ಪುತ್ತೂರು : ಅಕ್ಷಯ್ ಕಲ್ಲೇಗ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಿವೇಂಜ್ ಕೊಲೆ ಮಾಡಲು ಹೊಂಚು ಹಾಕುತ್ತಿದ್ದ ನಾಲ್ವರನ್ನು ಪುತ್ತೂರು ಪೊಲೀಸರು ಅರೆಸ್ಟ್ ಮಾಡಿದ್ದು, ಆಗಬಹುದಾಗಿದ್ದ ಕೃತ್ಯವನ್ನು ಪೊಲೀಸರು ತಡೆದಿದ್ದಾರೆ. ಬಂಧಿತರನ್ನು ಬಂಟ್ವಾಳ ನಿವಾಸಿ ಕಿಶೋರ್ ಕಲ್ಲಡ್ಕ (36), ಪುತ್ತೂರಿನ ಮನೋಜ್ (23), ಆಶಿಕ್ (28), ಸನತ್ ಕುಮಾರ್ (24) ಎಂದು ಗುರುತಿಸಲಾಗಿದೆ.
ಬಂಧಿತರು ಅಕ್ಷಯ್ ಕಲ್ಲೆಗ ಕೊಲೆ ಪ್ರಕರಣದ ಆರೋಪಿ ಮನೀಶ್ ಸಹೋದರ ಮನೋಜ್ ನ ಮೇಲೆ ಸೇಡು ತೀರಿಸಿಕೊಳ್ಳಲು ಹಾಕಿದ್ದರು. ಈ ಮೊದಲು ಮನೋಜ್ ಗೆ ಬೆದರಿಕೆ ಕರೆ ಮಾಡಿರುವ ಆರೋಪಿಗಳು ನಿನ್ನ ತಮ್ಮ ಮನೀಶ್ ಹಾಗೂ ಉಳಿದ ಆರೋಪಿಗಳು ಜೈಲಿನಿದ್ದಾರೆ, ಆದ್ರೆ ನಿನ್ನನ್ನ ಬಿಡಲ್ಲ ಎಂದು ಫೋನ್ ಕರೆ ಮಾಡಿ ಬೆದರಿಕೆ ಹಾಕಿದ್ದರು.
ಈ ಹಿನ್ನಲೆ ಮನೋಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ನಡುವೆ ಮನೋಜ್ ಚಲನವಲನವನ್ನ ಗಮನಿಸುತ್ತಿದ್ದ ದುಷ್ಕರ್ಮಿಗಳ ತಂಡ, ಪುತ್ತೂರಿನ ಮುಕ್ರಂಪಾಡಿಯಲ್ಲಿ ಎಂಬಲ್ಲಿ ಕಾರಿನಲ್ಲಿ ತಲ್ವಾರ್ ಸಹಿತ ಮನೋಜ್ ಮೇಲೆ ರಿವೆಂಜ್ ತಿರಿಸಿಕೊಳ್ಳಲು ಆಗಮಿಸಿದ್ದರು. ಈ ವೇಳೆ ಖಚಿತ ಮಾಹಿತಿ ಮೇಲೆ ದಾಳಿ ನಡೆಸಿದ ಪೊಲೀಸರು ಕಾರಿನಲ್ಲಿದ್ದ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…