ಪುತ್ತೂರು: ಇಲ್ಲಿನ ಖಾಸಗಿ ಪದವಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಆ ದೃಶ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಪ್ರಕರಣಕ್ಕೆ ಸಂಬಧಿಸಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿರುವ ಅದೇ ಕಾಲೇಜ್ನ ಐವರು ವಿದ್ಯಾರ್ಥಿಗಳ ಪೈಕಿ ಓರ್ವ ವಿದ್ಯಾರ್ಥಿಗೆ ಹೈಕೋರ್ಟ್ ಜಾಮಿನು ಮಂಜೂರುಗೊಳಿಸಿದೆ.
ಬಂಟ್ವಾಳ ತಾಲೂಕಿನ ಪೆರ್ನೆ ನಿವಾಸಿ ಪ್ರಜ್ವಲ್ (19) ಜಾಮೀನು ಪಡೆದ ಆರೋಪಿ.
ಆರೋಪಿ ವಿದ್ಯಾರ್ಥಿಗಳು ತಮ್ಮದೇ ಕಾಲೇಜ್ನ ವಿದ್ಯಾರ್ಥಿನಿಯನ್ನು ಮನೆಗೆ ತಲುಪಿಸುವುದಾಗಿ ಹೇಳಿ ಕಾರಿನಲ್ಲಿ ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿ ಕಠಾರ ಎಂಬಲ್ಲಿರುವ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅಲ್ಲಿ ಕಾರಿನಲ್ಲಿಯೇ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಈ ದೃಶ್ಯವನ್ನು ಮೊಬೈಲ್ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ಜುಲೈಯಲ್ಲಿ ಅತ್ಯಾಚಾರ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದನ್ನು ಅರಿತ ಪುತ್ತೂರು ಮಹಿಳಾ ಠಾಣೆಯ ಪೊಲೀಸರು ಸುಮೊಟೋ ಕೇಸು ದಾಖಲಿಸಿದ್ದು, ಬಳಿಕ ವಿದ್ಯಾರ್ಥಿನಿ ನೀಡಿದ ದೂರಿನಂತೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಐವರು ವಿದ್ಯಾರ್ಥಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳಾದ ಬಜತ್ತೂರು ಗ್ರಾಮದ ಗಾಣದಮೂಲೆ ನಿವಾಸಿ ಗುರುನಂದನ್ (19), ಪೆರ್ನೆ ನಿವಾಸಿ ಪ್ರಜ್ವಲ್ (19), ಪೆರ್ನೆ ಕಡಂಬು ನಿವಾಸಿ ಕಿಶನ್ (19), ಆರ್ಯಾಪು ಗ್ರಾಮದ ಪಿಲಿಗುಂಡ ನಿವಾಸಿ ಸುನಿಲ್ (19) ಬಂಟ್ವಾಳ ಬರಿಮಾರು ಗ್ರಾಮದ ಪ್ರಖ್ಯಾತ್ (19) ಎಂಬವರನ್ನು ಪೊಲೀಸರು ಬಂಧಿಸಿದ್ದರು.
ಇದೀಗ ಬಂಧಿತ ಐವರು ವಿದ್ಯಾರ್ಥಿಗಳ ಪೈಕಿ ಪ್ರಜ್ವಲ್ಗೆ ಹೈಕೋರ್ಟ್ ಜಾಮೀನು ಒದಗಿಸಿದ್ದು, ನಾಲ್ವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಅವರ ಜಾಮೀನು ಅರ್ಜಿಯ ವಿಚಾರಣೆ ಮುಂದಿನ ವಾರ ಹೈಕೋರ್ಟ್ನಲ್ಲಿ ನಡೆಯಲಿದೆ.
ಆರೋಪಿಯ ಪರವಾಗಿ ಹೈಕೋರ್ಟ್ ವಕೀಲರಾದ ಅರುಣ್ ಶ್ಯಾಮ್ ಮತ್ತು ಮಹೇಶ್ ಕಜೆ ವಾದಿಸಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…