ಪುತ್ತೂರು : ಅಕ್ಷಯ ಕಲ್ಲೇಗ ನನ್ನು 58 ಬಾರಿ ಇರಿದು ಬರ್ಬರವಾಗಿ ಕೊಲೆ ಮಾಡಿದ್ದ ದುಷ್ಕರ್ಮಿಗಳು – vishwanews24
ಪುತ್ತೂರು : ಅಕ್ಷಯ ಕಲ್ಲೇಗ ನನ್ನು 58 ಬಾರಿ ಇರಿದು ಬರ್ಬರವಾಗಿ ಕೊಲೆ ಮಾಡಿದ್ದ ದುಷ್ಕರ್ಮಿಗಳು
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕಲ್ಲೇಗ ಟೈಗರ್ಸ್ ಟೀಂನ ಅಕ್ಷಯ್ ಕಲ್ಲೇಗ ಅವರನ್ನು ದುಷ್ಕರ್ಮಿಗಳು ಮನಸ್ಸೋ ಇಚ್ಛೆ 58 ಬಾರಿ ಇರಿದು ಬರ್ಬರವಾಗಿ ಕೊಲೆ ಮಾಡಿರುವುದು ಬಯಲಾಗಿದೆ.
ಪ್ರಕರಣ ಸಂಬಂಧ ಇದೀಗ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಚೇತನ್, ಮನೀಶ್, ಮಂಜ ಹಾಗೂ ಕೇಶವ ಎಂದು ಗುರುತಿಸಲಾಗಿದೆ. ಗಾಂಜಾ ಮತ್ತಿನಲ್ಲಿ ಅಕ್ಷಯ್ ಮೇಲೆ ಮಚ್ಚು ಬೀಸಿರೋ ಶಂಕೆ ವ್ಯಕ್ತವಾಗುತ್ತಿದೆ. 58 ಬಾರಿ ತಲವಾರಿನಿಂದ ಹಲ್ಲೆ ಮಾಡಿರುವುದು ಮರಣೋತ್ತರ ಪರೀಕ್ಷೆ ವೇಳೆ ಬೆಳಕಿಗೆ ಬಂದಿದೆ. ಅಕ್ಷಯ್ ದೇಹದ ಮೇಲಿನ ಗಾಯ ಕಂಡು ವೈದ್ಯರೇ ಶಾಕ್ ಆಗಿದ್ದಾರೆ. ಹಂತಕರು ಮನಸೋ ಇಚ್ಛೆ ಅಕ್ಷಯ್ ಮೇಲೆ ತಲವಾರು ಬೀಸಿದ್ದಾರೆ.ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರಿಸಲಾಯಿತು. ಪುತ್ತೂರಿನ ನೆಹರು ನಗರದ ಅಕ್ಷಯ್ ಮನೆಗೆ ಮೃತದೇಹ ಆಗಮಿಸುತ್ತಿದ್ದಂತೆಯೇ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತು.
