹಾಗೂ ದರ್ಬಾರ್ ನಡೆಯಲಿದ್ದು, ಜ. 17ರ ಬುಧವಾರ ಬೆಳಗ್ಗೆಯಿಂದಲೇ ಭಕ್ತರು ತಂಡೋ ಪತಂಡವಾಗಿ ನಗರಕ್ಕೆ ಆಗಮಿಸುವರು. ಹಾಗಾಗಿ ಜ. 17ರಿಂದ ತೊಡಗಿ 18ರ ಬೆಳಗಿನ ಜಾವದವರೆಗೂ ಉಡುಪಿ ಎಚ್ಚೆತ್ತಿರಲಿದೆ.
ತಮ್ಮ ಪರ್ಯಾಯ ಪೂರ್ವ ಸಂಚಾರವನ್ನು ಮುಗಿಸಿ ಪರ್ಯಾಯ ಪೀಠ ವನ್ನೇ ರುವ ಶ್ರೀ ಸುಗುಣೇಂದ್ರ ತೀರ್ಥರು ಜ. 8 ರಂದು ಪುರ ಪ್ರವೇಶ ಮಾಡಿದರು. ಪೌರ ಸಮ್ಮಾನದ ಮೂಲಕ ಅವರನ್ನು ನಾಗರಿಕರು, ಶ್ರೀಕೃಷ್ಣ ಭಕ್ತರು ಬರ ಮಾಡಿ ಕೊಂಡಿ ದ್ದಾರೆ. ಈಗಾಗಲೇ ರಥಬೀದಿ, ಶ್ರೀಕೃಷ್ಣ ಮಠ, ಪರ್ಯಾಯ ಮಠಗಳು ಸುಣ್ಣ ಬಣ್ಣಗಳಿಂದ ಕಂಗೊಳಿಸುತ್ತಿವೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…