ಪುತ್ತೂರು : ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದ ವಿಶಾಲವಾದ ದೇವರಮಾರು ಗದ್ದೆಯಲ್ಲಿ ಇನ್ನೂ ಮುಂದೆ ಹಿಂದೂ ಭಕ್ತಾಧಿಗಳಿಗೆ ಮಾತ್ರ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯಿಂದ ಪ್ರಕಟಣೆ ಹೊರಡಿಸಲಾಗಿದೆ. “ಈ ದೇವಸ್ಥಾನವೂ ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ದೇವಸ್ಥಾನವಾಗಿದ್ದೂ , ಈ ದೇವಳಕ್ಕೆ ಸಂಬಂಧಪಟ್ಟ ಜಾಗದಲ್ಲಿ ಹಿಂದೂ ಭಕ್ತಾದಿಗಳಿಗೆ ಮಾತ್ರ ವಾಹನ ನಿಲುಗಡೆಗೆ ಅವಕಾಶ ಇರುತ್ತಾದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅಲ್ಲದೇ ಹಿಂದೂ ಭಕ್ತಾದಿಗಳ ಹೊರತು ಪಡಿಸಿ ಇತರರು ವಾಹನ ಪಾರ್ಕಿಂಗ್ ಮಾಡಿ ಹೋಗುವುದನ್ನು ಕಡ್ಡಾಯವಾಗಿ ನಿಷೇದಿಸಿದೆ ಹಾಗೂ ಇತರರು ಪಾರ್ಕಿಂಗ್ ಮಾಡಿ ಹೋದಲ್ಲಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಲಾಗಿದೆ. ಈ ಬಗ್ಗೆ ದೇವಳದ ಹೊರಗಿನ ಪಂಚಾಕ್ಷರಿ ಮಂಟಪದಲ್ಲಿ ಸಾರ್ವಜನಿಕ ತಿಳುವಳಿಕೆಗಾಗಿ ಪ್ಲೆಕ್ಸ್ ಬೋರ್ಡ್’ನಲ್ಲಿ ಈ ಪ್ರಕಟಣೆಯನ್ನು ಹಾಕಲಾಗಿದೆ
ಹಲವು ವರ್ಷಗಳ ಹಿಂದೂ ಸಂಘಟನೆಗಳ ಬೇಡಿಕೆ : ಬಜರಂಗ ದಳ , ಹಿಂದೂ ಜಾಗರಣೆ ವೇದಿಕೆ ಹಲವು ಹಿಂದೂ ಪರ ಸಂಘಟನೆಗಳು ಹಾಗೂ ಮುಖಂಡರು ದೇವಲಾಯಕ್ಕೆ ಸೇರಿದ ಗದ್ದೆಯಲ್ಲಿ ಅನ್ಯ ಧರ್ಮಿಯರ ವಾಹನ ನಿಲುಗಡೆಗೆ ಅವಕಾಶ ನೀಡಬಾರದು ಎಂದು ಹಕ್ಕೊತ್ತಾಯ ಮಾಡಿದ್ದರು. ದೇವಳದ ಗದ್ದೆಯಲ್ಲಿ ಸರ್ಕಸ್ ಇತ್ಯಾದಿ ಮನೋರಂಜನಾ ಕಾರ್ಯಕ್ರಮಗಳಿಗೂ ಅವಕಾಶ ನೀಡಬಾರದು ಎಂಬ ಬೇಡಿಕೆಯನ್ನೂ ಈ ಸಂಘಟನೆಗಳು ಇಟ್ಟಿದ್ದವು. ಇದೀಗ ಇದರಲ್ಲಿ ಒಂದು ಬೇಡಿಕೆ ಹಲವು ವರ್ಷಗಳ ಬಳಿಕ ಈಡೇರಿದಂತಾಗಿದೆ.
ಇದೀಗ ಹಿಂದೂ ಭಕ್ತಾಧಿಗಳ ವಾಹನ ನಿಲುಗಡೆಗೆ ಅವಕಾಶ ನೀಡಿ ಉಳಿದವರ ವಾಹನಗಳಿಗೆ ಅವಕಾಶ ನಿರಾಕರಿಸುವ ಮೂಲಕ ವ್ಯವಸ್ಥಾಪನ ಸಮಿತಿಯೂ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…