ಪುತ್ತೂರು :ಆನ್‌ಲೈನ್‌ ತರಗತಿಗೆ ನೆಟ್‌ವರ್ಕ್ ಸಮಸ್ಯೆ : ವಿದ್ಯಾರ್ಥಿಗಳಿಗೆ ಕ್ಲಾಸ್‌ ರೂಮ್ ಆದ ಬಸ್‌ ನಿಲ್ದಾಣ -Vishwanews24

ಪುತ್ತೂರು : ಆನ್‌ಲೈನ್‌ ತರಗತಿ ಆರಂಭದ ಬಳಿಕ ವಿದ್ಯಾರ್ಥಿಗಳಿಗೆ ನೆಟ್‌ವರ್ಕ್ ಸಮಸ್ಯೆ ಉಂಟಾಗಿ ಶಿಕ್ಷಣ ಪಡೆಯಲು ಪರದಾಡುವಂತಾಗಿದೆ. ನೆಟ್‌ವರ್ಕ್ ಸಮಸ್ಯೆಯಿಂದ ಉಂಟಾದ ಕಾರಣದಿಂದಾಗಿ ಆನ್‌ಲೈನ್‌ ತರಗತಿಗಾಗಿ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಗ್ರಾಮದ ಪಾಲೆತ್ತಡಿ ಎಂ‌ಬಲ್ಲಿನ ವಿದ್ಯಾರ್ಥಿಗಳು ಬಸ್‌ ನಿಲ್ದಾಣವನ್ನೇ ಕ್ಲಾಸ್‌ ರೂಂ ಅನ್ನಾಗಿಸಿದ್ದಾರೆ.

 

ಕೊರೊನಾ ಕಾರಣದಿಂದಾಗಿ ಶಾಲೆಗಳು ಮುಚ್ಚಲ್ಪಟ್ಟ ಬಳಿಕ ಆನ್‌ಲೈನ್‌ ತರಗತಿಗಳು ಆರಂಭವಾಗಿದ್ದು ವಿದ್ಯಾರ್ಥಿಗಳಿಗೆ ನೆಟ್‌ವರ್ಕ್‌ನದ್ದೆ ದೊಡ್ಡ ಸಮಸ್ಯೆ ಉಂಟಾಗಿದೆ. ನೆಟ್‌ವರ್ಕ್ ಸಮಸ್ಯೆಯಿಂದ ಆನ್‌ಲೈನ್‌ ತರಗತಿಗಳನ್ನು ಹಾಜರಾಗುವುದು ಗ್ರಾಮೀಣ ವಿದ್ಯಾರ್ಥಿಗಳಿಗೆ ತಲೆನೋವಾಗಿ ಪರಿಣಮಿಸಿದೆ. ಈ ನಡುವೆ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಗ್ರಾಮದ ಪಾಲೆತ್ತಡಿ ಎಂ‌ಬಲ್ಲಿನ ವಿದ್ಯಾರ್ಥಿಗಳು ಬಸ್‌ ನಿಲ್ದಾಣದಲ್ಲೇ ಆನ್‌ಲೈನ್‌ ತರಗತಿಯನ್ನು ಪಡೆಯುತ್ತಿದ್ದಾರೆ.

ಇಲ್ಲಿನ ಹತ್ತಾರು ವಿದ್ಯಾರ್ಥಿಗಳು ಬೆಳಿಗ್ಗೆ ಎದ್ದು ಆನ್‌ಲೈನ್ ತರಗತಿಗೆ ಹಾಜರಾಗಲು ಇಲ್ಲಿನ ಬಸ್‌ ನಿಲ್ದಾಣಕ್ಕೆ ಬರುತ್ತಾರೆ. ಇನ್ನು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ತರಗತಿ ಇರುವ ಕಾರಣದಿಂದ ಕುಳಿತುಕೊಳ್ಳಲು ಕುರ್ಚಿಗಳನ್ನೂ ಹೊತ್ತೊಯ್ಯುತ್ತಾರೆ.

ಮೊಬೈಲ್‌ ನೆಟ್‌ವರ್ಕ್‌ಗಾಗಿ ತಮ್ಮ ನಿವಾಸಗಳಿಂದ ಕಾಡಿನ ಹಾದಿಯಲ್ಲಿ ಒಂದು, ಎರಡು ಕಿಲೋಮೀಟರ್ ದೂರ ಬಂದು ಬಸ್‌ ನಿಲ್ದಾಣದಲ್ಲಿ ಆನ್‌ಲೈನ್‌ ತರಗತಿಗೆ ಹಾಜರಾಗುವ ಈ ವಿದ್ಯಾರ್ಥಿಗಳು ತರಗತಿ ಮುಗಿದ ಬಳಿಕ ಮನೆಗೆ ಮರಳುತ್ತಾರೆ.

ಬಸ್‌ ನಿಲ್ದಾಣದಲ್ಲಿ ಪ್ರಯಾಣಿಕರು ಹೆಚ್ಚಾಗಿ ಇರದ ಕಾರಣದಿಂದಾಗಿ ಈ ವಿದ್ಯಾರ್ಥಿಗಳ ಆನ್‌ಲೈನ್‌ ತರಗತಿಗೆ ಯಾವುದೇ ತೊಂದರೆ ಉಂಟಾಗುವುದಿಲ್ಲ.

 

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

11 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

12 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

12 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

15 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

15 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

15 hours ago