ಪುತ್ತೂರು: ಎಸ್’ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಶಾಫಿ ಬೆಳ್ಳಾರೆ ಅವರ ಪರವಾಗಿ ಪಕ್ಷದ ನಾಯಕರು ನಾಮಪತ್ರ ಸಲ್ಲಿಸಿದರು.
ಬುಧವಾರ ಎಪಿಎಂಸಿ ಕಚೇರಿ ಬಳಿಯಿರುವ ಪಕ್ಷದ ಕಚೇರಿ ಬಳಿಯಿಂದ ಸಾವಿರಾರು ಮಂದಿ ಕಾರ್ಯಕರ್ತರ ಜೊತೆ ಮೆರವಣಿಗೆ ಮೂಲಕ ತೆರಳಿದ ನಾಯಕರು, ಶಾಫಿ ಬೆಳ್ಳಾರೆ ಪರವಾಗಿ ನಾಮಪತ್ರ ಸಲ್ಲಿಸಿದರು. ಶಾಫಿ ಬೆಳ್ಳಾರೆಯು ಜೈಲಿನಲ್ಲಿದ್ದು ಈ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರು ನಾಮಪತ್ರ ಸಲ್ಲಿಕೆ ಮಾಡಿದರು.
ಎಸ್’ಡಿಪಿಐ ಮುಖಂಡರಾದ ರಿಯಾಝ್ ಫರಂಗಿಪೇಟೆ, ಇಲ್ಯಾಸ್ ತುಂಬೆ, ವಿಕ್ಟರ್ ಮಾರ್ಟಿಸ್, ಅನ್ವರ್ ಸಾದಾತ್ ಬಜತ್ತೂರು, ಅಲ್ಫಾನ್ಸ್ ಫ್ರಾಂಕೋ, ಅಕ್ಬರ್ ಬೆಳ್ತಂಗಡಿ, ರಿಯಾಝ್ ಕಡಂಬು, ಮೂನಿಶ್ ಅಲಿ ಬಂಟ್ವಾಳ, ಶಾಕಿರ್ ಅಳಕೆಮಜಲು, ಪುತ್ತೂರು ಕ್ಷೇತ್ರ ಸಮಿತಿ ಅಧ್ಯಕ್ಷ ಇಬ್ರಾಹಿಂ ಸಾಗರ್, ಕಾರ್ಯದರ್ಶಿ ಅಬ್ದುಲ್ ರಹಿಮಾನ್, ಸಿದ್ದಿಕ್ ಕೆ.ಎ, ಹಮೀದ್ ಸಾಲ್ಮರ, ಎಂ.ಎ ರಫೀಕ್ ಸವಣೂರು, ನಸ್ರಿಯಾ ಬೆಳ್ಳಾರೆ ಸೇರಿದಂತೆ ನೂರಾರು ಮಂದಿ ಭಾಗವಹಿಸಿದ್ದರು. ಪಕ್ಷದ ನಾಯಕರು ಭಾಷಣ ಮಾಡಿದರು.
ಸುಳ್ಳು ಕೇಸಿನಲ್ಲಿ ಶಾಫಿ ಬೆಳ್ಳಾರೆಯವರನ್ನು ಜೈಲಿಗಟ್ಟಲಾಗಿದೆ. ಅವರು ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂಬ ದುರುದ್ದೇಶದಿಂದ ಸುಳ್ಳು ಪ್ರಕರಣದಡಿ ಅವರನ್ನು ಸಿಲುಕಿಸಲಾಗಿದೆ. ಆದ್ದರಿಂದ ಶಾಫಿ ಬೆಳ್ಳಾರೆಯವರನ್ನು ಈ ಚುನಾವಣೆಯಲ್ಲಿ ಗೆಲ್ಲಿಸಬೇಕೆಂದು ಮುಖಂಡರು ಕರೆ ನೀಡಿದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…