Featured

ಪುತ್ತೂರು ಅತ್ಯಾಚಾರ, ವಂಚನೆ ಪ್ರಕರಣ : ಆರೋಪಿ ಸಂತ್ರಸ್ತ ಯುವತಿಯನ್ನು ವಿವಾಹ ಆಗಲೇಬೇಕು. : ಪ್ರತಿಭಾ ಕುಳಾಯಿ – vishwanews24

ಪುತ್ತೂರು ಅತ್ಯಾಚಾರ, ವಂಚನೆ ಪ್ರಕರಣ : ಆರೋಪಿ ಸಂತ್ರಸ್ತ ಯುವತಿಯನ್ನು ವಿವಾಹ ಆಗಲೇಬೇಕು. : ಪ್ರತಿಭಾ ಕುಳಾಯಿ

ಮಂಗಳೂರು : ಪುತ್ತೂರಿನಲ್ಲಿ ಅವಿವಾಹಿತ ಯುವತಿಗೆ ಜನಿಸಿದ ಮಗು ಸ್ಥಳೀಯ ನಿವಾಸಿ ಕೃಷ್ಣ ರಾವ್ ಎಂಬಾತನದ್ದೇ ಎಂದು ಡಿಎನ್ ಎ ಪರೀಕ್ಷೆಯಲ್ಲಿ ರುಜುವಾತುಗೊಂಡ ಹಿನ್ನೆಲೆಯಲ್ಲಿ ಆತ ಮಗುವಿನ ತಾಯಿಯನ್ನು ಇನ್ನಾದರೂ ವಿವಾಹ ಆಗಲೇಬೇಕು. ತಪ್ಪಿದಲ್ಲಿ ಆತನ ಮನೆಯಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನ್ಯಾಯಕ್ಕಾಗಿ ಧರಣಿ ನಡೆಸುವುದಾಗಿ ಹಿಂದುಳಿದ ವರ್ಗಗಳ ಆಯೋಗ ಸದಸ್ಯೆ ಪ್ರತಿಭಾ ಕುಳಾಯಿ ಎಚ್ಚರಿಸಿದ್ದಾರೆ.

ಮಂಗಳೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷ್ಣ ರಾವ್ ಒಪ್ಪಿದಲ್ಲಿ ಆತನ ಜೊತೆ ಯುವತಿಯ ವಿವಾಹವನ್ನು ನಾನೇ ಸ್ವಂತ ಖರ್ಚಿನಲ್ಲಿ ಮಾಡಿಸುತ್ತೇನೆ. ಪ್ರೀತಿ, ಪ್ರೇಮದ ಹೆಸರಲ್ಲಿ ಲೈಂಗಿಕ ಚಟುವಟಿಕೆ ನಡೆಸಿ, ಬಳಿಕ ಅರ್ಧದಲ್ಲೇ ಕೈಬಿಡುವ ಘಟನೆಗಳು ಮರುಕಳಿಸಬಾರದು. ಇದೊಂದು ಜಿಲ್ಲೆಗೆ ಕಪ್ಪು ಚುಕ್ಕೆ. ಹಾಗಾಗಿ ಈ ಘಟನೆ ಪ್ರೀತಿಸಿ, ಮಗು ಕರುಣಿಸಿ ಯುವತಿಯ ಬಾಳನ್ನು ಅರ್ಧಕ್ಕೇ ಕೈಬಿಡುವವರಿಗೆ ಒಂದು ಪಾಠವಾಗಬೇಕು ಎಂದರು.

ಯುವತಿ ಜೊತೆ ಎಂಟು ವರ್ಷಗಳಿಂದ ಸಂಪರ್ಕದಲ್ಲಿದ್ದ ಕೃಷ್ಣ ರಾವ್, ಕೊನೆಗೆ ವಿವಾಹವಾಗುವುದಾಗಿ ನಂಬಿಸಿ ಕೈಕೊಟ್ಟಿದ್ದಾನೆ. ಆತನ ಮನೆಯವರೂ ಈಗ ಅವರ ಮದುವೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇಂತಹ ಘಟನೆಗಳು ಸಮಾಜದಲ್ಲಿ ತಪ್ಪು ಸಂದೇಶಕ್ಕೆ ಕಾರಣವಾಗುತ್ತದೆ. ಇವರಿಬ್ಬರನ್ನು ಒಂದುಗೂಡಿಸಿ ಸಂತ್ರಸ್ತೆಗೆ ನ್ಯಾಯ ಕೊಡಿಸುವಲ್ಲಿ ಹಿಂದುತ್ವ ಸಂಘಟನೆಗಳು, ಸ್ವಯಂಘೋಷಿತ ಮುಖಂಡರು ಕೈಚೆಲ್ಲುತ್ತಿರುವುದು ಸರಿಯಲ್ಲ. ಸಂತ್ರಸ್ತೆಯನ್ನು ಸಮುದಾಯ ಸಂಘಟನೆಯವರು ಕೈಬಿಟ್ಟಿದ್ದಾರೆ. ಹಾಗಿರುವಾಗ ಕೇವಲ ಸಮುದಾಯದ ಮುಖಂಡ ನಂಜುಂಡಿ ಮಾತ್ರ ಧೈರ್ಯ ತುಂಬಿ ಬೆಂಬಲಕ್ಕೆ ನಿಂತಿದ್ದಾರೆ. ಈ ಘಟನೆಯಲ್ಲಿ ಸಂತ್ರಸ್ತೆಗೆ ನ್ಯಾಯ ಕೊಡಿಸುವಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಪ್ರತಿಭಾ ಕುಳಾಯಿ ಆಗ್ರಹಿಸಿದರು.

ಸದ್ಯ ಜಾಮೀನಿನಲ್ಲಿರುವ ಕೃಷ್ಣ ರಾವ್ ಕೋರ್ಟ್ ನಲ್ಲಿ ವಿಚಾರಣೆ ವೇಳೆ ನೀಡುವ ಹೇಳಿಕೆಯನ್ನು ಆಧರಿಸಿ ಮುಂದೆ ಹೋರಾಟದ ರೂಪುರೇಷೆ ಹಾಕಿಕೊಳ್ಳಲಾಗುವುದು. ಸಂತ್ರಸ್ತೆಗೆ ನ್ಯಾಯ ಕೊಡಿಸಿಯೇ ಸಿದ್ಧ ಎಂದು ಪ್ರತಿಭಾ ಕುಳಾಯಿ ಹೇಳಿದರು.

ಹಿಂದೂಗಳು ಹತ್ತು ಹತ್ತು ಮಕ್ಕಳನ್ನು ಹೆರುವಂತೆ ಭಾಷಣ ಮಾಡುವ ಹಿಂದುತ್ವ ಮುಖಂಡರು ಇದೀಗ ಹಿಂದೂ ಯುವಕನೊಬ್ಬ ಹಿಂದೂ ಯುವತಿಗೆ ಮಗು ಕರುಣಿಸಿದ ಪ್ರಕರಣದಲ್ಲಿ ಮಾತನಾಡುತ್ತಿಲ್ಲ. ಅನ್ಯಾಯಕ್ಕೊಳಗಾದ ಯುವತಿಗೆ ನ್ಯಾಯ ದೊರಕಿಸುತ್ತಿಲ್ಲ ಎಂದು ಆಕ್ಷೇಪಿಸಿದ ಪ್ರತಿಭಾ ಕುಳಾಯಿ, ಯಾವುದೇ ತಪ್ಪು ಮಾಡದ ಆ ಮಗುವಿನ ಭವಿಷ್ಯದ ಬಗ್ಗೆ ಆಲೋಚಿಸಬೇಕಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಂತ್ರಸ್ತೆಯ ತಾಯಿ ನಮಿತಾ, ಸಮುದಾಯದ ಕಾರ್ಯಕರ್ತೆ ಅರ್ಚನಾ ಉಪಸ್ಥಿತರಿದ್ದರು.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

3 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

7 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

7 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

7 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

7 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

7 hours ago