Featured

ಪುತ್ತೂರು : ಕರಾವಳಿ ಬಿಜೆಪಿಯ ಭೀಷ್ಮ ಉರಿಮಜಲು ರಾಮ ಭಟ್ ಪಂಚಭೂತಗಳಲ್ಲಿ ಲೀನ – Vishwanews24

ಪುತ್ತೂರು : ಕರಾವಳಿ ಬಿಜೆಪಿಯ ಭೀಷ್ಮ ಉರಿಮಜಲು ರಾಮ ಭಟ್ ಪಂಚಭೂತಗಳಲ್ಲಿ ಲೀನ ; ಗಣ್ಯರಿಂದ ಅಂತಿಮ ದರ್ಶನ – Vishwanews24

ಪುತ್ತೂರು: ಸೋಮವಾರ ಸಂಜೆ ನಿಧನರಾದ, ನಾಡಿನ ಹಿರಿಯ ರಾಜಕೀಯ ಮುಖಂಡ, ಕರಾವಳಿ ಬಿಜೆಪಿಯ ಭೀಷ್ಮ ಉರಿಮಜಲು ರಾಮ ಭಟ್ ಅವರ ಪಾರ್ಥಿವ ಶರೀರದ ಅಂತಿಮ ಸಂಸ್ಕಾರ ಮಂಗಳವಾರ ನಡೆಯಿತು. ಮಂಗಳವಾರ ಬೆಳಗ್ಗೆ ಅಗಲಿದ ನಾಯಕನ ಪಾರ್ಥೀವ ಶರೀರ ನೆಹರೂನಗರದ ವಿವೇಕಾನಂದ ವಿದ್ಯಾಸಂಸ್ಥೆಗಳ ವಠಾರಕ್ಕೆ ತರಲಾಯಿತು. ಅಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ ಅಂತಿಮ ನಮನ ಸಲ್ಲಿಸಲಾಯಿತು.

ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದ ಗೌಡ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕ ಸಂಜೀವ ಮಠಂದೂರು, ವಿಶ್ವ ಹಿಂದೂ ಪರಿಷತ್ ಮುಖಂಡ ಎಂ.ಬಿ. ಪುರಾಣಿಕ್, ಆರೆಸ್ಸೆಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್, ಮಾಜಿ ಶಾಸಕರಾದ ವಸಂತ ಬಂಗೇರ, ಶಕುಂತಳಾ ಶೆಟ್ಟಿ, ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ ಸೇರಿದಂತೆ ನೂರಾರು ಮಂದಿ ಸಾಮಾಜಿಕ, ರಾಜಕೀಯ, ಧಾರ್ಮಿಕ ಶೈಕ್ಷಣಿಕ ರಂಗದ ಮುಖಂಡರು, ಸಾರ್ವಜನಿಕರು, ಸಂಘ ಸಂಸ್ಥೆಗಳ ಮುಖಂಡರು ನಮನ ಸಲ್ಲಿಸಿದರು.

ಪುತ್ತೂರು, ಸುಳ್ಯ, ಮಂಗಳೂರು, ಕಾಸರಗೋಡು ಸೇರಿದಂತೆ ಕರಾವಳಿಯ ನಾನಾ ಭಾಗಗಳಿಂದ ಬಂದಿದ್ದ ಸಾರ್ವಜನಿಕರು, ಮುಖಂಡರು ಅಂತಿಮ ದರ್ಶನ ಪಡೆದರು. ಮಧ್ಯಾಹ್ನ ಪುತ್ತೂರು ನಗರದ ಶ್ರೀ ಮಹಾಲಿಂಗೇಶ್ವರ ದೇವಳದ ಎದುರಿನ ಮಡಿವಾಳಕಟ್ಟೆ ಎಂಬಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರ ನಡೆಯಿತು. ೯೨ ವರ್ಷಗಳ ಕಾಲ ಸುದೀರ್ಘ ಜೀವನದಲ್ಲಿ ಸಾರ್ವಜನಿಕ ಕ್ಷೇತ್ರಕ್ಕೆ ಅಪಾರ ಸೇವೆ ಸಲ್ಲಿಸಿ ಶುದ್ಧಹಸ್ತ, ಪ್ರಾಮಾಣಿಕ ನೇತಾರ, ಧೀಮಂತ ನಾಯಕ ಎಂಬ ಹೆಸರು ಗಳಿಸಿದ್ದ ಉರಿಮಜಲ್ ರಾಮ ಭಟ್ ಪಂಚಭೂತಗಳಲ್ಲಿ ಲೀನರಾದರು.

Vishwa News 24

Recent Posts

ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ – vishwanews24

ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್…

1 minute ago

ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ – vishwanews24

ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ ಮೈಸೂರು: ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ ಎಂದು ಸಚಿವ ಡಾ.…

10 minutes ago

ಮಂಗಳೂರು: ತಂಗಿಯನ್ನು ಕೊಲೆಗೈದ ಪ್ರಕರಣ :ಆರೋಪಿ ಅಣ್ಣನಿಗೆ 4 ವರ್ಷ ಜೈಲುಶಿಕ್ಷೆ – vishwanews24

ಮಂಗಳೂರು: ತಂಗಿಯನ್ನು ಕೊಲೆಗೈದ ಪ್ರಕರಣ :ಆರೋಪಿ ಅಣ್ಣನಿಗೆ 4 ವರ್ಷ ಜೈಲುಶಿಕ್ಷೆ ಮಂಗಳೂರು : ಕ್ಷುಲ್ಲಕ ಕಾರಣಕ್ಕಾಗಿ ತನ್ನ ಸ್ವಂತ…

24 minutes ago

ಉಡುಪಿ:  ಸೆ. 8 ರಂದು ಕ್ರೈಸ್ತರ ಮೊಂತಿ ಫೆಸ್ತ್ ಗೆ ಸರ್ಕಾರಿ ರಜೆ ನೀಡುವಂತೆ ಸಿಎಂ ಗೆ ಕಥೊಲಿಕ್ ಸಭಾ ಮನವಿ – vishwanews24

ಉಡುಪಿ:  ಸೆ. 8 ರಂದು ಕ್ರೈಸ್ತರ ಮೊಂತಿ ಫೆಸ್ತ್ ಗೆ ಸರ್ಕಾರಿ ರಜೆ ನೀಡುವಂತೆ ಸಿಎಂ ಗೆ ಕಥೊಲಿಕ್ ಸಭಾ…

54 minutes ago

ಭಾರತ್ ಜೋಡೋ ಯುವ ಸಂಘಕ್ಕೆ ನೋಂದಣಿ – vishwanews24

ಭಾರತ್ ಜೋಡೋ ಯುವ ಸಂಘಕ್ಕೆ ನೋಂದಣಿ ಮಂಗಳೂರು,: ಯುವಜನರಲ್ಲಿ ಕ್ರೀಡೆ, ಸಂಸ್ಕøತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಸಾಮಾಜಿಕ ಸಾಮರಸ್ಯವನ್ನು…

59 minutes ago

ಉಡುಪಿ: ಬಹು ಸಂಖ್ಯಾತ ಹಿಂದೂಗಳಿಗೆ ಈ ಸರ್ಕಾರದಲ್ಲಿ ರಕ್ಷಣೆಯೇ ಇಲ್ಲ : ಯಶ್ಪಾಲ್ ಸುವರ್ಣ ಆಕ್ರೋಶ – vishwanews24

ಉಡುಪಿ: ಬಹು ಸಂಖ್ಯಾತ ಹಿಂದೂಗಳಿಗೆ ಈ ಸರ್ಕಾರದಲ್ಲಿ ರಕ್ಷಣೆಯೇ ಇಲ್ಲ : ಯಶ್ಪಾಲ್ ಸುವರ್ಣ ಆಕ್ರೋಶ ಉಡುಪಿ: ರಾಜ್ಯ ಕಾಂಗ್ರೆಸ್…

1 hour ago