32 ಮಕ್ಕಳ ಪೈಕಿ ನಾವೀನ್ಯತೆ ವಿಭಾಗದಲ್ಲಿ 9, ಕಲೆ ಸಂಸ್ಕೃತಿ ವಿಭಾಗದಲ್ಲಿ 7, ಶೈಕ್ಷಣಿಕ ಹಾಗೂ ಕ್ರೀಡಾ ಸಾಧನೆ ವಿಭಾಗದಲ್ಲಿ 5, ಶೌರ್ಯ ವಿಭಾಗ 3 ಹಾಗೂ ಸಾಮಾಜಿಕ ಸೇವಾ ವಿಭಾಗದಲ್ಲಿ ಒಬ್ಬ ಮಕ್ಕಳಿಗೆ ಪ್ರಶಸ್ತಿ ಲಭಿಸಿದೆ.
ನವದೆಹಲಿ: ಕರ್ನಾಟಕ ರಾಜ್ಯದ ಇಬ್ಬರು ಮಕ್ಕಳು ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕೇಂದ್ರ ಸರ್ಕಾರ ನೀಡುವ 2021ನೇ ಸಾಲಿನ ‘ಪ್ರಧಾನಮಂತ್ರಿ ರಾಷ್ಟ್ರೀಯ ಬಾಲಪುರಸ್ಕಾರ’ ಪ್ರಶಸ್ತಿಗೆ ಒಟ್ಟು 32 ಮಕ್ಕಳು ಆಯ್ಕೆಯಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬನ್ನೂರು ಗ್ರಾಮದ ರಾಕೇಶ್ ಕೃಷ್ಣ ಹಾಗೂ ಬೆಂಗಳೂರಿನ ವೀರ್ ಕಶ್ಯಪ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇವರಿಬ್ಬರಿಗೂ ಆವಿಸ್ಕಾರ ವಲಯದಲ್ಲಿ ಪುರಸ್ಕಾರ ಲಭಿಸಿದೆ.
ಇದನ್ನೂ ಓದಿ : ಕೇಂದ್ರದಿಂದ ಮಂಗಳೂರು ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣಕ್ಕೆ 40 ಕೋಟಿ ರೂ. ಬಿಡುಗಡೆ : ಸದಾನಂದ ಗೌಡ -Vishwanews24
32 ಮಕ್ಕಳ ಪೈಕಿ ನಾವೀನ್ಯತೆ ವಿಭಾಗದಲ್ಲಿ 9, ಕಲೆ ಸಂಸ್ಕೃತಿ ವಿಭಾಗದಲ್ಲಿ 7, ಶೈಕ್ಷಣಿಕ ಹಾಗೂ ಕ್ರೀಡಾ ಸಾಧನೆ ವಿಭಾಗದಲ್ಲಿ 5, ಶೌರ್ಯ ವಿಭಾಗ 3 ಹಾಗೂ ಸಾಮಾಜಿಕ ಸೇವಾ ವಿಭಾಗದಲ್ಲಿ ಒಬ್ಬ ಮಕ್ಕಳಿಗೆ ಪ್ರಶಸ್ತಿ ಲಭಿಸಿದೆ.
ಸರ್ಕಾರ ಪ್ರತೀ ವರ್ಷ ಬಾಲ ಪ್ರತಿಭೆಗಳನ್ನು ಗುರುತಿಸಿ ಈ ಪ್ರಶಸ್ತಿ ನೀಡುತ್ತಿದೆ. ಪ್ರಶಸ್ತಿಯ ಪದಕ 1 ಲಕ್ಷ ನಗದು ಒಳಗೊಂಡಿದೆ. ವಿಜೇತರೊಂದಿಗೆ ಪ್ರಧಾನಿ ಮೋದಿ ಇಂದು ಮಧ್ಯಾಹ್ನ 12 ಗಂಟೆಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ.
ಇದನ್ನೂ ಓದಿ : ಉಡುಪಿ : ಜಿಲ್ಲಾ ಗಣರಾಜ್ಯೋತ್ಸವ ಕ್ರಿಕೆಟ್ ಕಪ್ ಗೆದ್ದ ಕರಾವಳಿ ಕಾವಲು ಪೊಲೀಸ್ ತಂಡ -Vishwanews24
ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಯಿಂದ ಪುರಸ್ಕೃತರಾಗಿರುವ ರಾಕೇಶ್ ಕೃಷ್ಣ ಮತ್ತು ವೀರ್ ಕಶ್ಯಪ್ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿನಂದಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ, ‘ಆವಿಷ್ಕಾರ ವಿಭಾಗದಲ್ಲಿ ಈ ಬಾರಿಯ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಯಿಂದ ಪುರಸ್ಕೃತರಾಗಿರುವ ದಕ್ಷಿಣ ಕನ್ನಡದ 15 ವರ್ಷದ ಕೆ.ರಾಕೇಶ್ ಕೃಷ್ಣ ಮತ್ತು ಬೆಂಗಳೂರಿನ 10 ವರ್ಷದ ವೀರ್ ಕಶ್ಯಪ್ಗೆ ಅಭಿನಂದನೆಗಳು. ನಿಮ್ಮ ಸಾಧನೆ ರಾಜ್ಯಕ್ಕೆ ಹೆಮ್ಮೆ ತರುವ ಜೊತೆಗೆ ಇತರ ಮಕ್ಕಳಿಗೆ ಮಾದರಿಯಾಗಿದೆ’ ಎಂದು ಶ್ಲಾಘಿಸಿದ್ದಾರೆ.
ಇದನ್ನೂ ಓದಿ : ಕಾಪು SCDCC ಬ್ಯಾಂಕ್- ಜನವರಿ 28 ರಂದು ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ-vishwanews24
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]