ಪುತ್ತೂರು :ಆನ್‌ಲೈನ್‌ ತರಗತಿಗೆ ನೆಟ್‌ವರ್ಕ್ ಸಮಸ್ಯೆ : ವಿದ್ಯಾರ್ಥಿಗಳಿಗೆ ಕ್ಲಾಸ್‌ ರೂಮ್ ಆದ ಬಸ್‌ ನಿಲ್ದಾಣ -Vishwanews24

ಪುತ್ತೂರು : ಆನ್‌ಲೈನ್‌ ತರಗತಿ ಆರಂಭದ ಬಳಿಕ ವಿದ್ಯಾರ್ಥಿಗಳಿಗೆ ನೆಟ್‌ವರ್ಕ್ ಸಮಸ್ಯೆ ಉಂಟಾಗಿ ಶಿಕ್ಷಣ ಪಡೆಯಲು ಪರದಾಡುವಂತಾಗಿದೆ. ನೆಟ್‌ವರ್ಕ್ ಸಮಸ್ಯೆಯಿಂದ ಉಂಟಾದ ಕಾರಣದಿಂದಾಗಿ ಆನ್‌ಲೈನ್‌ ತರಗತಿಗಾಗಿ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಗ್ರಾಮದ ಪಾಲೆತ್ತಡಿ ಎಂ‌ಬಲ್ಲಿನ ವಿದ್ಯಾರ್ಥಿಗಳು ಬಸ್‌ ನಿಲ್ದಾಣವನ್ನೇ ಕ್ಲಾಸ್‌ ರೂಂ ಅನ್ನಾಗಿಸಿದ್ದಾರೆ.

 

ಕೊರೊನಾ ಕಾರಣದಿಂದಾಗಿ ಶಾಲೆಗಳು ಮುಚ್ಚಲ್ಪಟ್ಟ ಬಳಿಕ ಆನ್‌ಲೈನ್‌ ತರಗತಿಗಳು ಆರಂಭವಾಗಿದ್ದು ವಿದ್ಯಾರ್ಥಿಗಳಿಗೆ ನೆಟ್‌ವರ್ಕ್‌ನದ್ದೆ ದೊಡ್ಡ ಸಮಸ್ಯೆ ಉಂಟಾಗಿದೆ. ನೆಟ್‌ವರ್ಕ್ ಸಮಸ್ಯೆಯಿಂದ ಆನ್‌ಲೈನ್‌ ತರಗತಿಗಳನ್ನು ಹಾಜರಾಗುವುದು ಗ್ರಾಮೀಣ ವಿದ್ಯಾರ್ಥಿಗಳಿಗೆ ತಲೆನೋವಾಗಿ ಪರಿಣಮಿಸಿದೆ. ಈ ನಡುವೆ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಗ್ರಾಮದ ಪಾಲೆತ್ತಡಿ ಎಂ‌ಬಲ್ಲಿನ ವಿದ್ಯಾರ್ಥಿಗಳು ಬಸ್‌ ನಿಲ್ದಾಣದಲ್ಲೇ ಆನ್‌ಲೈನ್‌ ತರಗತಿಯನ್ನು ಪಡೆಯುತ್ತಿದ್ದಾರೆ.

ಇಲ್ಲಿನ ಹತ್ತಾರು ವಿದ್ಯಾರ್ಥಿಗಳು ಬೆಳಿಗ್ಗೆ ಎದ್ದು ಆನ್‌ಲೈನ್ ತರಗತಿಗೆ ಹಾಜರಾಗಲು ಇಲ್ಲಿನ ಬಸ್‌ ನಿಲ್ದಾಣಕ್ಕೆ ಬರುತ್ತಾರೆ. ಇನ್ನು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ತರಗತಿ ಇರುವ ಕಾರಣದಿಂದ ಕುಳಿತುಕೊಳ್ಳಲು ಕುರ್ಚಿಗಳನ್ನೂ ಹೊತ್ತೊಯ್ಯುತ್ತಾರೆ.

ಮೊಬೈಲ್‌ ನೆಟ್‌ವರ್ಕ್‌ಗಾಗಿ ತಮ್ಮ ನಿವಾಸಗಳಿಂದ ಕಾಡಿನ ಹಾದಿಯಲ್ಲಿ ಒಂದು, ಎರಡು ಕಿಲೋಮೀಟರ್ ದೂರ ಬಂದು ಬಸ್‌ ನಿಲ್ದಾಣದಲ್ಲಿ ಆನ್‌ಲೈನ್‌ ತರಗತಿಗೆ ಹಾಜರಾಗುವ ಈ ವಿದ್ಯಾರ್ಥಿಗಳು ತರಗತಿ ಮುಗಿದ ಬಳಿಕ ಮನೆಗೆ ಮರಳುತ್ತಾರೆ.

ಬಸ್‌ ನಿಲ್ದಾಣದಲ್ಲಿ ಪ್ರಯಾಣಿಕರು ಹೆಚ್ಚಾಗಿ ಇರದ ಕಾರಣದಿಂದಾಗಿ ಈ ವಿದ್ಯಾರ್ಥಿಗಳ ಆನ್‌ಲೈನ್‌ ತರಗತಿಗೆ ಯಾವುದೇ ತೊಂದರೆ ಉಂಟಾಗುವುದಿಲ್ಲ.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

23 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago