ಪುತ್ತೂರು: ವಿವಾಹಿತ ಮಹಿಳೆಗೆ ಅರ್ಕೆಸ್ಟ್ರಾದಲ್ಲಿ ಅವಕಾಶ ನೀಡುವುದಾಗಿ ಹೇಳಿ ಲೈಂಗಿಕವಾಗಿ ಬಳಸಿಕೊಂಡು, ಆಕೆಯ ನಗ್ನ ಚಿತ್ರ ಸೆರೆಹಿಡಿದು ಲಕ್ಷಾಂತರ ರೂ. ಹಣ ನೀಡುವಂತೆ ಬ್ಯ್ಲಾಕ್ ಮೇಲ್ ಮಾಡಿದ ಯುವಕನ ವಿರುದ್ದ ಕಾರವಾರ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಯನ್ನು ದ.ಕ. ಜಿಲ್ಲೆಯ ಸುಬ್ರಮಣ್ಯ ಗ್ರಾಮ ಪಂಚಾಯತ್ ನ ಮಾಜಿ ಸದಸ್ಯ, ಪುತ್ತೂರಿನ ಆರ್ಲಪದವು ಮೂಲದ ನಿವಾಸಿ ಪ್ರಶಾಂತ ಭಟ್ ಮಾಣಿಲ (೩೫) ಎಂದು ಗುರುತಿಸಲಾಗಿದೆ.
ಸಂತ್ರಸ್ತ ಮಹಿಳೆಗೆ ಸಂಗೀತದಲ್ಲಿ ಆಸಕ್ತಿ ಇದ್ದು ಕ್ಲಬ್ ಹೌಸ್ ಆ್ಯಪ್ನಲ್ಲಿ ಹೆಚ್ಚಾಗಿ ಹಾಡು ಕೇಳುತ್ತಿದ್ದಳು. 2020 ರಲ್ಲಿ ಆ್ಯಪ್ ಮೂಲಕವೇ ಆರೋಪಿಯ ಪರಿಚಯವಾಗಿದೆ. ಪರಿಚಯ ಸ್ನೇಹಕ್ಕೆ ತಿರುಗಿ ಆರ್ಕೆಸ್ಟ್ರಾದಲ್ಲಿ ಹಾಡಲು ಅವಕಾಶ ಕೊಡಿಸುವುದಾಗಿ ಹೇಳಿ ಆಸೆ ಹುಟ್ಟಿಸಿದ್ದು, ೨ ವರ್ಷಗಳ ಕಾಲ ಇವರು ಪೋನ್ ಹಾಗೂ ಪೇಸ್ ಬುಕ್ ಮೂಲಕ ಸಂಪರ್ಕದಲ್ಲಿದ್ದರು.
2023ರ ಜನವರಿ ತಿಂಗಳಲ್ಲಿ ಆರೋಪಿಯು ಮಹಿಳೆಯನ್ನು ಶಿರಸಿ ದೇವಾಲಯದಲ್ಲಿ ಭೇಟಿಯಾಗಿ ಅಲ್ಲಿಂದ ಖಾಸಗಿ ಲಾಡ್ಜ್ ಒಂದರಲ್ಲಿ ರೂಂ ಮಾಡಿ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಈ ವೇಳೆ ಆರೋಪಿಯು ಮಹಿಳೆಯೊಂದಿಗಿರುವ ಖಾಸಗಿ ಕ್ಷಣಗಳ ಫೋಟೋ ಕ್ಲಿಕ್ಕಿಸಿಕೊಂಡಿದ್ದಾನೆ. ಜತೆಗೆ ವಿಡಿಯೋ ಕಾಲ್ ಮಾಡಿ ಅಲ್ಲಯೂ ನಗ್ನ ದೃಶ್ಯಗಳನ್ನು ಸೆರೆ ಹಿಡಿದಿದ್ದಾನೆ ಎಂದು ದೂರಲಾಗಿದೆ.
ಇದಾದ ಬಳಿಕ ಆರೋಪಿಯು ಮಹಿಳೆಯ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದು, ಮಹಿಳೆಯು ಬೆದರಿಕೆ ಹೆದರಿ 25 ಸಾವಿರ ಹಣ ನೀಡಿದ್ದಾಳೆ. ನಂತರ ಆರೋಪಿಯೂ ಸಂತ್ರಸ್ತ ಮಹಿಳೆಯ ಖಾಸಗಿ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿ ಬೆದರಿಕೆ ನೀಡಿ ಏಳು ಲಕ್ಷ ರೂ. ಗಳಿಗೆ ಬೇಡಿಕೆ ಇಟ್ಟಿದ್ದಾನೆ. ಅಲ್ಲದೇ ತಾಯಿ ಹಾಗು ಸ್ನೇಹಿತರಿಗೂ ಖಾಸಗಿ ಕ್ಷಣಗಳ ಚಿತ್ರಗಳನ್ನು ಕಳುಹಿಸಿದ್ದು, ಮತ್ತೆ ಹಣಕ್ಕಾಗಿ ಬ್ಯ್ಲಾಕ್ ಮೇಲ್ ಮಾಡುತ್ತಿರುವ ಬಗ್ಗೆ ಮಹಿಳೆ ನೀಡಿದ ದೂರಿನಂತೆ ಕಾರವಾರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…
ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…
ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…