Featured

ಪುತ್ತೂರಿಗೆ ಬಂದ ಅಯೋಧ್ಯೆ ಶ್ರೀರಾಮ ಜನ್ಮಭೂಮಿಯ ಆಮಂತ್ರಣ ಅಕ್ಷತೆ – vishwanews24

ಪುತ್ತೂರಿಗೆ ಬಂದ ಅಯೋಧ್ಯೆ ಶ್ರೀರಾಮ ಜನ್ಮಭೂಮಿಯ ಆಮಂತ್ರಣ ಅಕ್ಷತೆ

ಪುತ್ತೂರು : ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮಮಂದಿರದಲ್ಲಿ ಜನವರಿ 22, 2024 ರಂದು ಭಗವಾನ್ ರಾಮನ ವಿಗ್ರಹದ “ಪ್ರಾಣ ಪ್ರತಿಷ್ಠಾ ಮಹೋತ್ಸವ” ನಡೆಯಲಿದ್ದು, ಇದಕ್ಕೆ ಸಿದ್ದತೆಗಳು ಭರದಿಂದ ಸಾಗಿದೆ. ಈ ನಡುವೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಈ ದೇವತಾ ಕಾರ್ಯದಲ್ಲಿ ದೇಶದ ಎಲ್ಲಾ ಜನರನ್ನು ಸೇರಿಸಿಕೊಳ್ಳಲು ತೀರ್ಮಾನಿಸಿದ್ದು, ಅದರಂತೆ ಶ್ರೀರಾಮ ಜನ್ಮಭೂಮಿಯ ಆಮಂತ್ರಣ ಅಕ್ಷತೆ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈ ಕಾರ್ಯಕ್ರಮದಲ್ಲಿ ದೇಶದಲ್ಲಿರುವ ಪ್ರತಿಯೊಬ್ಬ ಹಿಂದೂವಿನ ಮನೆಗೂ ಶ್ರೀರಾಮನ ಆಮಂತ್ರಣ ಅಕ್ಷತೆಯನ್ನು ನೀಡಲಾಗುತ್ತದೆ.

ಅದರಂತೆ ಇಂದು ಪುತ್ತೂರಿಗೆ ಅಯೋಧ್ಯೆ ಶ್ರೀರಾಮ ಜನ್ಮಭೂಮಿಯ ಆಮಂತ್ರಣ ಅಕ್ಷತೆ ಆಗಮಿಸಿದ್ದು, ನೂರಾರು ಜನರು ಅಕ್ಷತೆಯನ್ನು ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಸ್ವಾಗತಿಸಿದರು. ಅಕ್ಷತೆ ಕುಂಭ-ಮೇಳ ಸ್ವಾಗತದೊಂದಿಗೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತಲುಪಿದ್ದು, ಅಲ್ಲಿ ದೇವಸ್ಥಾನದ ಗರ್ಭಗುಡಿಯಲ್ಲಿ ಇರಿಸಿ ಅಕ್ಷತೆಗೆ ಪೂಜೆ ಸಲ್ಲಿಸಲಾಯಿತು.

ನವಂಬರ್ 30 ರ ತನಕ ದೇವಸ್ಥಾನದ ಗರ್ಭಗುಡಿಯಲ್ಲೇ ಇರಲಿರುವ ಅಕ್ಷತೆ, ಬಳಿಕ ನವೆಂಬರ್ 30 ರಂದು ರಾಮಜನ್ಮ ಭೂಮಿ ಕ್ಷೇತ್ರ ಟ್ರಸ್ಟ್ ಸಮಿತಿಯ ತಾಲೂಕು ಘಟಕದ ಸಭೆ ನಡೆಯಲಿದೆ. ಆ ಸಭೆಯಲ್ಲಿ ತಾಲೂಕು ಘಟಕ ಮತ್ತು ಗ್ರಾಮ ಘಟಕಗಳಿಗೆ ಅಕ್ಷತೆಯ ಹಸ್ತಾಂತರ ಮಾಡಲಾಗುವುದು ಬಳಿಕ ಜನವರಿ 1 ರ ತನಕ ಆಯಾಯ ಗ್ರಾಮದ ದೈವ ಮತ್ತು ದೇವಸ್ಥಾನದಲ್ಲಿ ಇರಲಿದೆ ಅಕ್ಷತೆ, ಜನವರಿ 1 ರಿಂದ 15 ರಿಂದ ಪ್ರತೀ ಹಿಂದೂ ಮನೆಗಳಿಗೆ ಅಕ್ಷತೆ ಮುಟ್ಟಲಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

3 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

3 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago