ಪುತ್ತೂರು : ಸೌಜನ್ಯ ಸಾವಿಗೆ ಈವರೆಗೆ ನ್ಯಾಯ ಸಿಕ್ಕಿಲ್ಲ ಈ ಹಿನ್ನಲೆ ಈಗಾಗಲೇ ರಾಜ್ಯಾದ್ಯಂತ ಹೋರಾಟ ನಡೆಯುತ್ತಿದ್ದು, ಈ ಬಾರಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸುಮಾರು 1.50 ಲಕ್ಷದಿಂದ 2 ಲಕ್ಷಕ್ಕೂ ಮಿಕ್ಕಿ ನೋಟಾ ಮತ ಬೀಳುವ ಸಾಧ್ಯತೆಯಿದೆ ಎಂದು ಸೌಜನ್ಯ ಪರ ಹೋರಾಟ ಸಮಿತಿ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ಹೇಳಿದ್ದಾರೆ.
ಪುತ್ತೂರಿನಲ್ಲಿ ಮಾತನಾಡಿದ ಅವರು ನೋಟಾ ಹೆಸರಿನಲ್ಲಿ ಹಿಂದುತ್ವದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಿಧ್ಯಾರ್ಥಿನಿ ಸೌಜನ್ಯ ಸಾವಿಗೆ ನಮಗೆ ಈವರೆಗೆ ನ್ಯಾಯ ಸಿಕ್ಕಿಲ್ಲ ಈಗಾಗಲೇ ಈ ಕುರಿತು ರಾಜ್ಯದಾದ್ಯಂತ ನಿರಂತರ ಹೋರಾಟಗಳನ್ನು ನಡೆಸುತ್ತಿದ್ದೇವೆ, ಈ ಹೋರಾಟದ ಮುಂದಿನ ಭಾಗವಾಗಿ ಈ ಬಾರಿ ನೋಟಾ ಅಭಿಯಾನವನ್ನು ಆರಂಭಿಸಿದ್ದೇವೆ ಎಂದರು.
ಈಗಾಗಲೇ ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದಲ್ಲಿ ನೋಟಾ ಕ್ಕೆ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ನೋಟಾ ಮತವನ್ನು ಅತೀ ಹೆಚ್ಚು ಚಲಾಯಿಸುವ ಮೂಲಕ ನಮಗೆ ನ್ಯಾಯ ಪಡೆದುಕೊಳ್ಳುತ್ತೇವೆ. ಎಲ್ಲಿ ಹೆಚ್ಚು ನೋಟಾ ಮತ ಚಲಾವಣೆಯಾಗುತ್ತೋ ಆ ಕ್ಷೇತ್ರ ದೇಶದ ಗಮನ ಸೆಳೆಯುತ್ತೆ. ಸಮಸ್ಯೆಗೆ ಪರಿಹಾರವೂ ದೊರೆಯುತ್ತದೆ ಎನ್ನುವ ವಿಶ್ವಾಸವೂ ಎಂದರು. ಈ ಬಾರಿ ಸುಮಾರು 1.50 ಲಕ್ಷದಿಂದ 2 ಲಕ್ಷಕ್ಕೂ ಮಿಕ್ಕಿ ನೋಟಾ ಮತ ಬೀಳುವ ಸಾಧ್ಯತೆಯಿದೆ ಎಂದರು. ಅಲ್ಲದೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಹಿಂದೂ ಮುಖಂಡರನ್ನು ಮುಗಿಸುವ ಕೆಲಸ ನಡೆಯುತ್ತಿದೆ. ಬಿಜೆಪಿ ಹಿಂದೂಗಳ ಹೆಸರಿನಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದೆ ಎಂದು ಮಹೇಶ್ ತಿಮರೋಡಿ ಆರೋಪಿಸಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…