ಪುತ್ತೂರು : ರಾಷ್ಟ್ರ ಭಕ್ತರ ಹಾಗೂ ದೇಶ ದ್ರೋಹಿಗಳ ನಡುವಿನ ಚುನಾವಣೆಯಾಗಿದ್ದು, ರಾಷ್ಟ್ರದಲ್ಲಿ ಹಿಂದುತ್ವವನ್ನು ಪ್ರತಿಷ್ಠಾಪನೆ ಮಾಡಲು 2024ರ ಚುನಾವಣೆ ಪ್ರಾಮುಖ್ಯತೆಯನ್ನು ಪಡೆದಿದೆ. ರಾಷ್ಟ್ರದ ಚಿಂತನೆ ಇಲ್ಲದೆ ಆಡಳಿತ ಮಾಡಬೇಕೆಂಬ ಕಲ್ಪನೆಯನ್ನು ಕಾಂಗ್ರೆಸ್ ಇಟ್ಟುಕೊಂಡಿದೆ. ವ್ಯಕ್ತಿ ಮುಖ್ಯವಾಗಿರದೆ ಸಮಾಜದ ಕೆಲಸವನ್ನು ಒಗ್ಗಟ್ಟಿನಿಂದ ಮಾಡಬೇಕು. ಹಿಂದುತ್ವದ ವಿಚಾರಧಾರೆಯಲ್ಲಿ ಬದುಕು ನಡೆಸಿದರೆ ವಿಶ್ವದಲ್ಲಿ ಶಾಂತಿ ನೆಲೆಸಲು ಸಾಧ್ಯವಾಗುತ್ತದೆ. ಕಾರ್ಯಕರ್ತರ ಬೆಂಬಲ ಇಲ್ಲದೆ ಜಿಲ್ಲೆಯಲ್ಲಿ ಯಾವುದೇ ಕೆಲಸ ಕಾರ್ಯ ಮಾಡಲು ಸಾಧ್ಯವಿಲ್ಲ ಎಂದು ಬಿಜೆಪಿ ಪಕ್ಷದ ಅಭ್ಯರ್ಥಿ ಬ್ರಿಜೇಷ್ ಚೌಟ ಹೇಳಿದರು. ಪುತ್ತೂರಿನ ಜೈನ ಭವನ ದಲ್ಲಿ ಭಾರತೀಯ ಜನತಾ ಪಾರ್ಟಿಯ ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ತುಳುನಾಡಿನ ದೈವ ದೇವರ ಆಶೀರ್ವಾದಿಂದ ಟಿಕೆಟ್ ಲಭಿಸಿದೆ. ಯಾವುದೇ ಭ್ರಮೆಯಲ್ಲಿ ಇರದೆ, ಹಿಂದುತ್ವದ ವಿಚಾರದಲ್ಲಿ ಸ್ಪಷ್ಟವಾಗಿದ್ದೇವೆ. ದಕ್ಷಿಣ ಕನ್ನಡ ದೇವರು ಪ್ರೀತಿಸುವ ಜಿಲ್ಲೆಯಾಗಿದ್ದು, ಇಲ್ಲಿನ ಜನರು ಸಾಮರ್ಥ್ಯವಂತರಾಗಿದ್ದಾರೆ. ಮುಂದಿನ 25ವರ್ಷ ಭಾರತದ ಅಮೃತ ಕಾಲವಾಗಿದ್ದು, ಜನರಿಗೆ ಸಾಧನೆಗಳಿಗೆ ವೇದಿಕೆ ನೀಡುವ ಕಾರ್ಯ ಮಾಡಲಾಗುವುದು. ಕಾರ್ಯಕರ್ತರನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸಲಾಗುವುದು. ಕಾರ್ಯಕರ್ತರ ಚುನಾವಣೆಯಾಗಿದ್ದು, ಮೋದಿಗೆ ಶಕ್ತಿ ತುಂಬುವ ಕಾರ್ಯವಾಗಬೇಕು. ಕನಸಿನ ದಕ್ಷಿಣ ಕನ್ನಡ ನಿರ್ಮಾಣವನ್ನು ಮಾಡುವ ನಿಟ್ಟಿನಲ್ಲಿ ಎಲ್ಲರ ಸಹಕಾರಬೇಕು ಎಂದರು.
ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಮಾತನಾಡಿ ಸಾಮಾಜಿಕ ಜವಾಬ್ದಾರಿಯನ್ನು ಅರಿತು ಚುನಾವಣೆಯ ಕೆಲಸ ಕಾರ್ಯದಲ್ಲಿ ತೊಡಗಿಕೊಳ್ಳಬೇಕು. ಸಮರ್ಥ ಅಭ್ಯರ್ಥಿಯನ್ನು ಕ್ಷೇತ್ರಕ್ಕೆ ನೀಡಿದ್ದು, 4ಲಕ್ಷ ಮತದ ಅಂತರದಲ್ಲಿ ಗೆಲ್ಲಿಸಿಕೊಡಬೇಕಾಗಿದೆ. ಹತ್ತು ವರ್ಷದಿಂದ ಪಕ್ಷದ ಯೋಚನೆಗಳೊಂದಿಗೆ ದೇಶವನ್ನು ಮುನ್ನಡೆಸುವ ಕಾರ್ಯವನ್ನು ನರೇಂದ್ರ ಮೋದಿಯವರು ಮಾಡಿದ್ದಾರೆ. ಮುಂದೆಯೂ ಮೋದಿಯವರು ಹಿಂದುತ್ವದ ನೆಲೆಗಟ್ಟಿನಲ್ಲಿ ದೇಶವನ್ನು ಮುನ್ನಡೆಸುವಂತಾಗಬೇಕು. ದಿನದ ಮೂರು ಗಂಟೆ ಪಕ್ಷದ ಕೆಲಸಕ್ಕಾಗಿ ಇಡುವ ಮೂಲಕ ಕೇಂದ್ರ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯವಾಗಬೇಕು. ಮುಂದಿನ ವಿಧಾನ ಸಭಾ ಕ್ಷೇತ್ರ ಬಿಜೆಪಿಯದ್ದು ಎಂಬ ರೀತಿಯಲ್ಲಿ ತೊಡಗಿಕೊಳ್ಳಬೇಕು ಎಂದು ತಿಳಿಸಿದರು
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…