ಪುತ್ತೂರು : ಕಾರಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಖಾಸಗಿ ಬಸ್ ; ಮೂವರು ಗಂಭೀರ ಗಾಯ – vishwanews24
ಪುತ್ತೂರು : ಕಾರಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಖಾಸಗಿ ಬಸ್ ; ಮೂವರು ಗಂಭೀರ ಗಾಯ
ಪುತ್ತೂರು : ಖಾಸಗಿ ಬಸ್ ಒಂದು ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರಿನ ಮುರ ಎಂಬಲ್ಲಿ ನಡೆದಿದೆ.
ಗಾಯಗೊಂಡವರನ್ನು ಅಂಡೆಪುಣಿ ಈಶ್ವರ ಭಟ್ ಮತ್ತು ಅವರ ಮಗಳು ಅಪೂರ್ವ ಹಾಗು ಮೊಮ್ಮಗಳು ಎಂದು ಗುರುತಿಸಲಾಗಿದೆ.
ಬಂಟ್ವಾಳ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು; ಚಾಲಕ ಸಾವು – vishwanews24
ಈಶ್ವರ್ ಭಟ್ ಅಂಡೆಪುನಿ ಅವರ ಮನೆಯಲ್ಲಿ ಕಾರ್ಯಕ್ರಮವಿತ್ತು. ಇದರಲ್ಲಿ ಭಾಗವಹಿಸಲು ಅವರ ಮಗಳು ಅಪೂರ್ವ ಹಾಗೂ ಮೊಮ್ಮಗಳು ಬೆಂಗಳೂರಿನಿಂದ ಪುತ್ತೂರಿಗೆ ಬಸ್ಸಿನಲ್ಲಿ ಬಂದಿದ್ದರು. ಈಶ್ವರ್ ಭಟ್ ಅವರು ಪುತ್ತೂರು ಪೇಟೆಯಿಂದ ಇವರನ್ನು ತಮ್ಮ ವ್ಯಾಗನರ್ ಕಾರಿನಲ್ಲಿ ಮನೆಗೆ ಕರೆದುಕೊಂಡು ಹೋಗುತಿದ್ದರು. ಈ ವೇಳೆ ಮುರ ಜಂಕ್ಷನ್ ಬಳಿ ಕಾರಿಗೆ ಹಿಂಬದಿಯಿಂದ ಖಾಸಗಿ ಬಸ್ ಢಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ.
ಅಪಘಾತ ನಡೆದ ಕೂಡಲೇ ಸ್ಥಳೀಯರು ತಕ್ಷಣ ಕಾರ್ಯಪ್ರವೃತ್ತರಾಗಿ, ನಜ್ಜುಗುಜ್ಜಾಗಿದ್ದ ಕಾರಿನಿಂದ ಗಾಯಾಳುಗಳನ್ನು ಹೊರತೆಗೆದಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕನ್ನಡ ಕಿರುತೆರೆಯ ಖ್ಯಾತ ನಟ ಶ್ರೀಧರ್ ನಾಯಕ್ ನಿಧನ – vishwanews24
