ಪುತ್ತೂರು : ಬೆಟ್ಟಂಪಾಡಿ ಗ್ರಾಮದ ಗುಮ್ಮಟ್ಟೆಗದ್ದೆಯಲ್ಲಿ ಸೋಮವಾರ, ಕಾಳುಮೆಣಸು ಕೀಳುವಾಗ ತೆಂಗಿನ ಮರದಿಂದ ಬಿದ್ದು ನಿವೃತ್ತ ಮುಖ್ಯೋಪಾಧ್ಯಾಯರು ಸಾವನ್ನಪ್ಪಿದ್ದಾರೆ.
ಮೃತರನ್ನು ಬೆಟ್ಟಂಪಾಡಿ ಗ್ರಾಮದ ಗುಮ್ಮಟ್ಟೆಗದ್ದೆ ನಿವಾಸಿ ನಾರಾಯಣ ನಾಯಕ್ ಪೈಂಟಿಮುಗೇರು ಎಂದು ಗುರುತಿಸಲಾಗಿದೆ. ಮನೆಯ ಮುಂದೆ ತೆಂಗಿನ ಮರದ ಮೇಲೆ ಬೆಳೆದಿದ್ದ ಕಾಳು ಮೆಣಸು ಕೀಳಲು ಅಲ್ಯೂಮಿನಿಯಂ ಏಣಿ ಹತ್ತುತ್ತಿದ್ದಾಗ ಜಾರಿ ಏಣಿಯೊಂದಿಗೆ ಬಿದ್ದಿದ್ದಾರೆ.
ಕೆಳಗೆ ಬಿದ್ದಾಗ ನಾರಾಯಣ ನಾಯಕ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಮಾರ್ಗಮಧ್ಯೆ ಅವರು ಮೃತಪಟ್ಟರು. ಅವರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.
ನಾರಾಯಣ ನಾಯಕ್ ಬಡಗನ್ನೂರಿನ ಸರ್ಕಾರಿ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ನಿವೃತ್ತರಾಗಿದ್ದರು. ಪಡುಮಲೆ ಶ್ರೀ ಕೋವೆ ಶಾಸ್ತಾರ ವಿಷ್ಣು ಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು ಮತ್ತು ವಿವಿಧ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…