ಪುತ್ತೂರು : ಅಕ್ಷಯ್ ಕಲ್ಲೇಗ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಿವೇಂಜ್ ಕೊಲೆ ಮಾಡಲು ಹೊಂಚು ಹಾಕುತ್ತಿದ್ದ ನಾಲ್ವರನ್ನು ಪುತ್ತೂರು ಪೊಲೀಸರು ಅರೆಸ್ಟ್ ಮಾಡಿದ್ದು, ಆಗಬಹುದಾಗಿದ್ದ ಕೃತ್ಯವನ್ನು ಪೊಲೀಸರು ತಡೆದಿದ್ದಾರೆ. ಬಂಧಿತರನ್ನು ಬಂಟ್ವಾಳ ನಿವಾಸಿ ಕಿಶೋರ್ ಕಲ್ಲಡ್ಕ (36), ಪುತ್ತೂರಿನ ಮನೋಜ್ (23), ಆಶಿಕ್ (28), ಸನತ್ ಕುಮಾರ್ (24) ಎಂದು ಗುರುತಿಸಲಾಗಿದೆ.
ಬಂಧಿತರು ಅಕ್ಷಯ್ ಕಲ್ಲೆಗ ಕೊಲೆ ಪ್ರಕರಣದ ಆರೋಪಿ ಮನೀಶ್ ಸಹೋದರ ಮನೋಜ್ ನ ಮೇಲೆ ಸೇಡು ತೀರಿಸಿಕೊಳ್ಳಲು ಹಾಕಿದ್ದರು. ಈ ಮೊದಲು ಮನೋಜ್ ಗೆ ಬೆದರಿಕೆ ಕರೆ ಮಾಡಿರುವ ಆರೋಪಿಗಳು ನಿನ್ನ ತಮ್ಮ ಮನೀಶ್ ಹಾಗೂ ಉಳಿದ ಆರೋಪಿಗಳು ಜೈಲಿನಿದ್ದಾರೆ, ಆದ್ರೆ ನಿನ್ನನ್ನ ಬಿಡಲ್ಲ ಎಂದು ಫೋನ್ ಕರೆ ಮಾಡಿ ಬೆದರಿಕೆ ಹಾಕಿದ್ದರು.
ಈ ಹಿನ್ನಲೆ ಮನೋಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ನಡುವೆ ಮನೋಜ್ ಚಲನವಲನವನ್ನ ಗಮನಿಸುತ್ತಿದ್ದ ದುಷ್ಕರ್ಮಿಗಳ ತಂಡ, ಪುತ್ತೂರಿನ ಮುಕ್ರಂಪಾಡಿಯಲ್ಲಿ ಎಂಬಲ್ಲಿ ಕಾರಿನಲ್ಲಿ ತಲ್ವಾರ್ ಸಹಿತ ಮನೋಜ್ ಮೇಲೆ ರಿವೆಂಜ್ ತಿರಿಸಿಕೊಳ್ಳಲು ಆಗಮಿಸಿದ್ದರು. ಈ ವೇಳೆ ಖಚಿತ ಮಾಹಿತಿ ಮೇಲೆ ದಾಳಿ ನಡೆಸಿದ ಪೊಲೀಸರು ಕಾರಿನಲ್ಲಿದ್ದ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…