Featured

ಪುತ್ತೂರು ಅತ್ಯಾಚಾರ, ವಂಚನೆ ಪ್ರಕರಣ : ಆರೋಪಿ ಸಂತ್ರಸ್ತ ಯುವತಿಯನ್ನು ವಿವಾಹ ಆಗಲೇಬೇಕು. : ಪ್ರತಿಭಾ ಕುಳಾಯಿ – vishwanews24

ಪುತ್ತೂರು ಅತ್ಯಾಚಾರ, ವಂಚನೆ ಪ್ರಕರಣ : ಆರೋಪಿ ಸಂತ್ರಸ್ತ ಯುವತಿಯನ್ನು ವಿವಾಹ ಆಗಲೇಬೇಕು. : ಪ್ರತಿಭಾ ಕುಳಾಯಿ

ಮಂಗಳೂರು : ಪುತ್ತೂರಿನಲ್ಲಿ ಅವಿವಾಹಿತ ಯುವತಿಗೆ ಜನಿಸಿದ ಮಗು ಸ್ಥಳೀಯ ನಿವಾಸಿ ಕೃಷ್ಣ ರಾವ್ ಎಂಬಾತನದ್ದೇ ಎಂದು ಡಿಎನ್ ಎ ಪರೀಕ್ಷೆಯಲ್ಲಿ ರುಜುವಾತುಗೊಂಡ ಹಿನ್ನೆಲೆಯಲ್ಲಿ ಆತ ಮಗುವಿನ ತಾಯಿಯನ್ನು ಇನ್ನಾದರೂ ವಿವಾಹ ಆಗಲೇಬೇಕು. ತಪ್ಪಿದಲ್ಲಿ ಆತನ ಮನೆಯಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನ್ಯಾಯಕ್ಕಾಗಿ ಧರಣಿ ನಡೆಸುವುದಾಗಿ ಹಿಂದುಳಿದ ವರ್ಗಗಳ ಆಯೋಗ ಸದಸ್ಯೆ ಪ್ರತಿಭಾ ಕುಳಾಯಿ ಎಚ್ಚರಿಸಿದ್ದಾರೆ.

ಮಂಗಳೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷ್ಣ ರಾವ್ ಒಪ್ಪಿದಲ್ಲಿ ಆತನ ಜೊತೆ ಯುವತಿಯ ವಿವಾಹವನ್ನು ನಾನೇ ಸ್ವಂತ ಖರ್ಚಿನಲ್ಲಿ ಮಾಡಿಸುತ್ತೇನೆ. ಪ್ರೀತಿ, ಪ್ರೇಮದ ಹೆಸರಲ್ಲಿ ಲೈಂಗಿಕ ಚಟುವಟಿಕೆ ನಡೆಸಿ, ಬಳಿಕ ಅರ್ಧದಲ್ಲೇ ಕೈಬಿಡುವ ಘಟನೆಗಳು ಮರುಕಳಿಸಬಾರದು. ಇದೊಂದು ಜಿಲ್ಲೆಗೆ ಕಪ್ಪು ಚುಕ್ಕೆ. ಹಾಗಾಗಿ ಈ ಘಟನೆ ಪ್ರೀತಿಸಿ, ಮಗು ಕರುಣಿಸಿ ಯುವತಿಯ ಬಾಳನ್ನು ಅರ್ಧಕ್ಕೇ ಕೈಬಿಡುವವರಿಗೆ ಒಂದು ಪಾಠವಾಗಬೇಕು ಎಂದರು.

ಯುವತಿ ಜೊತೆ ಎಂಟು ವರ್ಷಗಳಿಂದ ಸಂಪರ್ಕದಲ್ಲಿದ್ದ ಕೃಷ್ಣ ರಾವ್, ಕೊನೆಗೆ ವಿವಾಹವಾಗುವುದಾಗಿ ನಂಬಿಸಿ ಕೈಕೊಟ್ಟಿದ್ದಾನೆ. ಆತನ ಮನೆಯವರೂ ಈಗ ಅವರ ಮದುವೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇಂತಹ ಘಟನೆಗಳು ಸಮಾಜದಲ್ಲಿ ತಪ್ಪು ಸಂದೇಶಕ್ಕೆ ಕಾರಣವಾಗುತ್ತದೆ. ಇವರಿಬ್ಬರನ್ನು ಒಂದುಗೂಡಿಸಿ ಸಂತ್ರಸ್ತೆಗೆ ನ್ಯಾಯ ಕೊಡಿಸುವಲ್ಲಿ ಹಿಂದುತ್ವ ಸಂಘಟನೆಗಳು, ಸ್ವಯಂಘೋಷಿತ ಮುಖಂಡರು ಕೈಚೆಲ್ಲುತ್ತಿರುವುದು ಸರಿಯಲ್ಲ. ಸಂತ್ರಸ್ತೆಯನ್ನು ಸಮುದಾಯ ಸಂಘಟನೆಯವರು ಕೈಬಿಟ್ಟಿದ್ದಾರೆ. ಹಾಗಿರುವಾಗ ಕೇವಲ ಸಮುದಾಯದ ಮುಖಂಡ ನಂಜುಂಡಿ ಮಾತ್ರ ಧೈರ್ಯ ತುಂಬಿ ಬೆಂಬಲಕ್ಕೆ ನಿಂತಿದ್ದಾರೆ. ಈ ಘಟನೆಯಲ್ಲಿ ಸಂತ್ರಸ್ತೆಗೆ ನ್ಯಾಯ ಕೊಡಿಸುವಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಪ್ರತಿಭಾ ಕುಳಾಯಿ ಆಗ್ರಹಿಸಿದರು.

ಸದ್ಯ ಜಾಮೀನಿನಲ್ಲಿರುವ ಕೃಷ್ಣ ರಾವ್ ಕೋರ್ಟ್ ನಲ್ಲಿ ವಿಚಾರಣೆ ವೇಳೆ ನೀಡುವ ಹೇಳಿಕೆಯನ್ನು ಆಧರಿಸಿ ಮುಂದೆ ಹೋರಾಟದ ರೂಪುರೇಷೆ ಹಾಕಿಕೊಳ್ಳಲಾಗುವುದು. ಸಂತ್ರಸ್ತೆಗೆ ನ್ಯಾಯ ಕೊಡಿಸಿಯೇ ಸಿದ್ಧ ಎಂದು ಪ್ರತಿಭಾ ಕುಳಾಯಿ ಹೇಳಿದರು.

ಹಿಂದೂಗಳು ಹತ್ತು ಹತ್ತು ಮಕ್ಕಳನ್ನು ಹೆರುವಂತೆ ಭಾಷಣ ಮಾಡುವ ಹಿಂದುತ್ವ ಮುಖಂಡರು ಇದೀಗ ಹಿಂದೂ ಯುವಕನೊಬ್ಬ ಹಿಂದೂ ಯುವತಿಗೆ ಮಗು ಕರುಣಿಸಿದ ಪ್ರಕರಣದಲ್ಲಿ ಮಾತನಾಡುತ್ತಿಲ್ಲ. ಅನ್ಯಾಯಕ್ಕೊಳಗಾದ ಯುವತಿಗೆ ನ್ಯಾಯ ದೊರಕಿಸುತ್ತಿಲ್ಲ ಎಂದು ಆಕ್ಷೇಪಿಸಿದ ಪ್ರತಿಭಾ ಕುಳಾಯಿ, ಯಾವುದೇ ತಪ್ಪು ಮಾಡದ ಆ ಮಗುವಿನ ಭವಿಷ್ಯದ ಬಗ್ಗೆ ಆಲೋಚಿಸಬೇಕಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಂತ್ರಸ್ತೆಯ ತಾಯಿ ನಮಿತಾ, ಸಮುದಾಯದ ಕಾರ್ಯಕರ್ತೆ ಅರ್ಚನಾ ಉಪಸ್ಥಿತರಿದ್ದರು.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

2 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

3 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

3 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

4 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

5 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

5 hours ago