Featured

ಪುತ್ತೂರು:ನಾನು ಯಾವುದೇ ಪಕ್ಷದ ಮುಖಂಡರೊಂದಿಗೆ ಹೊಂದಾಣಿಕೆ ಮಾಡಿಕೊಂಡಿಲ್ಲ : ಅರುಣ್‌ ಕುಮಾರ್‌ ಪುತ್ತಿಲ – Vishwanews24

ಪುತ್ತೂರು: ನನ್ನ ಮೇಲೆ ಆರೋಪ ಮಾಡುವವರು ಪುತ್ತೂರು ಮಹಾಲಿಂಗೇಶ್ವರ ನಡೆಗೆ ಬರಲಿ , ಆಣೆ, ಪ್ರಮಾಣಕ್ಕೆ ಸಿದ್ಧ : ಅರುಣ್‌ ಕುಮಾರ್‌ ಪುತ್ತಿಲ ಸವಾಲು..

ನನ್ನ ವಿರುದ್ಧ ಮಾಡುತ್ತಿರುವ ಅಪಪ್ರಚಾರವನ್ನು ಉಳ್ಳಾಲ ಕ್ಷೇತ್ರದಲ್ಲಿ ಮಾಡಿದರೆ ಗೆಲ್ಲಬಹುದೇ ಹೊರತು ಪುತ್ತೂರಿನಲ್ಲಿ ಅಲ್ಲ..

ಪುತ್ತೂರು: ನಾನು ಯಾವುದೇ ಪಕ್ಷದ ಮುಖಂಡರೊಂದಿಗೆ ಹೊಂದಾಣಿಕೆ ಮಾಡಿಕೊಂಡಿಲ್ಲ. ನನಗೆ ಯಾರೊಂದಿಗೆ ಹಣಕಾಸಿನ ವ್ಯವಹಾರವಿಲ್ಲ. ನನ್ನ ಮೇಲೆ ಆರೋಪ ಮಾಡುವವರು ಪುತ್ತೂರು ಮಹಾಲಿಂಗೇಶ್ವರ ನಡೆಗೆ ಬರಲಿ ಅಲ್ಲಿ ಆಣೆ, ಪ್ರಮಾಣಕ್ಕೆ ಸಿದ್ಧ ಎಂದು ಪಕ್ಷೇತರ ಅಭ್ಯರ್ಥಿ ಅರುಣ್‌ ಕುಮಾರ್‌ ಪುತ್ತಿಲ ಸವಾಲು ಹಾಕಿದ್ದಾರೆ.

ಸಂಘದ ಶಾಖೆಯಲ್ಲಿ ಕೆಲಸ ಮಾಡಿದವರು ನನ್ನ ವಿರುದ್ಧ ಇಂದು ತೀರಾ ಕೇವಲ ವಿಚಾರಗಳನ್ನು ಮುಂದಿಟ್ಟು ಆರೋಪ ಮಾಡುತ್ತಿದ್ದಾರೆ. ಸಂಘ ಸಂಸ್ಕಾರದಲ್ಲಿ ಬೆಳೆದವರ ಬಾಯಲ್ಲಿ ಇಂತಹ ಮಾತುಗಳನ್ನು ಕೇಳುತ್ತಿರುವುದು ನನಗೆ ಆಶ್ಚರ್ಯ ತಂದಿದೆ ಎಂದರು.

ರಾಘವೇಶ್ವರ ಸ್ವಾಮೀಜಿ ಅವರು ನನಗೆ ಆಶೀರ್ವಾದ ನೀಡಿ ಕಳುಹಿಸಿದ್ದಾರೆ. ಸ್ವಾಮೀಜಿ ಅವರ ವಿಚಾರದಲ್ಲಿ ತಿರುಚಿದ ಮಾಹಿತಿಗಳನ್ನು ಪ್ರಚಾರ ಮಾಡಲಾಗುತ್ತಿದೆ ಎಂದರು. ನನ್ನ ಚಿಹ್ನೆ ಬ್ಯಾಟ್‌ ಆಗಿದ್ದರೂ ಚಿಹ್ನೆ ಕಮಲ ಎಂದು ಪ್ರಚಾರ ಮಾಡುತ್ತಿದ್ದಾರೆ.

ಇದೆಲ್ಲ ಹತಾಶೆ ಪ್ರತೀಕ. ನನ್ನ ವಿರುದ್ಧ ಮಾಡುತ್ತಿರುವ ಅಪಪ್ರಚಾರವನ್ನು ಉಳ್ಳಾಲ ಕ್ಷೇತ್ರದಲ್ಲಿ ಮಾಡಿದರೆ ಗೆಲ್ಲಬಹುದೇ ಹೊರತು ಪುತ್ತೂರಿನಲ್ಲಿ ಅಲ್ಲ ಎಂದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

3 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

3 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago