ಪುತ್ತೂರು : ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದ ವಿಶಾಲವಾದ ದೇವರಮಾರು ಗದ್ದೆಯಲ್ಲಿ ಇನ್ನೂ ಮುಂದೆ ಹಿಂದೂ ಭಕ್ತಾಧಿಗಳಿಗೆ ಮಾತ್ರ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯಿಂದ ಪ್ರಕಟಣೆ ಹೊರಡಿಸಲಾಗಿದೆ. “ಈ ದೇವಸ್ಥಾನವೂ ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ದೇವಸ್ಥಾನವಾಗಿದ್ದೂ , ಈ ದೇವಳಕ್ಕೆ ಸಂಬಂಧಪಟ್ಟ ಜಾಗದಲ್ಲಿ ಹಿಂದೂ ಭಕ್ತಾದಿಗಳಿಗೆ ಮಾತ್ರ ವಾಹನ ನಿಲುಗಡೆಗೆ ಅವಕಾಶ ಇರುತ್ತಾದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅಲ್ಲದೇ ಹಿಂದೂ ಭಕ್ತಾದಿಗಳ ಹೊರತು ಪಡಿಸಿ ಇತರರು ವಾಹನ ಪಾರ್ಕಿಂಗ್ ಮಾಡಿ ಹೋಗುವುದನ್ನು ಕಡ್ಡಾಯವಾಗಿ ನಿಷೇದಿಸಿದೆ ಹಾಗೂ ಇತರರು ಪಾರ್ಕಿಂಗ್ ಮಾಡಿ ಹೋದಲ್ಲಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಲಾಗಿದೆ. ಈ ಬಗ್ಗೆ ದೇವಳದ ಹೊರಗಿನ ಪಂಚಾಕ್ಷರಿ ಮಂಟಪದಲ್ಲಿ ಸಾರ್ವಜನಿಕ ತಿಳುವಳಿಕೆಗಾಗಿ ಪ್ಲೆಕ್ಸ್ ಬೋರ್ಡ್’ನಲ್ಲಿ ಈ ಪ್ರಕಟಣೆಯನ್ನು ಹಾಕಲಾಗಿದೆ
ಹಲವು ವರ್ಷಗಳ ಹಿಂದೂ ಸಂಘಟನೆಗಳ ಬೇಡಿಕೆ : ಬಜರಂಗ ದಳ , ಹಿಂದೂ ಜಾಗರಣೆ ವೇದಿಕೆ ಹಲವು ಹಿಂದೂ ಪರ ಸಂಘಟನೆಗಳು ಹಾಗೂ ಮುಖಂಡರು ದೇವಲಾಯಕ್ಕೆ ಸೇರಿದ ಗದ್ದೆಯಲ್ಲಿ ಅನ್ಯ ಧರ್ಮಿಯರ ವಾಹನ ನಿಲುಗಡೆಗೆ ಅವಕಾಶ ನೀಡಬಾರದು ಎಂದು ಹಕ್ಕೊತ್ತಾಯ ಮಾಡಿದ್ದರು. ದೇವಳದ ಗದ್ದೆಯಲ್ಲಿ ಸರ್ಕಸ್ ಇತ್ಯಾದಿ ಮನೋರಂಜನಾ ಕಾರ್ಯಕ್ರಮಗಳಿಗೂ ಅವಕಾಶ ನೀಡಬಾರದು ಎಂಬ ಬೇಡಿಕೆಯನ್ನೂ ಈ ಸಂಘಟನೆಗಳು ಇಟ್ಟಿದ್ದವು. ಇದೀಗ ಇದರಲ್ಲಿ ಒಂದು ಬೇಡಿಕೆ ಹಲವು ವರ್ಷಗಳ ಬಳಿಕ ಈಡೇರಿದಂತಾಗಿದೆ.
ಇದೀಗ ಹಿಂದೂ ಭಕ್ತಾಧಿಗಳ ವಾಹನ ನಿಲುಗಡೆಗೆ ಅವಕಾಶ ನೀಡಿ ಉಳಿದವರ ವಾಹನಗಳಿಗೆ ಅವಕಾಶ ನಿರಾಕರಿಸುವ ಮೂಲಕ ವ್ಯವಸ್ಥಾಪನ ಸಮಿತಿಯೂ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…