ಪುತ್ತೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಈಗಾಗಲೇ ಅಭ್ಯರ್ಥಿಗಳ ಎರಡು ಪಟ್ಟಿ ಬಿಡುಗಡೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಿಗೆ ಇನ್ನು ಹೆಸರು ಘೋಷಣೆಯಾಗಿಲ್ಲ. ಆದರೆ ಇದೀಗ ಪುತ್ತೂರು ಕ್ಷೇತ್ರದ ಟಿಕೆಟ್ ಹಂಚಿಕೆ ಫೈನಲ್ ಆಗಿದೆ ಎಂದು ವರದಿಯಾಗಿದೆ.
ಪುತ್ತೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಹೆಸರು ಅಧಿಕೃತವಾಗಿದೆ ಎಂದು ವರದಿಯಾಗಿದೆ. ಈ ಬಗ್ಗೆ ಪಕ್ಷದ ಮೂಲಗಳು ಖಚಿತಪಡಿಸಿವೆ.
ಕಾಂಗ್ರೆಸ್ ನಿಂದ ಹಲವಾರು ಮಂದಿ ಟಿಕೆಟ್ ಆಕಾಂಕ್ಷಿಗಳಿದ್ದರು. ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಕಾವು ಹೇಮನಾಥ ಶೆಟ್ಟಿ ಕೂಡಾ ಆಕಾಂಕ್ಷಿಗಳಾಗಿದ್ದರು.
ಅಶೋಕ್ ಕುಮಾರ್ ರೈ ಅವರು ಈ ಹಿಂದೆ ಎರಡು ಬಾರಿ ಬಿಜೆಪಿಯಿಂದ ಟಿಕೆಟ್ ಗೆ ಪ್ರಯತ್ನಿಸಿದ್ದರು. ಇತ್ತೀಚಿನ ದಿನಗಳಲ್ಲಿ ಅವರು ಬಿಜೆಪಿ ತೊರೆದು ಕೈ ಪಾಳಯ ಸೇರಿದ್ದರು.
ಬಿಜೆಪಿ ಇದುವರೆಗೆ ಟಿಕೆಟ್ ಅಂತಿಮಗೊಳಿಸಿಲ್ಲ. ಎಸ್ ಡಿಪಿಐಯಿಂದ ಶಾಫಿ ಬೆಳ್ಳಾರೆ ಮತ್ತು ಆಮ್ ಆದ್ಮಿಯಿಂದ ಡಾ ವಿಶುಕುಮಾರ್ ಸ್ಪರ್ಧೆ ಮಾಡುತ್ತಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…