ಪುತ್ತೂರು: ಪಾಣಾಜೆ ನಿವಾಸಿ ಪ್ರೇಮ್ರಾಜ್ ಅವರ ದೂರಿನ ಮೇರೆಗೆ ನಡುರಸ್ತೆಯಲ್ಲಿ ಬಿಟ್ಟುಹೋಗಲಾದ ಗೋವುಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನ.29 ರಂದು ಬೆಳಿಗ್ಗೆ, ಯಾರೋ ಕಳ್ಳರು ಗೋವುಗಳನ್ನು ಅಕ್ರಮವಾಗಿ ವಾಹನದಲ್ಲಿ ಸಾಗಿಸುತ್ತಿರುವ ವೇಳೆ, ವಾಹನ ದುರಸ್ತಿಗೀಡಾಗಿ ಪುತ್ತೂರು ನರಿಮೊಗರು ಪ್ರದೇಶದಲ್ಲಿ ನಡುರಸ್ತೆಯಲ್ಲೇ ಗೋವುಗಳನ್ನು ಬಿಟ್ಟು ಪರಾರಿಯಾದಿದ್ದಾರೆ. ಸ್ಥಳೀಯರ ಸಹಕಾರದಿಂದ ಪಿರ್ಯಾದುದಾರ ಪ್ರೇಮ್ರಾಜ್ ಅವರು ಗೋವುಗಳನ್ನು ಪುತ್ತೂರು ನಗರ ಠಾಣೆಗೆ ಹಸ್ತಾಂತರಿಸಿದ್ದಾರೆ. ಗೋವುಗಳನ್ನು ಕಳವು ಮಾಡಿ ಸಾಗಿಸಲಾಗುತ್ತಿದೆಯೇ ಎಂಬ ಅನುಮಾನ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳುವಂತೆ ಅವರು ದೂರು ನೀಡಿದ್ದಾರೆ.
ದೂರಿನ ಆಧಾರದಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ತನಿಖೆಯಲ್ಲಿ, ಉಳ್ಳಾಲ ಸಜಿಪನಡು ನಿವಾಸಿಗಳಾದ ಆಶಿಕ್ ಪಾಷಾ (26) ಹಾಗೂ ಅಬ್ದುಲ್ ಲತೀಫ್ (25) ಅವರು ಕೆಎ 52 4889 ನೋಂದಣಿಯ ಇನ್ನೋವಾ ಕಾರಿನಲ್ಲಿ 4 ಕರುಗಳು ಮತ್ತು 1 ದನವನ್ನು ಅಕ್ರಮವಾಗಿ ಸಾಗಿಸುತ್ತಿದ್ದಾಗ ವಾಹನ ದುರಸ್ತಿಗೀಡಾಗಿದ್ದು, ಜಾನುವಾರುಗಳನ್ನು ರಸ್ತೆಯಲ್ಲಿ ಬಿಟ್ಟು ವಾಹನದೊಂದಿಗೆ ತೆರಳಿರುವುದು ಬೆಳಕಿಗೆ ಬಂದಿದೆ.
ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಜಾನುವಾರುಗಳನ್ನು ಸಾಗಿಸಲು ಬಳಸಿದ ಇನ್ನೋವಾ ಕಾರನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…