Featured

ಪುತ್ತೂರು : ಕರಾವಳಿ ಬಿಜೆಪಿಯ ಭೀಷ್ಮ ಉರಿಮಜಲು ರಾಮ ಭಟ್ ಪಂಚಭೂತಗಳಲ್ಲಿ ಲೀನ – Vishwanews24

ಪುತ್ತೂರು : ಕರಾವಳಿ ಬಿಜೆಪಿಯ ಭೀಷ್ಮ ಉರಿಮಜಲು ರಾಮ ಭಟ್ ಪಂಚಭೂತಗಳಲ್ಲಿ ಲೀನ ; ಗಣ್ಯರಿಂದ ಅಂತಿಮ ದರ್ಶನ – Vishwanews24

ಪುತ್ತೂರು: ಸೋಮವಾರ ಸಂಜೆ ನಿಧನರಾದ, ನಾಡಿನ ಹಿರಿಯ ರಾಜಕೀಯ ಮುಖಂಡ, ಕರಾವಳಿ ಬಿಜೆಪಿಯ ಭೀಷ್ಮ ಉರಿಮಜಲು ರಾಮ ಭಟ್ ಅವರ ಪಾರ್ಥಿವ ಶರೀರದ ಅಂತಿಮ ಸಂಸ್ಕಾರ ಮಂಗಳವಾರ ನಡೆಯಿತು. ಮಂಗಳವಾರ ಬೆಳಗ್ಗೆ ಅಗಲಿದ ನಾಯಕನ ಪಾರ್ಥೀವ ಶರೀರ ನೆಹರೂನಗರದ ವಿವೇಕಾನಂದ ವಿದ್ಯಾಸಂಸ್ಥೆಗಳ ವಠಾರಕ್ಕೆ ತರಲಾಯಿತು. ಅಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ ಅಂತಿಮ ನಮನ ಸಲ್ಲಿಸಲಾಯಿತು.

ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದ ಗೌಡ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕ ಸಂಜೀವ ಮಠಂದೂರು, ವಿಶ್ವ ಹಿಂದೂ ಪರಿಷತ್ ಮುಖಂಡ ಎಂ.ಬಿ. ಪುರಾಣಿಕ್, ಆರೆಸ್ಸೆಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್, ಮಾಜಿ ಶಾಸಕರಾದ ವಸಂತ ಬಂಗೇರ, ಶಕುಂತಳಾ ಶೆಟ್ಟಿ, ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ ಸೇರಿದಂತೆ ನೂರಾರು ಮಂದಿ ಸಾಮಾಜಿಕ, ರಾಜಕೀಯ, ಧಾರ್ಮಿಕ ಶೈಕ್ಷಣಿಕ ರಂಗದ ಮುಖಂಡರು, ಸಾರ್ವಜನಿಕರು, ಸಂಘ ಸಂಸ್ಥೆಗಳ ಮುಖಂಡರು ನಮನ ಸಲ್ಲಿಸಿದರು.

ಪುತ್ತೂರು, ಸುಳ್ಯ, ಮಂಗಳೂರು, ಕಾಸರಗೋಡು ಸೇರಿದಂತೆ ಕರಾವಳಿಯ ನಾನಾ ಭಾಗಗಳಿಂದ ಬಂದಿದ್ದ ಸಾರ್ವಜನಿಕರು, ಮುಖಂಡರು ಅಂತಿಮ ದರ್ಶನ ಪಡೆದರು. ಮಧ್ಯಾಹ್ನ ಪುತ್ತೂರು ನಗರದ ಶ್ರೀ ಮಹಾಲಿಂಗೇಶ್ವರ ದೇವಳದ ಎದುರಿನ ಮಡಿವಾಳಕಟ್ಟೆ ಎಂಬಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರ ನಡೆಯಿತು. ೯೨ ವರ್ಷಗಳ ಕಾಲ ಸುದೀರ್ಘ ಜೀವನದಲ್ಲಿ ಸಾರ್ವಜನಿಕ ಕ್ಷೇತ್ರಕ್ಕೆ ಅಪಾರ ಸೇವೆ ಸಲ್ಲಿಸಿ ಶುದ್ಧಹಸ್ತ, ಪ್ರಾಮಾಣಿಕ ನೇತಾರ, ಧೀಮಂತ ನಾಯಕ ಎಂಬ ಹೆಸರು ಗಳಿಸಿದ್ದ ಉರಿಮಜಲ್ ರಾಮ ಭಟ್ ಪಂಚಭೂತಗಳಲ್ಲಿ ಲೀನರಾದರು.

Vishwa News 24

Recent Posts

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

9 minutes ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

17 minutes ago

ಉಡುಪಿ: ಎಸ್.ಟಿ ಮೋರ್ಚಾದ ನೂತನ ಪದಾಧಿಕಾರಿಗಳಿಗೆ ನಿಯುಕ್ತಿ ಪತ್ರ ವಿತರಣೆ – vishwanews24

ಉಡುಪಿ: ಎಸ್.ಟಿ ಮೋರ್ಚಾದ ನೂತನ ಪದಾಧಿಕಾರಿಗಳಿಗೆ ನಿಯುಕ್ತಿ ಪತ್ರ ವಿತರಣೆ ಉಡುಪಿ: ಭಾರತೀಯ ಜನತಾ ಪಾರ್ಟಿಯ ಎಸ್.ಟಿ ಮೋರ್ಚಾ ಜಿಲ್ಲಾ…

25 minutes ago

ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ ಅಧಿಕೃತವಾಗಿ ಸೇರ್ಪಡೆ – vishwanews24

ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…

3 hours ago

ಮಂಗಳೂರು: ಜೂ.29ರಂದು ವಿಶೇಷ ಸಹಕಾರ ಸಪ್ತಾಹ ಉದ್ಘಾಟನೆ – vishwanews24

ಮಂಗಳೂರು:  ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ…

4 hours ago

ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ – vishwanews24

ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ ಉಡುಪಿ: ಸಹಕಾರ…

4 hours ago