Featured

ಪುತ್ತೂರಿನ ಪವಿತ್ರ ಮಣ್ಣಿನಲ್ಲಿ ದೌರ್ಜನ್ಯ ಎಸಗುವ ಅಧಿಕಾರಿಗಳಿಗೆ ಅವಕಾಶವಿಲ್ಲ : ಪುತ್ತಿಲ – Vishwanews24

ಪುತ್ತೂರಿನ ಪವಿತ್ರ ಮಣ್ಣಿನಲ್ಲಿ ದೌರ್ಜನ್ಯ ಎಸಗುವ ಅಧಿಕಾರಿಗಳಿಗೆ ಅವಕಾಶವಿಲ್ಲ : ಪುತ್ತಿಲ

ಪುತ್ತೂರು: ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಹಿಂದೂಗಳ ಮೇಲಿನ ದೌರ್ಜನ್ಯ ಹೆಚ್ಚಾಗುತ್ತಿದೆ. ಪುತ್ತೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಹಿಂದುಗಳ ಮೇಲೆ ನಿರಂತರವಾಗಿ ದೌರ್ಜನ್ಯ ಎಸಗಲಾಗುತ್ತಿದೆ.

ಆದರೆ ಇದರ ಬಗ್ಗೆ ಕ್ರಮ ಕೈಗೊಳ್ಳಬೇಕಾದ ಪೊಲೀಸರು ಮೌನಕ್ಕೆ ಶರಣಾಗಿದ್ದಾರೆ. ಇದನ್ನು ಎಷ್ಟು ಮಾತ್ರಕ್ಕೂ ಸಹಿಸಲ್ಲ. ಅನಿವಾರ್ಯವಾದರೆ ನಾವು ಸಂಘರ್ಷಕ್ಕೆ ಇಳಿಯಲೂ ಸಿದ್ಧರಿದ್ದೇವೆ ಎಂದು ಹಿಂದೂ ನಾಯಕ ಅರುಣ್ ಕುಮಾರ್ ಪುತ್ತಿಲ ಎಚ್ಚರಿಕೆ ನೀಡಿದ್ದಾರೆ.

ಪುತ್ತೂರಿನಲ್ಲಿ ನಡೆದ ಇತ್ತೀಚಿನ ಅಹಿತಕರ ಘಟನೆ ಹಾಗೂ ಹಿಂದೂ ಯುವಕರ ಮೇಲಿನ ಪೊಲೀಸ್ ದೌರ್ಜನ್ಯದ ಕುರಿತು ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಪುತ್ತೂರಿನ ಪವಿತ್ರ ಮಣ್ಣಿನಲ್ಲಿ ದೌರ್ಜನ್ಯ ಎಸಗುವ ಅಧಿಕಾರಿಗಳಿಗೆ ಸೇವೆ ಸಲ್ಲಿಸುವ ಅವಕಾಶವನ್ನು ನಾವು ಕೊಡುವುದಿಲ್ಲ ಎಂದರು.

ಹಿಂದೂ ಸಮಾಜದ ಯಾವುದೇ ಕಾರ್ಯಕರ್ತನಿಗೂ ಹಲ್ಲೆ, ದೌರ್ಜನ್ಯ ನಡೆದರೆ ಸುಮ್ಮನಿರಲ್ಲ. ಪೊಲೀಸ್ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ಮಾನವ ಹಕ್ಕು ಆಯೋಗಕ್ಕೂ ದೂರು ನೀಡಲಿದ್ದೇವೆ.

ಕಾಂಗ್ರೆಸ್ ಸರಕಾರ ಬಂದಾಗ ಮಿತಿ ಮೀರಿದ ದೌರ್ಜನ್ಯ ನಡೆದಿದೆ. ಇದನ್ನು ನಾವು ಸಹಿಸಲ್ಲ. ಮುಂದಿನ ದಿನಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆದರೆ, ಇದಕ್ಕೆ ಇಲಾಖೆಗಳೇ ಕಾರಣರಾಗುತ್ತದೆ.

ಹಿಂದುಗಳಿಗೆ ನ್ಯಾಯ ಕೊಡಲು ನಾವು ಸದಾ ಸಿದ್ಧರಿದ್ದೇವೆ. ಅದಕ್ಕಿಂತ ಮಿಗಿಲಾಗಿ ಇನ್ನೇನಾದರೂ ಸಂಘರ್ಷ ನಡೆದರೆ ಅದಕ್ಕೆ ಪೊಲೀಸರೇ ಹೊಣೆಯಾಗುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

Vishwa News 24

Recent Posts

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

28 minutes ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

21 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

21 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

22 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

22 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

22 hours ago