Featured

ಪುತ್ತೂರು ಅತ್ಯಾಚಾರ, ವಂಚನೆ ಪ್ರಕರಣ : ಆರೋಪಿ ಸಂತ್ರಸ್ತ ಯುವತಿಯನ್ನು ವಿವಾಹ ಆಗಲೇಬೇಕು. : ಪ್ರತಿಭಾ ಕುಳಾಯಿ – vishwanews24

ಪುತ್ತೂರು ಅತ್ಯಾಚಾರ, ವಂಚನೆ ಪ್ರಕರಣ : ಆರೋಪಿ ಸಂತ್ರಸ್ತ ಯುವತಿಯನ್ನು ವಿವಾಹ ಆಗಲೇಬೇಕು. : ಪ್ರತಿಭಾ ಕುಳಾಯಿ

ಮಂಗಳೂರು : ಪುತ್ತೂರಿನಲ್ಲಿ ಅವಿವಾಹಿತ ಯುವತಿಗೆ ಜನಿಸಿದ ಮಗು ಸ್ಥಳೀಯ ನಿವಾಸಿ ಕೃಷ್ಣ ರಾವ್ ಎಂಬಾತನದ್ದೇ ಎಂದು ಡಿಎನ್ ಎ ಪರೀಕ್ಷೆಯಲ್ಲಿ ರುಜುವಾತುಗೊಂಡ ಹಿನ್ನೆಲೆಯಲ್ಲಿ ಆತ ಮಗುವಿನ ತಾಯಿಯನ್ನು ಇನ್ನಾದರೂ ವಿವಾಹ ಆಗಲೇಬೇಕು. ತಪ್ಪಿದಲ್ಲಿ ಆತನ ಮನೆಯಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನ್ಯಾಯಕ್ಕಾಗಿ ಧರಣಿ ನಡೆಸುವುದಾಗಿ ಹಿಂದುಳಿದ ವರ್ಗಗಳ ಆಯೋಗ ಸದಸ್ಯೆ ಪ್ರತಿಭಾ ಕುಳಾಯಿ ಎಚ್ಚರಿಸಿದ್ದಾರೆ.

ಮಂಗಳೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷ್ಣ ರಾವ್ ಒಪ್ಪಿದಲ್ಲಿ ಆತನ ಜೊತೆ ಯುವತಿಯ ವಿವಾಹವನ್ನು ನಾನೇ ಸ್ವಂತ ಖರ್ಚಿನಲ್ಲಿ ಮಾಡಿಸುತ್ತೇನೆ. ಪ್ರೀತಿ, ಪ್ರೇಮದ ಹೆಸರಲ್ಲಿ ಲೈಂಗಿಕ ಚಟುವಟಿಕೆ ನಡೆಸಿ, ಬಳಿಕ ಅರ್ಧದಲ್ಲೇ ಕೈಬಿಡುವ ಘಟನೆಗಳು ಮರುಕಳಿಸಬಾರದು. ಇದೊಂದು ಜಿಲ್ಲೆಗೆ ಕಪ್ಪು ಚುಕ್ಕೆ. ಹಾಗಾಗಿ ಈ ಘಟನೆ ಪ್ರೀತಿಸಿ, ಮಗು ಕರುಣಿಸಿ ಯುವತಿಯ ಬಾಳನ್ನು ಅರ್ಧಕ್ಕೇ ಕೈಬಿಡುವವರಿಗೆ ಒಂದು ಪಾಠವಾಗಬೇಕು ಎಂದರು.

ಯುವತಿ ಜೊತೆ ಎಂಟು ವರ್ಷಗಳಿಂದ ಸಂಪರ್ಕದಲ್ಲಿದ್ದ ಕೃಷ್ಣ ರಾವ್, ಕೊನೆಗೆ ವಿವಾಹವಾಗುವುದಾಗಿ ನಂಬಿಸಿ ಕೈಕೊಟ್ಟಿದ್ದಾನೆ. ಆತನ ಮನೆಯವರೂ ಈಗ ಅವರ ಮದುವೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇಂತಹ ಘಟನೆಗಳು ಸಮಾಜದಲ್ಲಿ ತಪ್ಪು ಸಂದೇಶಕ್ಕೆ ಕಾರಣವಾಗುತ್ತದೆ. ಇವರಿಬ್ಬರನ್ನು ಒಂದುಗೂಡಿಸಿ ಸಂತ್ರಸ್ತೆಗೆ ನ್ಯಾಯ ಕೊಡಿಸುವಲ್ಲಿ ಹಿಂದುತ್ವ ಸಂಘಟನೆಗಳು, ಸ್ವಯಂಘೋಷಿತ ಮುಖಂಡರು ಕೈಚೆಲ್ಲುತ್ತಿರುವುದು ಸರಿಯಲ್ಲ. ಸಂತ್ರಸ್ತೆಯನ್ನು ಸಮುದಾಯ ಸಂಘಟನೆಯವರು ಕೈಬಿಟ್ಟಿದ್ದಾರೆ. ಹಾಗಿರುವಾಗ ಕೇವಲ ಸಮುದಾಯದ ಮುಖಂಡ ನಂಜುಂಡಿ ಮಾತ್ರ ಧೈರ್ಯ ತುಂಬಿ ಬೆಂಬಲಕ್ಕೆ ನಿಂತಿದ್ದಾರೆ. ಈ ಘಟನೆಯಲ್ಲಿ ಸಂತ್ರಸ್ತೆಗೆ ನ್ಯಾಯ ಕೊಡಿಸುವಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಪ್ರತಿಭಾ ಕುಳಾಯಿ ಆಗ್ರಹಿಸಿದರು.

ಸದ್ಯ ಜಾಮೀನಿನಲ್ಲಿರುವ ಕೃಷ್ಣ ರಾವ್ ಕೋರ್ಟ್ ನಲ್ಲಿ ವಿಚಾರಣೆ ವೇಳೆ ನೀಡುವ ಹೇಳಿಕೆಯನ್ನು ಆಧರಿಸಿ ಮುಂದೆ ಹೋರಾಟದ ರೂಪುರೇಷೆ ಹಾಕಿಕೊಳ್ಳಲಾಗುವುದು. ಸಂತ್ರಸ್ತೆಗೆ ನ್ಯಾಯ ಕೊಡಿಸಿಯೇ ಸಿದ್ಧ ಎಂದು ಪ್ರತಿಭಾ ಕುಳಾಯಿ ಹೇಳಿದರು.

ಹಿಂದೂಗಳು ಹತ್ತು ಹತ್ತು ಮಕ್ಕಳನ್ನು ಹೆರುವಂತೆ ಭಾಷಣ ಮಾಡುವ ಹಿಂದುತ್ವ ಮುಖಂಡರು ಇದೀಗ ಹಿಂದೂ ಯುವಕನೊಬ್ಬ ಹಿಂದೂ ಯುವತಿಗೆ ಮಗು ಕರುಣಿಸಿದ ಪ್ರಕರಣದಲ್ಲಿ ಮಾತನಾಡುತ್ತಿಲ್ಲ. ಅನ್ಯಾಯಕ್ಕೊಳಗಾದ ಯುವತಿಗೆ ನ್ಯಾಯ ದೊರಕಿಸುತ್ತಿಲ್ಲ ಎಂದು ಆಕ್ಷೇಪಿಸಿದ ಪ್ರತಿಭಾ ಕುಳಾಯಿ, ಯಾವುದೇ ತಪ್ಪು ಮಾಡದ ಆ ಮಗುವಿನ ಭವಿಷ್ಯದ ಬಗ್ಗೆ ಆಲೋಚಿಸಬೇಕಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಂತ್ರಸ್ತೆಯ ತಾಯಿ ನಮಿತಾ, ಸಮುದಾಯದ ಕಾರ್ಯಕರ್ತೆ ಅರ್ಚನಾ ಉಪಸ್ಥಿತರಿದ್ದರು.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

2 days ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

2 days ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

2 days ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

2 days ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

2 days ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

2 days ago