Featured

ಪುತ್ತೂರು : ಕರಾವಳಿ ಬಿಜೆಪಿಯ ಭೀಷ್ಮ ಉರಿಮಜಲು ರಾಮ ಭಟ್ ಪಂಚಭೂತಗಳಲ್ಲಿ ಲೀನ – Vishwanews24

ಪುತ್ತೂರು : ಕರಾವಳಿ ಬಿಜೆಪಿಯ ಭೀಷ್ಮ ಉರಿಮಜಲು ರಾಮ ಭಟ್ ಪಂಚಭೂತಗಳಲ್ಲಿ ಲೀನ ; ಗಣ್ಯರಿಂದ ಅಂತಿಮ ದರ್ಶನ – Vishwanews24

ಪುತ್ತೂರು: ಸೋಮವಾರ ಸಂಜೆ ನಿಧನರಾದ, ನಾಡಿನ ಹಿರಿಯ ರಾಜಕೀಯ ಮುಖಂಡ, ಕರಾವಳಿ ಬಿಜೆಪಿಯ ಭೀಷ್ಮ ಉರಿಮಜಲು ರಾಮ ಭಟ್ ಅವರ ಪಾರ್ಥಿವ ಶರೀರದ ಅಂತಿಮ ಸಂಸ್ಕಾರ ಮಂಗಳವಾರ ನಡೆಯಿತು. ಮಂಗಳವಾರ ಬೆಳಗ್ಗೆ ಅಗಲಿದ ನಾಯಕನ ಪಾರ್ಥೀವ ಶರೀರ ನೆಹರೂನಗರದ ವಿವೇಕಾನಂದ ವಿದ್ಯಾಸಂಸ್ಥೆಗಳ ವಠಾರಕ್ಕೆ ತರಲಾಯಿತು. ಅಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ ಅಂತಿಮ ನಮನ ಸಲ್ಲಿಸಲಾಯಿತು.

ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದ ಗೌಡ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕ ಸಂಜೀವ ಮಠಂದೂರು, ವಿಶ್ವ ಹಿಂದೂ ಪರಿಷತ್ ಮುಖಂಡ ಎಂ.ಬಿ. ಪುರಾಣಿಕ್, ಆರೆಸ್ಸೆಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್, ಮಾಜಿ ಶಾಸಕರಾದ ವಸಂತ ಬಂಗೇರ, ಶಕುಂತಳಾ ಶೆಟ್ಟಿ, ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ ಸೇರಿದಂತೆ ನೂರಾರು ಮಂದಿ ಸಾಮಾಜಿಕ, ರಾಜಕೀಯ, ಧಾರ್ಮಿಕ ಶೈಕ್ಷಣಿಕ ರಂಗದ ಮುಖಂಡರು, ಸಾರ್ವಜನಿಕರು, ಸಂಘ ಸಂಸ್ಥೆಗಳ ಮುಖಂಡರು ನಮನ ಸಲ್ಲಿಸಿದರು.

ಪುತ್ತೂರು, ಸುಳ್ಯ, ಮಂಗಳೂರು, ಕಾಸರಗೋಡು ಸೇರಿದಂತೆ ಕರಾವಳಿಯ ನಾನಾ ಭಾಗಗಳಿಂದ ಬಂದಿದ್ದ ಸಾರ್ವಜನಿಕರು, ಮುಖಂಡರು ಅಂತಿಮ ದರ್ಶನ ಪಡೆದರು. ಮಧ್ಯಾಹ್ನ ಪುತ್ತೂರು ನಗರದ ಶ್ರೀ ಮಹಾಲಿಂಗೇಶ್ವರ ದೇವಳದ ಎದುರಿನ ಮಡಿವಾಳಕಟ್ಟೆ ಎಂಬಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರ ನಡೆಯಿತು. ೯೨ ವರ್ಷಗಳ ಕಾಲ ಸುದೀರ್ಘ ಜೀವನದಲ್ಲಿ ಸಾರ್ವಜನಿಕ ಕ್ಷೇತ್ರಕ್ಕೆ ಅಪಾರ ಸೇವೆ ಸಲ್ಲಿಸಿ ಶುದ್ಧಹಸ್ತ, ಪ್ರಾಮಾಣಿಕ ನೇತಾರ, ಧೀಮಂತ ನಾಯಕ ಎಂಬ ಹೆಸರು ಗಳಿಸಿದ್ದ ಉರಿಮಜಲ್ ರಾಮ ಭಟ್ ಪಂಚಭೂತಗಳಲ್ಲಿ ಲೀನರಾದರು.

Vishwa News 24

Recent Posts

ಉದ್ಯೋಗ ಕೊಡಿಸುವುದಾಗಿ ನಂಬಿಸಿ ವೇಶ್ಯಾವಾಟಿಕೆ : ಪೊಲೀಸರ ದಾಳಿ ; 11 ಮಂದಿಯ ಬಂಧನ – vishwanews24

ಉದ್ಯೋಗ ಕೊಡಿಸುವುದಾಗಿ ನಂಬಿಸಿ ವೇಶ್ಯಾವಾಟಿಕೆ : ಪೊಲೀಸರ ದಾಳಿ ; 11 ಮಂದಿಯ ಬಂಧನ ಮಾನ್ವಿ: ತಾಲೂಕಿನ ಹಿರೇಕೋಟ್ನೆಕಲ್–ಬ್ಯಾಗವಾಟ್ ರಸ್ತೆಯ…

19 seconds ago

ಉಡುಪಿ: ವಾಣಿಜ್ಯ ಮಳಿಗೆಯಲ್ಲಿ ಭೀಕರ  ಅಗ್ನಿ ಅವಘಡ; ಸುಮಾರು 2.5 ಕೋಟಿ ರೂ. ಮೌಲ್ಯದ ಆಸ್ತಿಪಾಸ್ತಿ ನಷ್ಟ – vishwanews24

ಉಡುಪಿ: ವಾಣಿಜ್ಯ ಮಳಿಗೆಯಲ್ಲಿ ಭೀಕರ  ಅಗ್ನಿ ಅವಘಡ; ಸುಮಾರು 2.5 ಕೋಟಿ ರೂ. ಮೌಲ್ಯದ ಆಸ್ತಿಪಾಸ್ತಿ ನಷ್ಟ ಉಡುಪಿ: ನಗರದ…

11 minutes ago

ನಿಟ್ಟೆ ಅಪಘಾತ ಪ್ರಕರಣ : ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಮೃತ್ಯು – vishwanews24

ನಿಟ್ಟೆ ಅಪಘಾತ ಪ್ರಕರಣ : ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಮೃತ್ಯು ಕಾರ್ಕಳ : ನಿಟ್ಟೆಯ ಕಾಲೇಜು ಬಳಿ…

17 minutes ago

ರೈಲ್ವೇ ಪ್ರಯಾಣಿಕರಿಗೆ ಶುಭಸುದ್ದಿ: ಬೆಂಗಳೂರು, ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಮುಹೂರ್ತ ಫಿಕ್ಸ್​ – vishwanews24

ಆಗಸ್ಟ್ 1ರಿಂದ ಬೆಂಗಳೂರು–ಮುಂಬೈ ನಡುವಿನ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರ ಆರಂಭ ಬೆಂಗಳೂರು: ಭಾರಿ ನಿರೀಕ್ಷೆ ಹೊಂದಿದ್ದ ಮತ್ತು…

20 hours ago

ಉಡುಪಿ: ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿಸುವ ಕೆಲಸ ಮಾಡಿದೆ : ಪ್ರಸಾದ್ ರಾಜ್ ಕಾಂಚನ್ – vishwanews24

ಉಡುಪಿ: ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿಸುವ ಕೆಲಸ ಮಾಡಿದೆ :…

20 hours ago

ಪಡುಬಿದ್ರಿ : ಬೈಕ್ ಕಳವು ಪ್ರಕರಣ ; ಓರ್ವನ  ಬಂಧನ – vishwanews24

ಪಡುಬಿದ್ರಿ : ಬೈಕ್ ಕಳವು ಪ್ರಕರಣ - ಓರ್ವನ  ಬಂಧನ ಪಡುಬಿದ್ರಿ,: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬೈಕ್ ಕಳವು…

21 hours ago