ಪುತ್ತೂರು: ಪುತ್ತೂರಿನ ಖ್ಯಾತ ಹುಲಿ ವೇಷ ತಂಡ ಕಲ್ಲೇಗ ಟೈಗರ್ಸ್ ತಂಡದ ಸಾರಥ್ಯ ವಹಿಸಿದ್ಧ ಅಕ್ಷಯ್ ಕಲ್ಲೇಗ(24) ಅವರನ್ನು ನೆಹರೂ ನಗರದಲ್ಲಿ ನ.6ರ ಸೋಮವಾರ ತಡರಾತ್ರಿ ದುಷ್ಕರ್ಮಿಗಳ ತಂಡವೊಂದು ತಲವಾರಿನಿಂದ ಕೊಚ್ಚಿ ಕೊಲೆಗೈದ ಘಟನೆ ನಡೆದಿದೆ.
ಅಕ್ಷಯ್ ಕಲ್ಲೇಗ ಕಳೆದ 6 ವರ್ಷಗಳಿಂದ ಇವರು ಟೈಗರ್ಸ್ ಕಲ್ಲೇಗ ಎಂಬ ಹುಲಿ ವೇಷ ತಂಡವನ್ನು ಮುನ್ನಡೆಸುತ್ತಿದ್ದರು. ಈ ತಂಡ ಹಲವು ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನೂ ಬಾಚಿಕೊಂಡಿತ್ತು.
ಕ್ಷುಲ್ಲಕ ಕಾರಣವೊಂದಕ್ಕೆ ಅಕ್ಷಯ್ ಹಾಗೂ ಕೃತ್ಯ ಎಸಗಿದ ತಂಡದ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಅದರ ಮುಂದುವರಿದ ಭಾಗವಾಗಿ ಅಕ್ಷಯ್ ನನ್ನು ಹತ್ಯೆ ಮಾಡಲಾಗಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಅಕ್ಷಯ್ ನನ್ನು ದುಷ್ಕರ್ಮಿಗಳ ತಂಡ ನೆಹರೂ ನಗರಕ್ಕೆ ಬರಲು ಹೇಳಿ ಬಳಿಕ ಅಟ್ಟಾಡಿಸಿಕೊಂಡು ಹತ್ಯೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ಕೃತ್ಯ ನಡೆದ ಕೆಲ ಗಂಟೆಯ ಬಳಿಕ ಮನೀಶ್ ಹಾಗೂ ಚೇತು ಎಂಬವರು ಪೊಲೀಸರಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದ್ದು, ಅವರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದು ಬಂದಿದೆ. ಇನ್ನೊರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ ಎನ್ನಲಾಗುತ್ತಿದೆ.
ಅಕ್ಷಯ್ ವಿವೇಕಾನಂದ ಕಾಲೇಜ್ ಬಳಿ ನಿವಾಸಿಯಾಗಿದ್ದು, ತಂದೆ ಚಂದ್ರಶೇಖರ, ತಾಯಿ ಕುಸುಮ, ಇಬ್ಬರು ಸಹೋದರರನ್ನು ಅಗಲಿದ್ದಾರೆ. ಪುತ್ತೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…