Featured

ಪುತ್ತೂರು : ಆರೋಗ್ಯ ಸಮಸ್ಯೆ ; ಮನನೊಂದಿದ್ದ ಯುವತಿ ಆತ್ಮಹತ್ಯೆ – vishwanews24

ಪುತ್ತೂರು : ಆರೋಗ್ಯ ಸಮಸ್ಯೆ ; ಮನನೊಂದಿದ್ದ ಯುವತಿ ಆತ್ಮಹತ್ಯೆ

ಮಂಗಳೂರು: 22 ರ ಹರೆಯದ ಯುತಿಯೊಬ್ಬಳು ಜೀವನದಲ್ಲಿ ಜಿಗುಪ್ಸೆಗೊಂಡು ಜೀವಾಂತ್ಯ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಕೆಯ್ಯೂರು ಗ್ರಾಮದಲ್ಲಿ ನಡೆದಿದೆ.

ನೀತಾ (22) ಜೀವಾಂತ್ಯ ಮಾಡಿಕೊಂಡ ಯುವತಿಯಾಗಿದ್ದಾಳೆ. ಘಟನೆ ಕುರಿತು ಮೃತರ ಅಕ್ಕ ಗೀತಾ ಅವರು ಸಂಖ್ಯೆ ಪೊಲೀಸರಿಗೆ ದೂರು ನೀಡಿದ್ದಾರೆ. ‘ತಂದೆ ಗುಡ್ಡಪ್ಪರವರು ಸುಮಾರು 20 ವರ್ಷಗಳ ಹಿಂದೆ ಕೌಟುಂಬಿಕ ಕಲಹದ ಕಾರಣದಿಂದ ದೂರವಿದ್ದುದರಿಂದ ಮನೆಯಲ್ಲಿ ತಾಯಿ ಮತ್ತು ಅಕ್ಕ, ತಂಗಿ ಮಾತ್ರ ಇದ್ದರು ಎನ್ನಲಾಗಿದೆ.

ಬೆಳಿಗ್ಗೆ ತಾನು ಕೆಲಸದ ನಿಮಿತ್ತ ಮತ್ತು ತಂಗಿಗೆ ಔಷಧಿಯನ್ನು ತರಲೆಂದು ಅಕ್ಕ ಮಂಗಳೂರಿಗೆ ಹೊರಟ್ಟಿದ್ದಾಗ ನೀತಾ ಈ ಕೃತ್ಯ ಮಾಡಿದ್ದಾಳೆ ಎನ್ನಲಾಗಿದೆ. ಸಂಜೆ ಅಕ್ಕ ಮನೆಗೆ ಬಂದಾಗ ತಂಗಿ ಶಾಲಿನ ಒಂದು ತುದಿಯನ್ನು ಕಿಟಕಿಯ ಸರಳಿಗೆ ಕಟ್ಟಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಮೃತ ನೀತಾ ಮಂಗಳೂರಿನಲ್ಲಿ ಉದ್ಯೋಗದಲ್ಲಿದ್ದು, 2016ರ ನಂತರ ಆಕೆಗೆ ತಲೆನೋವು ಆರಂಭವಾಗಿ ಚಿಕಿತ್ಸೆ ಪಡೆಯುತ್ತಿದ್ದರು. 2020ರ ನಂತರ ಕುತ್ತಿಗೆ, ಬೆನ್ನುಹುರಿ ಮತ್ತು ತಲೆಯಲ್ಲಿ ನರ ದೋಷ ಉಂಟಾದ ಕಾರಣ ಮಂಗಳೂರಿನ ಖಾಸಾಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನಡೆಸಿ ಬಳಿಕ ಮಣಿಪಾಲ ಕೆಎಂಸಿ ಮತ್ತು ಆಯುರ್ವೇದ ಚಿಕಿತ್ಸೆ ಪಡೆಯುತ್ತಿದ್ದಳು. ಆದ್ರೆ ಆರೋಗ್ಯ ತೊಂದರೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಜೀವಾಂತ್ಯ ಮಾಡಿಕೊಂಡಿರಬಹುದು ಎಂದು ಅಕ್ಕ ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದು ಪೊಲೀಸರು ಪ್ರಕರಣ ದಾಖಲು ಮಾಡಿ ತನಿಖೆ ನಡೆಸುತ್ತಿದ್ದಾರೆ.

 

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

11 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

11 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

12 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

12 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago