Featured

ಪುತ್ತೂರು : ಕಾರಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಖಾಸಗಿ ಬಸ್ ; ಮೂವರು ಗಂಭೀರ ಗಾಯ – vishwanews24

ಪುತ್ತೂರು : ಕಾರಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಖಾಸಗಿ ಬಸ್ ; ಮೂವರು ಗಂಭೀರ ಗಾಯ

ಪುತ್ತೂರು : ಖಾಸಗಿ ಬಸ್ ಒಂದು ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರಿನ ಮುರ ಎಂಬಲ್ಲಿ ನಡೆದಿದೆ.

ಗಾಯಗೊಂಡವರನ್ನು ಅಂಡೆಪುಣಿ ಈಶ್ವರ ಭಟ್ ಮತ್ತು ಅವರ ಮಗಳು ಅಪೂರ್ವ ಹಾಗು ಮೊಮ್ಮಗಳು ಎಂದು ಗುರುತಿಸಲಾಗಿದೆ.

ಈಶ್ವರ್ ಭಟ್ ಅಂಡೆಪುನಿ ಅವರ ಮನೆಯಲ್ಲಿ ಕಾರ್ಯಕ್ರಮವಿತ್ತು. ಇದರಲ್ಲಿ ಭಾಗವಹಿಸಲು ಅವರ ಮಗಳು ಅಪೂರ್ವ ಹಾಗೂ ಮೊಮ್ಮಗಳು ಬೆಂಗಳೂರಿನಿಂದ ಪುತ್ತೂರಿಗೆ ಬಸ್ಸಿನಲ್ಲಿ ಬಂದಿದ್ದರು. ಈಶ್ವರ್ ಭಟ್ ಅವರು ಪುತ್ತೂರು ಪೇಟೆಯಿಂದ ಇವರನ್ನು ತಮ್ಮ ವ್ಯಾಗನರ್ ಕಾರಿನಲ್ಲಿ ಮನೆಗೆ ಕರೆದುಕೊಂಡು ಹೋಗುತಿದ್ದರು. ಈ ವೇಳೆ ಮುರ ಜಂಕ್ಷನ್ ಬಳಿ ಕಾರಿಗೆ ಹಿಂಬದಿಯಿಂದ ಖಾಸಗಿ ಬಸ್ ಢಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ.

ಅಪಘಾತ ನಡೆದ ಕೂಡಲೇ ಸ್ಥಳೀಯರು ತಕ್ಷಣ ಕಾರ್ಯಪ್ರವೃತ್ತರಾಗಿ, ನಜ್ಜುಗುಜ್ಜಾಗಿದ್ದ ಕಾರಿನಿಂದ ಗಾಯಾಳುಗಳನ್ನು ಹೊರತೆಗೆದಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

3 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

3 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

4 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

4 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

6 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

6 hours ago