ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಿಜೆಪಿ ಶಾಸಕ ಸಂಜೀವ ಮಠಂದೂರು ಗೆ ಟಿಕೆಟ್ ಕೈ ತಪ್ಪಿದ ಹಿನ್ನಲೆ ಬಿಜೆಪಿಯ ಜಿಲ್ಲಾಧ್ಯಕ್ಷರನ್ನು ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ಸದ್ಯ ಈ ಕುರಿತಾದ ಸಣ್ಣ ವಿಡಿಯೋ ತುಣುಕೊಂದು ಸಾಮಾಜಿಕ ವೈರಲ್ ಆಗುತ್ತಿದೆ. ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ ಹಾಗು ಗಣೇಶ್ ಕಾರ್ಣಿಕ್ ಅವರು ಹಾಲಿ ಶಾಸಕರನ್ನು ಸಮಾಧಾನ ಪಡಿಸಲು ಮಠಂದೂರು ನಿವಾಸಕ್ಕೆ ಆಗಮಿಸಿದ್ದ ವೇಳೆ ಅವರನ್ನು ತಡೆದು ಕಾರ್ಯಕರ್ತರು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ವೇಳೆ ಜಿಲ್ಲಾಧ್ಯಕ್ಷರಿಗೆ ಪ್ರಶ್ನೆಗಳ ಸುರಿ ಮಳೆಗೈದ ಕಾರ್ಯಕರ್ತರು ಸಂಜೀವ ಮಠಂದೂರು ಅವರನ್ನ ಕಡೆಗಣಿಸಲು ಕಾರಣವೇನು..? ಟಿಕೆಟ್ ವಿಚಾರದಲ್ಲಿ ಜಿಲ್ಲೆಯ ಪದಾಧಿಕಾರಿಗಳ ನಿರ್ಣಯಕ್ಕೆ ಬೆಲೆ ಇಲ್ಲವೇ..?., ಹಾಗಾದರೆ ನೀವು ಅ ಹುದ್ದೆಯಲ್ಲಿರುವುದು ಯಾಕೆ..?.,
ಸಂಜೀವ ಮಠಂದೂರು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನ ಮಾಡಿದ್ದಾರೆ. ಪಕ್ಷಕ್ಕಾಗಿ ಹಗಲಿರುಳು ಶ್ರಮಿಸಿದ್ದಾರೆ. ಅವರನ್ನು ಕಡೆಗಣಿಸುವುದು ಎಂದರೆ ಇದರ ಅರ್ಥವೇನು..?., ಪ್ರಾಮಾಣಿಕರಿಗೆ ಬಿಜೆಪಿಯಲ್ಲಿ ಬೆಲೆ ಇಲ್ಲ ಎಂದಾಯಿತು. ನಾವು ಬಿಜೆಪಿ ಪರವಾಗಿ ಕೆಲಸ ಮಾಡುವುದಿಲ್ಲ. ನೀವೇ ಪ್ರಚಾರ ಕಾರ್ಯ ನಡೆಸಿ.ಪಕ್ಷದ ಅಭ್ಯರ್ಥಿಯನ್ನ ಗೆಲ್ಲಿಸಿಕೊಳ್ಳಿ ಎಂದು ಅಸಹನೆ ವ್ಯಕ್ತಪಡಿಸಿದರು.
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…
ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…
ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ - ಫಲ್ಗುಣಿ ನದಿಯಲ್ಲಿ ಶೋಧ…
ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…
ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…