Featured

ಪುತ್ತೂರು : ಅತ್ಯಾಚಾರ ಆರೋಪ ಪ್ರಕರಣ ; ಸಂತ್ರಸ್ತೆಗೆ ನ್ಯಾಯ ಒದಗಿಸುವಂತೆ  ಎಸ್ ಡಿಪಿಐ ಪ್ರತಿಭಟನೆ – vishwanews24

ಪುತ್ತೂರು : ಅತ್ಯಾಚಾರ ಆರೋಪ ಪ್ರಕರಣ ; ಸಂತ್ರಸ್ತೆಗೆ ನ್ಯಾಯ ಒದಗಿಸುವಂತೆ  ಎಸ್ ಡಿಪಿಐ ಪ್ರತಿಭಟನೆ

ಪುತ್ತೂರು: ಬಿಜೆಪಿ ಮುಖಂಡನ ಪುತ್ರನ ಅತ್ಯಾಚಾರ ಆರೋಪ ಪ್ರಕರಣವನ್ನು ಖಂಡಿಸಿ ಹಾಗೂ ಸಂತ್ರಸ್ತೆಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಆಫ್ ಇಂಡಿಯಾ ಪುತ್ತೂರು ವತಿಯಿಂದ ಬುಧವಾರ ಪುತ್ತೂರು ನಗರಸಭೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

ಈ ವೇಳೆ ಮಾತನಾಡಿದ ಎಸ್ಡಿಪಿಐ ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಹಾಗೂ ಬಂಟ್ವಾಳ ಪುರಸಭಾ ಉಪಾಧ್ಯಕ್ಷ ಮನೀಶ್ ಅಲಿ, ರಾಜಕೀಯಕ್ಕಾಗಿ ಹಿಂದುಗಳ ಮನಸ್ಸಿನಲ್ಲಿ ದ್ವೇಷ ಹುಟ್ಟಿಸುವ ಕೆಲಸ ಮಾಡುತ್ತಿರುವ ಸಂಘ ಪರಿವಾರದ ಹಿಂದು ನಾವೆಲ್ಲ ಒಂದು ಎಂಬ ಸ್ಲೋಗನ್ ವೇದಿಕೆಯ ರಾಜಕೀಯಕ್ಕೆ ಸೀಮಿತವಾಗಿದೆ. ಓರ್ವ ತಾಯಿಗೆ ನ್ಯಾಯ ನೀಡಲು ಸಾಧ್ಯವಾಗದ ಈ ಮುಖಂಡರ ಅಸಲಿಯತು ಈಗ ಗೊತ್ತಾಗಿದೆ. ಇವರಿಂದ ಇಲ್ಲಿ ನ್ಯಾಯಕ್ಕಾಗಿ ಹೋರಾಟ ನಡೆಯುತ್ತಿಲ್ಲ ಎಂದು ಆರೋಪಿಸಿದರು. ಹಿಂದುತ್ವವಾದಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಇವತ್ತು ಯಾವ ಮಂಚದ ಅಡಿಯಲ್ಲಿ ಮಲಗಿದ್ದಾರೆ? ಇದೇ ಊರಿನ ಶೋಭಾ ಕರಂದ್ಲಾಜೆ ಎಲ್ಲಿದ್ದಾರೆ? ಚಕ್ರವರ್ತಿ ಸೂಲಿಬೆಲೆ, ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ, ನಳಿನ್ ಕುಮಾರ್ ಕಟೀಲ್, ಸಂಜೀವ ಮಠಂದೂರು ಅವರು ಯಾಕೆ ಸಂತ್ರೆಸ್ತೆಯ ಬೆನ್ನಿಗೆ ನಿಂತಿಲ್ಲ ಎಂದು ಪ್ರಶ್ನಿಸಿದರು.

ಸಂತ್ರಸ್ತೆಯ ತಾಯಿ ಮಾತನಾಡಿ, ನಾನು ಎಲ್ಲಾ ಸಮುದಾಯದ ಬಳಿಗೂ ಹೋಗಿದ್ದೇನೆ. ಎಲ್ಲರೂ ಮಗುವನ್ನು ತೆಗೆಸಿ ಎಂದು ಹೇಳಿದ್ದಾರೆ ಹೊರತು ಮದುವೆ ಮಾಡಿ ಕೊಡಬೇಕೆಂದು ಯಾರು ಹೇಳಿಲ್ಲ. ಹುಡುಗನ ಅಪ್ಪನಲ್ಲಿ ಮಾತನಾಡಿದಾಗ ಅವರು ನಿಮ್ಮ ಮಗು ಬೇರೆ ಅಲ್ಲ ನನ್ನ ಮಗು ಬೇರೆ ಅಲ್ಲ ಮದುವೆ ಮಾಡಿಸುತ್ತೇನೆ ಎಂದು ಹೇಳಿದ್ದರು. ಇದೀಗ ಹುಡುಗನನ್ನು ಅವರ ಅಪ್ಪನೇ ಅಡಗಿಸಿಟ್ಡಿದ್ದಾರೆ. ನನಗೆ ನ್ಯಾಯ ಸಿಗದಾಗ ನಾನು ನನ್ನ ಮಗುವಿಗೆ ನ್ಯಾಯಕ್ಕಾಗಿ ಬೇಕಾದ ಸಂಘಟನೆಯಲ್ಲಿ ಕೇಳಿಕೊಂಡಿದ್ದೇನೆ ಎಂದರು. ಪ್ರತಿಭಟನೆಯಲ್ಲಿ SDPI ಜಿಲ್ಲಾ ಸದಸ್ಯೆ ಝೀನತ್ ಬಂಟ್ವಾಳ, SDPI ಪುತ್ತೂರು ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ಅಶ್ರಪ್ ಬಾವು, ತಾಜುದ್ದಿನ್ ಸಾಲ್ಮರ ಮಾತನಾಡಿದರು.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago