ಪುತ್ತೂರು : ಆನ್ಲೈನ್ ತರಗತಿ ಆರಂಭದ ಬಳಿಕ ವಿದ್ಯಾರ್ಥಿಗಳಿಗೆ ನೆಟ್ವರ್ಕ್ ಸಮಸ್ಯೆ ಉಂಟಾಗಿ ಶಿಕ್ಷಣ ಪಡೆಯಲು ಪರದಾಡುವಂತಾಗಿದೆ. ನೆಟ್ವರ್ಕ್ ಸಮಸ್ಯೆಯಿಂದ ಉಂಟಾದ ಕಾರಣದಿಂದಾಗಿ ಆನ್ಲೈನ್ ತರಗತಿಗಾಗಿ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಗ್ರಾಮದ ಪಾಲೆತ್ತಡಿ ಎಂಬಲ್ಲಿನ ವಿದ್ಯಾರ್ಥಿಗಳು ಬಸ್ ನಿಲ್ದಾಣವನ್ನೇ ಕ್ಲಾಸ್ ರೂಂ ಅನ್ನಾಗಿಸಿದ್ದಾರೆ.
ಕೊರೊನಾ ಕಾರಣದಿಂದಾಗಿ ಶಾಲೆಗಳು ಮುಚ್ಚಲ್ಪಟ್ಟ ಬಳಿಕ ಆನ್ಲೈನ್ ತರಗತಿಗಳು ಆರಂಭವಾಗಿದ್ದು ವಿದ್ಯಾರ್ಥಿಗಳಿಗೆ ನೆಟ್ವರ್ಕ್ನದ್ದೆ ದೊಡ್ಡ ಸಮಸ್ಯೆ ಉಂಟಾಗಿದೆ. ನೆಟ್ವರ್ಕ್ ಸಮಸ್ಯೆಯಿಂದ ಆನ್ಲೈನ್ ತರಗತಿಗಳನ್ನು ಹಾಜರಾಗುವುದು ಗ್ರಾಮೀಣ ವಿದ್ಯಾರ್ಥಿಗಳಿಗೆ ತಲೆನೋವಾಗಿ ಪರಿಣಮಿಸಿದೆ. ಈ ನಡುವೆ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಗ್ರಾಮದ ಪಾಲೆತ್ತಡಿ ಎಂಬಲ್ಲಿನ ವಿದ್ಯಾರ್ಥಿಗಳು ಬಸ್ ನಿಲ್ದಾಣದಲ್ಲೇ ಆನ್ಲೈನ್ ತರಗತಿಯನ್ನು ಪಡೆಯುತ್ತಿದ್ದಾರೆ.
ಇಲ್ಲಿನ ಹತ್ತಾರು ವಿದ್ಯಾರ್ಥಿಗಳು ಬೆಳಿಗ್ಗೆ ಎದ್ದು ಆನ್ಲೈನ್ ತರಗತಿಗೆ ಹಾಜರಾಗಲು ಇಲ್ಲಿನ ಬಸ್ ನಿಲ್ದಾಣಕ್ಕೆ ಬರುತ್ತಾರೆ. ಇನ್ನು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ತರಗತಿ ಇರುವ ಕಾರಣದಿಂದ ಕುಳಿತುಕೊಳ್ಳಲು ಕುರ್ಚಿಗಳನ್ನೂ ಹೊತ್ತೊಯ್ಯುತ್ತಾರೆ.
ಮೊಬೈಲ್ ನೆಟ್ವರ್ಕ್ಗಾಗಿ ತಮ್ಮ ನಿವಾಸಗಳಿಂದ ಕಾಡಿನ ಹಾದಿಯಲ್ಲಿ ಒಂದು, ಎರಡು ಕಿಲೋಮೀಟರ್ ದೂರ ಬಂದು ಬಸ್ ನಿಲ್ದಾಣದಲ್ಲಿ ಆನ್ಲೈನ್ ತರಗತಿಗೆ ಹಾಜರಾಗುವ ಈ ವಿದ್ಯಾರ್ಥಿಗಳು ತರಗತಿ ಮುಗಿದ ಬಳಿಕ ಮನೆಗೆ ಮರಳುತ್ತಾರೆ.
ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಹೆಚ್ಚಾಗಿ ಇರದ ಕಾರಣದಿಂದಾಗಿ ಈ ವಿದ್ಯಾರ್ಥಿಗಳ ಆನ್ಲೈನ್ ತರಗತಿಗೆ ಯಾವುದೇ ತೊಂದರೆ ಉಂಟಾಗುವುದಿಲ್ಲ.
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…
ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…
ಹಳಿ ನಿರ್ವಹಣೆ: ಅ.4ರಿಂದ ಬೆಂಗಳೂರು - ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು ಮಂಗಳೂರು: ಶಿರಿಬಾಗಿಲು- ಯಡಕುಮೇರಿ ರೈಲು…
ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಮುಂಬೈ: ಘಾಟ್ಕೋಪರ್ನ ಚಿರಾಗ್ ನಗರದ ಗೌಸಿಯಾ ಚಾಲ್ನಲ್ಲಿ ಬುಧವಾರ…
ಪ್ರಜ್ವಲ್ ರೇವಣ್ಣ ಸೆಲ್ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…