ಮಂಗಳೂರು: ಬಿಜೆಪಿ ಕಾರ್ಯಕರ್ತರಿಗೆ ಪೊಲೀಸ್ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಡಿವೈಎಸ್ಪಿ ಸೇರಿ ಮೂವರು ಪೊಲೀಸರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಪುತ್ತೂರು ನಗರ ಠಾಣೆಯಲ್ಲಿ ಈ ಕುರಿತು ಎಫ್ಐಆರ್ ದಾಖಲಾಗಿದ್ದು ಪುತ್ತೂರು ಡಿವೈಎಸ್ಪಿ ವೀರಯ್ಯ ಹಿರೇಮಠ, ಸಂಪ್ಯ ಎಸ್ಐ, ಸಿಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
ಘಟನೆ ಕುರಿತಂತೆ ಹೇಳಿಕೆ ನೀಡಿರುವ ಹಿಂದು ಕಾರ್ಯಕರ್ತರು, ಹೊಟ್ಟೆ, ತೊಡೆ, ತಲೆ, ಮೊಣಕಾಲಿಗೆ ಹೊಡೆದಿದ್ದಾಗಿ ಹೇಳಿಕೆ ನೀಡಿದ್ದಾರೆ. ಪುತ್ತೂರಿನಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಹಲ್ಲೆಗೊಳಗಾದ ಕಾರ್ಯಕರ್ತರು ರಾತ್ರಿ ವೇಳೆ ಅರುಣ್ ಪುತ್ತಿಲ ಠಾಣೆಗೆ ಬರದೇ ಇರುತ್ತಿದ್ದರೆ ಲಾಕಪ್ ಡೆತ್ ಆಗುತ್ತಿತ್ತು ಎಂದು ವಿವರಿಸಿದ್ದಾರೆ.
ಡಿವೈಎಸ್ಪಿ ಅಧಿಕಾರಿ ಇತರ ಪೊಲೀಸರ ಜೊತೆಗೂಡಿ ಹಲ್ಲೆ ನಡೆಸಿದ್ದಾರೆ ಎಂದು ಕಾರ್ಯಕರ್ತರು ಆರೋಪ ಮಾಡಿದ್ದಾರೆ. ಇನ್ನು ಆಸ್ಪತ್ರೆಗೆ ಭೇಟಿ ನೀಡಿದ ಅರುಣ್ ಪುತ್ತಿಲ ಎಫ್ಐಆರ್ ದಾಖಲಿಸದಿದ್ದರೆ ಬೀದಿಗಿಳಿದು ಹೋರಾಟ ಮಾಡ್ತೀವಿ ಎಂದು ಹೇಳಿಕೆ ನೀಡಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಎಸ್ಪಿ ವಿಕ್ರಮ್ ಅಮಟೆ ಪುತ್ತೂರು ನಗರ ಠಾಣೆಯಲ್ಲಿ ಉಳಿದುಕೊಂಡಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…