ಪುತ್ತೂರು : ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮಮಂದಿರದಲ್ಲಿ ಜನವರಿ 22, 2024 ರಂದು ಭಗವಾನ್ ರಾಮನ ವಿಗ್ರಹದ “ಪ್ರಾಣ ಪ್ರತಿಷ್ಠಾ ಮಹೋತ್ಸವ” ನಡೆಯಲಿದ್ದು, ಇದಕ್ಕೆ ಸಿದ್ದತೆಗಳು ಭರದಿಂದ ಸಾಗಿದೆ. ಈ ನಡುವೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಈ ದೇವತಾ ಕಾರ್ಯದಲ್ಲಿ ದೇಶದ ಎಲ್ಲಾ ಜನರನ್ನು ಸೇರಿಸಿಕೊಳ್ಳಲು ತೀರ್ಮಾನಿಸಿದ್ದು, ಅದರಂತೆ ಶ್ರೀರಾಮ ಜನ್ಮಭೂಮಿಯ ಆಮಂತ್ರಣ ಅಕ್ಷತೆ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈ ಕಾರ್ಯಕ್ರಮದಲ್ಲಿ ದೇಶದಲ್ಲಿರುವ ಪ್ರತಿಯೊಬ್ಬ ಹಿಂದೂವಿನ ಮನೆಗೂ ಶ್ರೀರಾಮನ ಆಮಂತ್ರಣ ಅಕ್ಷತೆಯನ್ನು ನೀಡಲಾಗುತ್ತದೆ.
ಅದರಂತೆ ಇಂದು ಪುತ್ತೂರಿಗೆ ಅಯೋಧ್ಯೆ ಶ್ರೀರಾಮ ಜನ್ಮಭೂಮಿಯ ಆಮಂತ್ರಣ ಅಕ್ಷತೆ ಆಗಮಿಸಿದ್ದು, ನೂರಾರು ಜನರು ಅಕ್ಷತೆಯನ್ನು ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಸ್ವಾಗತಿಸಿದರು. ಅಕ್ಷತೆ ಕುಂಭ-ಮೇಳ ಸ್ವಾಗತದೊಂದಿಗೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತಲುಪಿದ್ದು, ಅಲ್ಲಿ ದೇವಸ್ಥಾನದ ಗರ್ಭಗುಡಿಯಲ್ಲಿ ಇರಿಸಿ ಅಕ್ಷತೆಗೆ ಪೂಜೆ ಸಲ್ಲಿಸಲಾಯಿತು.
ನವಂಬರ್ 30 ರ ತನಕ ದೇವಸ್ಥಾನದ ಗರ್ಭಗುಡಿಯಲ್ಲೇ ಇರಲಿರುವ ಅಕ್ಷತೆ, ಬಳಿಕ ನವೆಂಬರ್ 30 ರಂದು ರಾಮಜನ್ಮ ಭೂಮಿ ಕ್ಷೇತ್ರ ಟ್ರಸ್ಟ್ ಸಮಿತಿಯ ತಾಲೂಕು ಘಟಕದ ಸಭೆ ನಡೆಯಲಿದೆ. ಆ ಸಭೆಯಲ್ಲಿ ತಾಲೂಕು ಘಟಕ ಮತ್ತು ಗ್ರಾಮ ಘಟಕಗಳಿಗೆ ಅಕ್ಷತೆಯ ಹಸ್ತಾಂತರ ಮಾಡಲಾಗುವುದು ಬಳಿಕ ಜನವರಿ 1 ರ ತನಕ ಆಯಾಯ ಗ್ರಾಮದ ದೈವ ಮತ್ತು ದೇವಸ್ಥಾನದಲ್ಲಿ ಇರಲಿದೆ ಅಕ್ಷತೆ, ಜನವರಿ 1 ರಿಂದ 15 ರಿಂದ ಪ್ರತೀ ಹಿಂದೂ ಮನೆಗಳಿಗೆ ಅಕ್ಷತೆ ಮುಟ್ಟಲಿದೆ.
ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ…
ಕಾಂಗ್ರೆಸ್ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ ನವದೆಹಲಿ: ಸಚಿವ ಸಂಪುಟ ಪುನಾರಚನೆ ಮಾಡುವಂತೆ…
ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ ಬೆಂಗಳೂರು :ತಾನು 2023ನೇ ಬ್ಯಾಚ್ನ ಐಎಎಸ್…
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ ನವದೆಹಲಿ : ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಮಹಿಳಾ ಮೀಸಲಾತಿ ಹಾಗೂ…
ಮೇ 1 ರಿಂದ ಶಿವಮೊಗ್ಗ - ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ ಶಿವಮೊಗ್ಗ:…
ಬೆಳ್ತಂಗಡಿ: ನಾಯಿ ಅಡ್ಡ ಬಂದು ಆಟೋ ಪಲ್ಟಿ ; ಚಾಲಕ ಸಾವು ಬೆಳ್ತಂಗಡಿ: ನಾಯಿ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ…