ಪುತ್ತೂರು: ಪುತ್ತೂರಿನ ಪಿಲಿ ಪರಂಪರೆಗೆ ತನ್ನದೇ ಶೈಲಿಯ ಹೆಜ್ಜೆಯ ಹೆಗ್ಗುರುತಿನ ಬ್ರ್ಯಾಂಡ್ ತಂದುಕೊಟ್ಟ ಪಿಲಿ ರಾಧಣ್ಣ ಅವರು ಅನಾರೋಗ್ಯದ ಹಿನ್ನೆಲೆ ಶನಿವಾರ ನಸುಕಿನ ಜಾವ ಕೊನೆಯುಸಿರೆಳೆದಿದ್ದಾರೆ.
ಕೆಮ್ಮಾಯಿ ನಿವಾಸಿ ರಾಧಾಕೃಷ್ಣ ಶೆಟ್ಟಿ (59) ಅವರನ್ನು ಅನಾರೋಗ್ಯದ ಹಿನ್ನಲೆ ಸೆ.5 ರಂದು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು.
ಪುತ್ತೂರಿನಲ್ಲಿ ಪಿಲಿ ರಾಧಣ್ಣ ಎಂದೇ ಹೆಸರಾದ ರಾಧಾಕೃಷ್ಣ ಶೆಟ್ಟಿಯವರು ಹುಲಿ ಆಚರಣೆಯ ಸಂಪ್ರದಾಯಕ್ಕೆ ಎಳ್ಳಷ್ಟು ಚ್ಯುತಿ ಬಾರದ ಹಾಗೆ ವೇಷ ಹಾಕುವುದು ಮತ್ತು ಕುಣಿಯುವುದು ಅವರ ವಿಶೇಷವಾಗಿತ್ತು.
65 ವರ್ಷಗಳ ಹಿಂದೆ ಪುತ್ತೂರಿನಲ್ಲಿ ಇದ್ದದ್ದು ಎರಡು ಪಿಲಿ. ಒಂದು ಪಿಲಿ ಸಂಕಪ್ಪಣ್ಣ, ಇನ್ನೊಂದು ಪಿಲಿ ಗಂಗಣ್ಣ. ಪಿಲಿ ಸಂಕಪ್ಪ ಶೆಟ್ಟಿ ಅವರ ಪುತ್ರನೇ ಪಿಲಿ ರಾಧಣ್ಣ. ಸಂಕಪ್ಪ ಅವರು ಸುಮಾರು 30 ವರ್ಷಗಳ ಕಾಲ ಕುಣಿದವರು. ರಾಧಾಕೃಷ್ಣ ಶೆಟ್ಟಿ ಅವರಿಗೆ 9 ವರ್ಷ (4ನೇ ತರಗತಿ) ಇರುವಾಗ ತಂದೆ ಸಂಕಪ್ಪ ಅವರ ಜೊತೆ ಕಿನ್ನಿಪಿಲಿ ವೇಷಧಾರಿಯಾಗಿ ಸೇರಿಸಿಕೊಂಡರು. ಅಲ್ಲಿಂದ ಪಿಲಿ ವೇಷ ಶುರು. ಅಪ್ಪ-ಮಗ ಇಬ್ಬರು 10 ವರ್ಷಗಳ ಕಾಲ ಜತೆ ಜತೆಯಾಗಿ ಹೆಜ್ಜೆ ಹಾಕಿದರು. ಕಿನ್ನಿ ಪಿಲಿಯಾಗಿ ಟೋಪಿ ಹಾಕಿಕೊಂಡು ಹೊರಟ ಪುಟ್ಟ ಬಾಲಕ ಮುಂದೆ ಪಿಲಿ ರಾಧಣ್ಣ ಆಗಿ ಗುರುತಿಸಿಕೊಂಡಿದ್ದಾರೆ.
ಮೃತರು ಪತ್ನಿ, ಇಬ್ಬರು ಪುತ್ರರು ಹಾಗು ಪುತ್ರಿಯನ್ನು ಅಗಲಿದ್ದಾರೆ.
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…