ಪುತ್ತೂರು: ಇಲ್ಲಿನ ಖಾಸಗಿ ಪದವಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಆ ದೃಶ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಪ್ರಕರಣಕ್ಕೆ ಸಂಬಧಿಸಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿರುವ ಅದೇ ಕಾಲೇಜ್ನ ಐವರು ವಿದ್ಯಾರ್ಥಿಗಳ ಪೈಕಿ ಓರ್ವ ವಿದ್ಯಾರ್ಥಿಗೆ ಹೈಕೋರ್ಟ್ ಜಾಮಿನು ಮಂಜೂರುಗೊಳಿಸಿದೆ.
ಬಂಟ್ವಾಳ ತಾಲೂಕಿನ ಪೆರ್ನೆ ನಿವಾಸಿ ಪ್ರಜ್ವಲ್ (19) ಜಾಮೀನು ಪಡೆದ ಆರೋಪಿ.
ಆರೋಪಿ ವಿದ್ಯಾರ್ಥಿಗಳು ತಮ್ಮದೇ ಕಾಲೇಜ್ನ ವಿದ್ಯಾರ್ಥಿನಿಯನ್ನು ಮನೆಗೆ ತಲುಪಿಸುವುದಾಗಿ ಹೇಳಿ ಕಾರಿನಲ್ಲಿ ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿ ಕಠಾರ ಎಂಬಲ್ಲಿರುವ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅಲ್ಲಿ ಕಾರಿನಲ್ಲಿಯೇ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಈ ದೃಶ್ಯವನ್ನು ಮೊಬೈಲ್ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ಜುಲೈಯಲ್ಲಿ ಅತ್ಯಾಚಾರ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದನ್ನು ಅರಿತ ಪುತ್ತೂರು ಮಹಿಳಾ ಠಾಣೆಯ ಪೊಲೀಸರು ಸುಮೊಟೋ ಕೇಸು ದಾಖಲಿಸಿದ್ದು, ಬಳಿಕ ವಿದ್ಯಾರ್ಥಿನಿ ನೀಡಿದ ದೂರಿನಂತೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಐವರು ವಿದ್ಯಾರ್ಥಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳಾದ ಬಜತ್ತೂರು ಗ್ರಾಮದ ಗಾಣದಮೂಲೆ ನಿವಾಸಿ ಗುರುನಂದನ್ (19), ಪೆರ್ನೆ ನಿವಾಸಿ ಪ್ರಜ್ವಲ್ (19), ಪೆರ್ನೆ ಕಡಂಬು ನಿವಾಸಿ ಕಿಶನ್ (19), ಆರ್ಯಾಪು ಗ್ರಾಮದ ಪಿಲಿಗುಂಡ ನಿವಾಸಿ ಸುನಿಲ್ (19) ಬಂಟ್ವಾಳ ಬರಿಮಾರು ಗ್ರಾಮದ ಪ್ರಖ್ಯಾತ್ (19) ಎಂಬವರನ್ನು ಪೊಲೀಸರು ಬಂಧಿಸಿದ್ದರು.
ಇದೀಗ ಬಂಧಿತ ಐವರು ವಿದ್ಯಾರ್ಥಿಗಳ ಪೈಕಿ ಪ್ರಜ್ವಲ್ಗೆ ಹೈಕೋರ್ಟ್ ಜಾಮೀನು ಒದಗಿಸಿದ್ದು, ನಾಲ್ವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಅವರ ಜಾಮೀನು ಅರ್ಜಿಯ ವಿಚಾರಣೆ ಮುಂದಿನ ವಾರ ಹೈಕೋರ್ಟ್ನಲ್ಲಿ ನಡೆಯಲಿದೆ.
ಆರೋಪಿಯ ಪರವಾಗಿ ಹೈಕೋರ್ಟ್ ವಕೀಲರಾದ ಅರುಣ್ ಶ್ಯಾಮ್ ಮತ್ತು ಮಹೇಶ್ ಕಜೆ ವಾದಿಸಿದ್ದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…