Featured

ಪುತ್ತೂರು:ವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿ, ನಗ್ನ ಚಿತ್ರ ಸೆರೆಹಿಡಿದು ಹಣಕ್ಕಾಗಿ ಬ್ಯ್ಲಾಕ್ ಮೇಲ್ # ಆರೋಪಿ ಅರೆಸ್ಟ್  – Vishwanews24

ಪುತ್ತೂರು:ವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿ, ನಗ್ನ ಚಿತ್ರ ಸೆರೆಹಿಡಿದು ಹಣಕ್ಕಾಗಿ ಬ್ಯ್ಲಾಕ್ ಮೇಲ್ – ಆರೋಪಿ ಅರೆಸ್ಟ್

ಪುತ್ತೂರು: ವಿವಾಹಿತ ಮಹಿಳೆಗೆ ಅರ್ಕೆಸ್ಟ್ರಾದಲ್ಲಿ ಅವಕಾಶ ನೀಡುವುದಾಗಿ ಹೇಳಿ ಲೈಂಗಿಕವಾಗಿ ಬಳಸಿಕೊಂಡು, ಆಕೆಯ ನಗ್ನ ಚಿತ್ರ ಸೆರೆಹಿಡಿದು ಲಕ್ಷಾಂತರ ರೂ. ಹಣ ನೀಡುವಂತೆ ಬ್ಯ್ಲಾಕ್ ಮೇಲ್ ಮಾಡಿದ ಯುವಕನ ವಿರುದ್ದ ಕಾರವಾರ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿಯನ್ನು ದ.ಕ. ಜಿಲ್ಲೆಯ ಸುಬ್ರಮಣ್ಯ ಗ್ರಾಮ ಪಂಚಾಯತ್ ನ ಮಾಜಿ ಸದಸ್ಯ, ಪುತ್ತೂರಿನ ಆರ್ಲಪದವು ಮೂಲದ ನಿವಾಸಿ ಪ್ರಶಾಂತ ಭಟ್ ಮಾಣಿಲ (೩೫) ಎಂದು ಗುರುತಿಸಲಾಗಿದೆ.

ಸಂತ್ರಸ್ತ ಮಹಿಳೆಗೆ ಸಂಗೀತದಲ್ಲಿ ಆಸಕ್ತಿ ಇದ್ದು ಕ್ಲಬ್ ಹೌಸ್ ಆ್ಯಪ್‌ನಲ್ಲಿ ಹೆಚ್ಚಾಗಿ ಹಾಡು ಕೇಳುತ್ತಿದ್ದಳು. 2020 ರಲ್ಲಿ ಆ್ಯಪ್ ಮೂಲಕವೇ ಆರೋಪಿಯ ಪರಿಚಯವಾಗಿದೆ. ಪರಿಚಯ ಸ್ನೇಹಕ್ಕೆ ತಿರುಗಿ ಆರ್ಕೆಸ್ಟ್ರಾದಲ್ಲಿ ಹಾಡಲು ಅವಕಾಶ ಕೊಡಿಸುವುದಾಗಿ ಹೇಳಿ ಆಸೆ ಹುಟ್ಟಿಸಿದ್ದು, ೨ ವರ್ಷಗಳ ಕಾಲ ಇವರು ಪೋನ್ ಹಾಗೂ ಪೇಸ್ ಬುಕ್ ಮೂಲಕ ಸಂಪರ್ಕದಲ್ಲಿದ್ದರು.

2023ರ ಜನವರಿ ತಿಂಗಳಲ್ಲಿ ಆರೋಪಿಯು ಮಹಿಳೆಯನ್ನು ಶಿರಸಿ ದೇವಾಲಯದಲ್ಲಿ ಭೇಟಿಯಾಗಿ ಅಲ್ಲಿಂದ ಖಾಸಗಿ ಲಾಡ್ಜ್ ಒಂದರಲ್ಲಿ ರೂಂ ಮಾಡಿ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಈ ವೇಳೆ ಆರೋಪಿಯು ಮಹಿಳೆಯೊಂದಿಗಿರುವ ಖಾಸಗಿ ಕ್ಷಣಗಳ ಫೋಟೋ ಕ್ಲಿಕ್ಕಿಸಿಕೊಂಡಿದ್ದಾನೆ. ಜತೆಗೆ ವಿಡಿಯೋ ಕಾಲ್ ಮಾಡಿ ಅಲ್ಲಯೂ ನಗ್ನ ದೃಶ್ಯಗಳನ್ನು ಸೆರೆ ಹಿಡಿದಿದ್ದಾನೆ ಎಂದು ದೂರಲಾಗಿದೆ.

ಇದಾದ ಬಳಿಕ ಆರೋಪಿಯು ಮಹಿಳೆಯ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದು, ಮಹಿಳೆಯು ಬೆದರಿಕೆ ಹೆದರಿ 25 ಸಾವಿರ ಹಣ ನೀಡಿದ್ದಾಳೆ. ನಂತರ ಆರೋಪಿಯೂ ಸಂತ್ರಸ್ತ ಮಹಿಳೆಯ ಖಾಸಗಿ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿ ಬೆದರಿಕೆ ನೀಡಿ ಏಳು ಲಕ್ಷ ರೂ. ಗಳಿಗೆ ಬೇಡಿಕೆ ಇಟ್ಟಿದ್ದಾನೆ. ಅಲ್ಲದೇ ತಾಯಿ ಹಾಗು ಸ್ನೇಹಿತರಿಗೂ ಖಾಸಗಿ ಕ್ಷಣಗಳ ಚಿತ್ರಗಳನ್ನು ಕಳುಹಿಸಿದ್ದು, ಮತ್ತೆ ಹಣಕ್ಕಾಗಿ ಬ್ಯ್ಲಾಕ್ ಮೇಲ್ ಮಾಡುತ್ತಿರುವ ಬಗ್ಗೆ ಮಹಿಳೆ ನೀಡಿದ ದೂರಿನಂತೆ ಕಾರವಾರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

16 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

16 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

16 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

16 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

16 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

18 hours ago