Featured

ಪುತ್ತೂರು ಅತ್ಯಾಚಾರ, ವಂಚನೆ ಪ್ರಕರಣ : ಆರೋಪಿ ಸಂತ್ರಸ್ತ ಯುವತಿಯನ್ನು ವಿವಾಹ ಆಗಲೇಬೇಕು. : ಪ್ರತಿಭಾ ಕುಳಾಯಿ – vishwanews24

ಪುತ್ತೂರು ಅತ್ಯಾಚಾರ, ವಂಚನೆ ಪ್ರಕರಣ : ಆರೋಪಿ ಸಂತ್ರಸ್ತ ಯುವತಿಯನ್ನು ವಿವಾಹ ಆಗಲೇಬೇಕು. : ಪ್ರತಿಭಾ ಕುಳಾಯಿ

ಮಂಗಳೂರು : ಪುತ್ತೂರಿನಲ್ಲಿ ಅವಿವಾಹಿತ ಯುವತಿಗೆ ಜನಿಸಿದ ಮಗು ಸ್ಥಳೀಯ ನಿವಾಸಿ ಕೃಷ್ಣ ರಾವ್ ಎಂಬಾತನದ್ದೇ ಎಂದು ಡಿಎನ್ ಎ ಪರೀಕ್ಷೆಯಲ್ಲಿ ರುಜುವಾತುಗೊಂಡ ಹಿನ್ನೆಲೆಯಲ್ಲಿ ಆತ ಮಗುವಿನ ತಾಯಿಯನ್ನು ಇನ್ನಾದರೂ ವಿವಾಹ ಆಗಲೇಬೇಕು. ತಪ್ಪಿದಲ್ಲಿ ಆತನ ಮನೆಯಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನ್ಯಾಯಕ್ಕಾಗಿ ಧರಣಿ ನಡೆಸುವುದಾಗಿ ಹಿಂದುಳಿದ ವರ್ಗಗಳ ಆಯೋಗ ಸದಸ್ಯೆ ಪ್ರತಿಭಾ ಕುಳಾಯಿ ಎಚ್ಚರಿಸಿದ್ದಾರೆ.

ಮಂಗಳೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷ್ಣ ರಾವ್ ಒಪ್ಪಿದಲ್ಲಿ ಆತನ ಜೊತೆ ಯುವತಿಯ ವಿವಾಹವನ್ನು ನಾನೇ ಸ್ವಂತ ಖರ್ಚಿನಲ್ಲಿ ಮಾಡಿಸುತ್ತೇನೆ. ಪ್ರೀತಿ, ಪ್ರೇಮದ ಹೆಸರಲ್ಲಿ ಲೈಂಗಿಕ ಚಟುವಟಿಕೆ ನಡೆಸಿ, ಬಳಿಕ ಅರ್ಧದಲ್ಲೇ ಕೈಬಿಡುವ ಘಟನೆಗಳು ಮರುಕಳಿಸಬಾರದು. ಇದೊಂದು ಜಿಲ್ಲೆಗೆ ಕಪ್ಪು ಚುಕ್ಕೆ. ಹಾಗಾಗಿ ಈ ಘಟನೆ ಪ್ರೀತಿಸಿ, ಮಗು ಕರುಣಿಸಿ ಯುವತಿಯ ಬಾಳನ್ನು ಅರ್ಧಕ್ಕೇ ಕೈಬಿಡುವವರಿಗೆ ಒಂದು ಪಾಠವಾಗಬೇಕು ಎಂದರು.

ಯುವತಿ ಜೊತೆ ಎಂಟು ವರ್ಷಗಳಿಂದ ಸಂಪರ್ಕದಲ್ಲಿದ್ದ ಕೃಷ್ಣ ರಾವ್, ಕೊನೆಗೆ ವಿವಾಹವಾಗುವುದಾಗಿ ನಂಬಿಸಿ ಕೈಕೊಟ್ಟಿದ್ದಾನೆ. ಆತನ ಮನೆಯವರೂ ಈಗ ಅವರ ಮದುವೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇಂತಹ ಘಟನೆಗಳು ಸಮಾಜದಲ್ಲಿ ತಪ್ಪು ಸಂದೇಶಕ್ಕೆ ಕಾರಣವಾಗುತ್ತದೆ. ಇವರಿಬ್ಬರನ್ನು ಒಂದುಗೂಡಿಸಿ ಸಂತ್ರಸ್ತೆಗೆ ನ್ಯಾಯ ಕೊಡಿಸುವಲ್ಲಿ ಹಿಂದುತ್ವ ಸಂಘಟನೆಗಳು, ಸ್ವಯಂಘೋಷಿತ ಮುಖಂಡರು ಕೈಚೆಲ್ಲುತ್ತಿರುವುದು ಸರಿಯಲ್ಲ. ಸಂತ್ರಸ್ತೆಯನ್ನು ಸಮುದಾಯ ಸಂಘಟನೆಯವರು ಕೈಬಿಟ್ಟಿದ್ದಾರೆ. ಹಾಗಿರುವಾಗ ಕೇವಲ ಸಮುದಾಯದ ಮುಖಂಡ ನಂಜುಂಡಿ ಮಾತ್ರ ಧೈರ್ಯ ತುಂಬಿ ಬೆಂಬಲಕ್ಕೆ ನಿಂತಿದ್ದಾರೆ. ಈ ಘಟನೆಯಲ್ಲಿ ಸಂತ್ರಸ್ತೆಗೆ ನ್ಯಾಯ ಕೊಡಿಸುವಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಪ್ರತಿಭಾ ಕುಳಾಯಿ ಆಗ್ರಹಿಸಿದರು.

ಸದ್ಯ ಜಾಮೀನಿನಲ್ಲಿರುವ ಕೃಷ್ಣ ರಾವ್ ಕೋರ್ಟ್ ನಲ್ಲಿ ವಿಚಾರಣೆ ವೇಳೆ ನೀಡುವ ಹೇಳಿಕೆಯನ್ನು ಆಧರಿಸಿ ಮುಂದೆ ಹೋರಾಟದ ರೂಪುರೇಷೆ ಹಾಕಿಕೊಳ್ಳಲಾಗುವುದು. ಸಂತ್ರಸ್ತೆಗೆ ನ್ಯಾಯ ಕೊಡಿಸಿಯೇ ಸಿದ್ಧ ಎಂದು ಪ್ರತಿಭಾ ಕುಳಾಯಿ ಹೇಳಿದರು.

ಹಿಂದೂಗಳು ಹತ್ತು ಹತ್ತು ಮಕ್ಕಳನ್ನು ಹೆರುವಂತೆ ಭಾಷಣ ಮಾಡುವ ಹಿಂದುತ್ವ ಮುಖಂಡರು ಇದೀಗ ಹಿಂದೂ ಯುವಕನೊಬ್ಬ ಹಿಂದೂ ಯುವತಿಗೆ ಮಗು ಕರುಣಿಸಿದ ಪ್ರಕರಣದಲ್ಲಿ ಮಾತನಾಡುತ್ತಿಲ್ಲ. ಅನ್ಯಾಯಕ್ಕೊಳಗಾದ ಯುವತಿಗೆ ನ್ಯಾಯ ದೊರಕಿಸುತ್ತಿಲ್ಲ ಎಂದು ಆಕ್ಷೇಪಿಸಿದ ಪ್ರತಿಭಾ ಕುಳಾಯಿ, ಯಾವುದೇ ತಪ್ಪು ಮಾಡದ ಆ ಮಗುವಿನ ಭವಿಷ್ಯದ ಬಗ್ಗೆ ಆಲೋಚಿಸಬೇಕಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಂತ್ರಸ್ತೆಯ ತಾಯಿ ನಮಿತಾ, ಸಮುದಾಯದ ಕಾರ್ಯಕರ್ತೆ ಅರ್ಚನಾ ಉಪಸ್ಥಿತರಿದ್ದರು.

Vishwa News 24

Recent Posts

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

1 hour ago

ಭಟ್ಕಳ ಕಪ್ಪೆಚಿಪ್ಪು ದುರಂತ : ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ – vishwanews24

ಭಟ್ಕಳ ಕಪ್ಪೆಚಿಪ್ಪು ದುರಂತ : ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ ಕಾರವಾರ: ಕಪ್ಪೆಚಿಪ್ಪು ತೆಗೆಯಲು ಹೋಗಿ ಸಾವನ್ನಪ್ಪಿದ್ದ 11 ಮಂದಿಯ…

1 hour ago

ಕಂದಕಕ್ಕೆ ಉರುಳಿದ ಕಾರು : ಎಂಟು ಮಂದಿ ಸಾವು – vishwanews24

ಕಂದಕಕ್ಕೆ ಉರುಳಿದ ಕಾರು : ಎಂಟು ಮಂದಿ ಸಾವು ಜೈಪುರ: ಸ್ಕಾರ್ಪಿಯೋ ಎಸ್‌ಯುವಿ  ಕಾರೊಂದು ಸುಮಾರು 700 ಅಡಿ ಕಂದಕಕ್ಕೆ…

2 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ ಕೊಲ್ಲೂರು: ಮೇ 17ರ…

2 hours ago

ಮಂಗಳೂರು : ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ – vishwanews24

ಮಂಗಳೂರು : ಹೆಚ್ಚುತ್ತಿರುವ ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಂಗಳೂರು : ಆಫ್ರಿಕಾ…

2 hours ago

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

3 days ago