ಪುತ್ತೂರು: ಎಸ್’ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಶಾಫಿ ಬೆಳ್ಳಾರೆ ಅವರ ಪರವಾಗಿ ಪಕ್ಷದ ನಾಯಕರು ನಾಮಪತ್ರ ಸಲ್ಲಿಸಿದರು.
ಬುಧವಾರ ಎಪಿಎಂಸಿ ಕಚೇರಿ ಬಳಿಯಿರುವ ಪಕ್ಷದ ಕಚೇರಿ ಬಳಿಯಿಂದ ಸಾವಿರಾರು ಮಂದಿ ಕಾರ್ಯಕರ್ತರ ಜೊತೆ ಮೆರವಣಿಗೆ ಮೂಲಕ ತೆರಳಿದ ನಾಯಕರು, ಶಾಫಿ ಬೆಳ್ಳಾರೆ ಪರವಾಗಿ ನಾಮಪತ್ರ ಸಲ್ಲಿಸಿದರು. ಶಾಫಿ ಬೆಳ್ಳಾರೆಯು ಜೈಲಿನಲ್ಲಿದ್ದು ಈ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರು ನಾಮಪತ್ರ ಸಲ್ಲಿಕೆ ಮಾಡಿದರು.
ಎಸ್’ಡಿಪಿಐ ಮುಖಂಡರಾದ ರಿಯಾಝ್ ಫರಂಗಿಪೇಟೆ, ಇಲ್ಯಾಸ್ ತುಂಬೆ, ವಿಕ್ಟರ್ ಮಾರ್ಟಿಸ್, ಅನ್ವರ್ ಸಾದಾತ್ ಬಜತ್ತೂರು, ಅಲ್ಫಾನ್ಸ್ ಫ್ರಾಂಕೋ, ಅಕ್ಬರ್ ಬೆಳ್ತಂಗಡಿ, ರಿಯಾಝ್ ಕಡಂಬು, ಮೂನಿಶ್ ಅಲಿ ಬಂಟ್ವಾಳ, ಶಾಕಿರ್ ಅಳಕೆಮಜಲು, ಪುತ್ತೂರು ಕ್ಷೇತ್ರ ಸಮಿತಿ ಅಧ್ಯಕ್ಷ ಇಬ್ರಾಹಿಂ ಸಾಗರ್, ಕಾರ್ಯದರ್ಶಿ ಅಬ್ದುಲ್ ರಹಿಮಾನ್, ಸಿದ್ದಿಕ್ ಕೆ.ಎ, ಹಮೀದ್ ಸಾಲ್ಮರ, ಎಂ.ಎ ರಫೀಕ್ ಸವಣೂರು, ನಸ್ರಿಯಾ ಬೆಳ್ಳಾರೆ ಸೇರಿದಂತೆ ನೂರಾರು ಮಂದಿ ಭಾಗವಹಿಸಿದ್ದರು. ಪಕ್ಷದ ನಾಯಕರು ಭಾಷಣ ಮಾಡಿದರು.
ಸುಳ್ಳು ಕೇಸಿನಲ್ಲಿ ಶಾಫಿ ಬೆಳ್ಳಾರೆಯವರನ್ನು ಜೈಲಿಗಟ್ಟಲಾಗಿದೆ. ಅವರು ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂಬ ದುರುದ್ದೇಶದಿಂದ ಸುಳ್ಳು ಪ್ರಕರಣದಡಿ ಅವರನ್ನು ಸಿಲುಕಿಸಲಾಗಿದೆ. ಆದ್ದರಿಂದ ಶಾಫಿ ಬೆಳ್ಳಾರೆಯವರನ್ನು ಈ ಚುನಾವಣೆಯಲ್ಲಿ ಗೆಲ್ಲಿಸಬೇಕೆಂದು ಮುಖಂಡರು ಕರೆ ನೀಡಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…