Featured

ಪುತ್ತೂರಿನಲ್ಲಿ ಬೃಹತ್‌ ಕೈಗಾರಿಕಾ ಕಾರಿಡಾರ್‌ ಸ್ಥಾಪನೆ – Vishwanews24

ಕೈಗಾರಿಕಾ ಅಭಿವೃದ್ಧಿ, ಉದ್ಯೋಗಾವಕಾಶ ಹೆಚ್ಚಳದ ದೃಷ್ಟಿಯಿಂದ ಪುತ್ತೂರು – ಉಪ್ಪಿನಂಗಡಿ ನಡುವಿನ ಚಿಕ್ಕಮುಡ್ನೂರು ಗ್ರಾಮದ ಕಟಾರ ಎಂಬಲ್ಲಿ ಶಾಸಕ ಸಂಜೀವ ಮಠಂದೂರು ಮುತುವರ್ಜಿಯಲ್ಲಿ ಕೈಗಾರಿಕಾ ಕಾರಿಡಾರ್‌ ನಿರ್ಮಾಣ ..

ಇದಕ್ಕಾಗಿ 100 ಎಕರೆ ಜಮೀನು ಗುರುತು , ಮುಂದಿನ ಕೆಲವೇ ದಿನಗಳಲ್ಲಿ ಸರ್ವೆ ಕಾರ್ಯ ..

ಪುತ್ತೂರು: ಕೈಗಾರಿಕಾ ಅಭಿವೃದ್ಧಿ ಮತ್ತು ಉದ್ಯೋಗಾವಕಾಶ ಹೆಚ್ಚಳದ ದೃಷ್ಟಿ ಇಟ್ಟುಕೊಂಡು ಪುತ್ತೂರಿನಲ್ಲಿ ಬೃಹತ್‌ ಕೈಗಾರಿಕಾ ಕಾರಿಡಾರ್‌ ನಿರ್ಮಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ 100 ಎಕರೆ ಜಮೀನು ಗುರುತಿಸಲಾಗಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಸರ್ವೆ ಕಾರ್ಯ ನಡೆಯಲಿದೆ.

ಶಾಸಕ ಸಂಜೀವ ಮಠಂದೂರು ಮುತುವರ್ಜಿಯಲ್ಲಿ ಕೈಗಾರಿಕಾ ಕಾರಿಡಾರ್‌ ನಿರ್ಮಾಣ ನಡೆಯಲಿದ್ದು, ಅನುಷ್ಠಾನದ ಹೊಣೆಯನ್ನು ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ವಹಿಸಿಕೊಳ್ಳಲಿದೆ. ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ನಾನಾ ಭಾಗಗಳ ಪ್ರತಿಷ್ಠಿತ ಉದ್ಯಮಗಳಿಗೆ ಪುತ್ತೂರಿನಲ್ಲಿ ಕೈಗಾರಿಕೆ ಸ್ಥಾಪಿಸಲು ಅವಕಾಶ ನೀಡಲಾಗುತ್ತದೆ. ಈ ಮೂಲಕ ಪುತ್ತೂರಿನ ಸಾವಿರಾರು ಯುವಕ- ಯುವತಿಯರಿಗೆ ಉದ್ಯೋಗ ಸಿಗಲಿದೆ.

ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ ಭೂಸ್ವಾಧೀನ ವಿಭಾಗದ ಭೂಸ್ವಾಧೀನ ಅಧಿಕಾರಿ ಬಿನೋಯ್‌ ಮಂಗಳವಾರ ಪುತ್ತೂರಿಗೆ ಭೇಟಿ ನೀಡಿದ್ದು, ಪ್ರವಾಸಿ ಸೌಧದಲ್ಲಿ ಶಾಸಕ ಸಂಜೀವ ಮಠಂದೂರು ಜತೆ ಸಮಾಲೋಚನೆ ನಡೆಸಿದರು. ತಹಸೀಲ್ದಾರ್‌ ರಮೇಶ್‌ ಬಾಬು, ವಲಯ ಅರಣ್ಯ ಅಧಿಕಾರಿ ಬಿ.ಎಂ. ಕಿರಣ್‌, ಎಡಿಎಲ್‌ಆರ್‌ ರಮಾದೇವಿ ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು.

ಪುತ್ತೂರು – ಉಪ್ಪಿನಂಗಡಿ ನಡುವಿನ ಚಿಕ್ಕಮುಡ್ನೂರು ಗ್ರಾಮದ ಕಟಾರ ಎಂಬಲ್ಲಿ ಕೈಗಾರಿಕಾ ಕಾರಿಡಾರ್‌ ನಿರ್ಮಾಣವಾಗಲಿದೆ. ಇದಕ್ಕಾಗಿ 100 ಎಕರೆ ಜಮೀನು ಗುರುತಿಸಲಾಗಿದೆ. ಮುಂದಿನ ಹಂತದಲ್ಲಿ ಸರ್ವೆ ಕಾರ್ಯ ನಡೆಯಲಿದೆ. ಈ ಜಮೀನಿನಲ್ಲಿ ಸರಕಾರಿ ಜಾಗದ ಲಭ್ಯತೆಯ ಬಗ್ಗೆ ಪರಿಶೀಲಿಸಲಾಗುತ್ತದೆ. ಖಾಸಗಿ ಜಮೀನು, ಅರಣ್ಯ ಜಮೀನು ಇದೆಯೇ ಎಂಬುದನ್ನೂ ಸಮೀಕ್ಷೆ ಮಾಡಲಾಗುತ್ತದೆ ಎಂದು ಸಭೆಯಲ್ಲಿ ತಿಳಿಸಲಾಯಿತು.

ಕೈಗಾರಿಕಾ ಕಾರಿಡಾರ್‌ ನಿರ್ಮಾಣಕ್ಕೆ ಸರಕಾರಿ ಭೂಮಿಯೇ ಹೆಚ್ಚಿನ ಪ್ರಮಾಣದಲ್ಲಿ ಲಭಿಸಿದರೆ ಉತ್ತಮ. ಪರಿಹಾರ ಕೊಡುವ ಪ್ರಮೇಯ ಬರುವುದಿಲ್ಲ. ಜಮೀನು ಆಯ್ಕೆಯಾದ ಬಳಿಕ ಸರ್ವೆ ನಡೆಸಿ, ಕೈಗಾರಿಕಾ ಕನ್ವರ್ಷನ್‌ ಮಾಡಿಸಿ, ಕೈಗಾರಿಕಾ ಲೇಔಟ್‌ ಮಾಡಿ, ರಸ್ತೆ, ನೀರು, ವಿದ್ಯುತ್‌ ಮತ್ತಿತರ ಮೂಲಸೌಕರ್ಯ ಒದಗಿಸುವ ಕೆಲಸ ಕೆಐಎಡಿಬಿ ಮಾಡುತ್ತದೆ. ನಿಯಮ ಪ್ರಕಾರವೇ ಸೈಟ್‌ಗಳ ವಿಂಗಡಣೆಯಾಗಲಿದೆ. ಕೈಗಾರಿಕೋದ್ಯಮಿಗಳಿಗೆ ಕಡಿಮೆ ದರದಲ್ಲಿ ಜಮೀನು ನೀಡಬೇಕಾಗುತ್ತದೆ. 100 ಎಕರೆ ಜಮೀನು ಸ್ವಾಧೀನಪಡಿಸಿಕೊಂಡರೆ ಮೂಲಸೌಕರ್ಯಕ್ಕೆ ಅದರಲ್ಲಿ ಒಂದಷ್ಟು ಜಮೀನು ಹೋಗುತ್ತದೆ. ಉಳಿದುದನ್ನು ಸೈಟ್‌ ಮಾಡಿ ಹಂಚಲು ಸಾಧ್ಯವಾಗುತ್ತದೆ ಎಂದು ಬಿನೋಯ್‌ ತಿಳಿಸಿದರು.

ತಾಲೂಕಿನ ಇತರ ಕಡೆ ಕೂಡ ಜಮೀನು ಪರಿಶೀಲಿಸಲಾಗಿದೆ. ಆದರೆ ಕಟಾರದ ಜಮೀನು ಸಮೀಪ ಕುಮಾರಧಾರಾ ನದಿ ಇರುವ ಕಾರಣ ನೀರಿನ ಆಶ್ರಯ ಸುಲಭ. ಈ ಕಾರಣಕ್ಕೆ ಇದನ್ನು ಆಯ್ಕೆ ಮಾಡಲಾಗಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.

Vishwa News 24

Recent Posts

ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ ಉದ್ಘಾಟನೆ – vishwanews24

ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…

19 hours ago

ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್‌ ಅಭಿಷೇಕ್ ಪೂಜಾರಿ ಸಾವು – vishwanews24

ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್‌ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…

20 hours ago

ಅಮೆರಿಕದ ಪ್ರತಿಷ್ಠಿತ  ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ – vishwanews24

ಅಮೆರಿಕದ ಪ್ರತಿಷ್ಠಿತ  ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್‌: ಭಾರತದ ಯುವ ಗ್ರ್ಯಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ…

22 hours ago

ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ – vishwanews24

ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…

22 hours ago

ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ – vishwanews24

ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…

22 hours ago

2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು : ಯತೀಂದ್ರ ಸಿದ್ದರಾಮಯ್ಯ – vishwanews24

2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…

22 hours ago