Featured

ಪುತ್ತೂರು:ವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿ, ನಗ್ನ ಚಿತ್ರ ಸೆರೆಹಿಡಿದು ಹಣಕ್ಕಾಗಿ ಬ್ಯ್ಲಾಕ್ ಮೇಲ್ # ಆರೋಪಿ ಅರೆಸ್ಟ್  – Vishwanews24

ಪುತ್ತೂರು:ವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿ, ನಗ್ನ ಚಿತ್ರ ಸೆರೆಹಿಡಿದು ಹಣಕ್ಕಾಗಿ ಬ್ಯ್ಲಾಕ್ ಮೇಲ್ – ಆರೋಪಿ ಅರೆಸ್ಟ್

ಪುತ್ತೂರು: ವಿವಾಹಿತ ಮಹಿಳೆಗೆ ಅರ್ಕೆಸ್ಟ್ರಾದಲ್ಲಿ ಅವಕಾಶ ನೀಡುವುದಾಗಿ ಹೇಳಿ ಲೈಂಗಿಕವಾಗಿ ಬಳಸಿಕೊಂಡು, ಆಕೆಯ ನಗ್ನ ಚಿತ್ರ ಸೆರೆಹಿಡಿದು ಲಕ್ಷಾಂತರ ರೂ. ಹಣ ನೀಡುವಂತೆ ಬ್ಯ್ಲಾಕ್ ಮೇಲ್ ಮಾಡಿದ ಯುವಕನ ವಿರುದ್ದ ಕಾರವಾರ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿಯನ್ನು ದ.ಕ. ಜಿಲ್ಲೆಯ ಸುಬ್ರಮಣ್ಯ ಗ್ರಾಮ ಪಂಚಾಯತ್ ನ ಮಾಜಿ ಸದಸ್ಯ, ಪುತ್ತೂರಿನ ಆರ್ಲಪದವು ಮೂಲದ ನಿವಾಸಿ ಪ್ರಶಾಂತ ಭಟ್ ಮಾಣಿಲ (೩೫) ಎಂದು ಗುರುತಿಸಲಾಗಿದೆ.

ಸಂತ್ರಸ್ತ ಮಹಿಳೆಗೆ ಸಂಗೀತದಲ್ಲಿ ಆಸಕ್ತಿ ಇದ್ದು ಕ್ಲಬ್ ಹೌಸ್ ಆ್ಯಪ್‌ನಲ್ಲಿ ಹೆಚ್ಚಾಗಿ ಹಾಡು ಕೇಳುತ್ತಿದ್ದಳು. 2020 ರಲ್ಲಿ ಆ್ಯಪ್ ಮೂಲಕವೇ ಆರೋಪಿಯ ಪರಿಚಯವಾಗಿದೆ. ಪರಿಚಯ ಸ್ನೇಹಕ್ಕೆ ತಿರುಗಿ ಆರ್ಕೆಸ್ಟ್ರಾದಲ್ಲಿ ಹಾಡಲು ಅವಕಾಶ ಕೊಡಿಸುವುದಾಗಿ ಹೇಳಿ ಆಸೆ ಹುಟ್ಟಿಸಿದ್ದು, ೨ ವರ್ಷಗಳ ಕಾಲ ಇವರು ಪೋನ್ ಹಾಗೂ ಪೇಸ್ ಬುಕ್ ಮೂಲಕ ಸಂಪರ್ಕದಲ್ಲಿದ್ದರು.

2023ರ ಜನವರಿ ತಿಂಗಳಲ್ಲಿ ಆರೋಪಿಯು ಮಹಿಳೆಯನ್ನು ಶಿರಸಿ ದೇವಾಲಯದಲ್ಲಿ ಭೇಟಿಯಾಗಿ ಅಲ್ಲಿಂದ ಖಾಸಗಿ ಲಾಡ್ಜ್ ಒಂದರಲ್ಲಿ ರೂಂ ಮಾಡಿ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಈ ವೇಳೆ ಆರೋಪಿಯು ಮಹಿಳೆಯೊಂದಿಗಿರುವ ಖಾಸಗಿ ಕ್ಷಣಗಳ ಫೋಟೋ ಕ್ಲಿಕ್ಕಿಸಿಕೊಂಡಿದ್ದಾನೆ. ಜತೆಗೆ ವಿಡಿಯೋ ಕಾಲ್ ಮಾಡಿ ಅಲ್ಲಯೂ ನಗ್ನ ದೃಶ್ಯಗಳನ್ನು ಸೆರೆ ಹಿಡಿದಿದ್ದಾನೆ ಎಂದು ದೂರಲಾಗಿದೆ.

ಇದಾದ ಬಳಿಕ ಆರೋಪಿಯು ಮಹಿಳೆಯ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದು, ಮಹಿಳೆಯು ಬೆದರಿಕೆ ಹೆದರಿ 25 ಸಾವಿರ ಹಣ ನೀಡಿದ್ದಾಳೆ. ನಂತರ ಆರೋಪಿಯೂ ಸಂತ್ರಸ್ತ ಮಹಿಳೆಯ ಖಾಸಗಿ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿ ಬೆದರಿಕೆ ನೀಡಿ ಏಳು ಲಕ್ಷ ರೂ. ಗಳಿಗೆ ಬೇಡಿಕೆ ಇಟ್ಟಿದ್ದಾನೆ. ಅಲ್ಲದೇ ತಾಯಿ ಹಾಗು ಸ್ನೇಹಿತರಿಗೂ ಖಾಸಗಿ ಕ್ಷಣಗಳ ಚಿತ್ರಗಳನ್ನು ಕಳುಹಿಸಿದ್ದು, ಮತ್ತೆ ಹಣಕ್ಕಾಗಿ ಬ್ಯ್ಲಾಕ್ ಮೇಲ್ ಮಾಡುತ್ತಿರುವ ಬಗ್ಗೆ ಮಹಿಳೆ ನೀಡಿದ ದೂರಿನಂತೆ ಕಾರವಾರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

6 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

7 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

7 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

7 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

8 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

8 hours ago